Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...