Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...