Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...