Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...