Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...