Homeಕರ್ನಾಟಕಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಕೃಷ್ಣಬೈರೇಗೌಡ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡುತ್ತಾರೆ. ಇಲ್ಲಿ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ’ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ಐಶಾರಾಮಿ ಜೆಟ್ ಬಳಸಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ‘ಐಶಾರಾಮಿ ಜೆಟ್ ಬಳಸುವ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಪ್ರಶ್ನಿಸಿದ್ದರು.

ವಿಪಕ್ಷ ನಾಯಕನ ಏಟಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರೇ, ಮೋದಿಯವರು ಓಡಾಡುವ ಐಷಾರಾಮಿ ವಿಮಾನದ ಬೆಲೆ ಎಷ್ಟು ತಿಳಿದಿದೆಯೇ? ಹಿಂದಿನ ಪ್ರಧಾನಿಗಳು ವಾಯುಪಡೆಯ ವಿಮಾನ ಬಳಸುತ್ತಿದ್ದರು, ಮೋದಿಗೆ ₹8000 ಕೋಟಿಯ ವಿಮಾನದ ಅಗತ್ಯ ಬಿದ್ದಿದ್ದೇಕೆ? ಮಣಿಪುರ ಹೊತ್ತಿ ಉರಿಯುತ್ತಿರುವಾಗ ಮೋದಿ ರೋಡ್ ಶೋಕಿ ಮಾಡಿಕೊಂಡು ತಿರುಗಿದ್ದೇಕೆ? ಅಂದಹಾಗೆ ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರಶ್ನಿಸಿದೆ.

ಆಪರೇಷನ್ ಕಮಲಕ್ಕೆ ಬಳಸಿದ ಹಣ ಬಿಜೆಪಿಗರು ಕೂಲಿ ಮಾಡಿ ಕೂಡಿಟ್ಟದ್ದಲ್ಲ:

ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ, ‘ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ’ ಎಂದು ಪ್ರಶ್ನಿಸಿದ್ದಾರೆ.

ಘಟನೆ ಹಿನ್ನೆಲೆ:

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿಗೆ ಮರಳಲು ಖಾಸಗಿ ಜೆಟ್ ಬಳಸಿದ್ದರು. ಪ್ರಯಾಣದ ಸಂದರ್ಭದಲ್ಲಿನ ಫೋಟೋ ಹಾಗೂ ವಿಡಿಯೋಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ‘ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚಿನ ರೈತರ ಜಮೀನಿನಲ್ಲಿ ಬೆಳೆ ನಷ್ಟವಾಗಿದ್ದು, ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗ್ತಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಹಾಗೂ ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

‘ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ; ಎಂದು ಕಿಡಿಕಾರಿದ್ದ ಅಶೋಕ್, ‘ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಜಮೀರ್ ಟ್ವೀಟ್ ಮಾಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ; ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...