Homeಕರ್ನಾಟಕಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಕೃಷ್ಣಬೈರೇಗೌಡ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡುತ್ತಾರೆ. ಇಲ್ಲಿ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ’ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ಐಶಾರಾಮಿ ಜೆಟ್ ಬಳಸಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ‘ಐಶಾರಾಮಿ ಜೆಟ್ ಬಳಸುವ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಪ್ರಶ್ನಿಸಿದ್ದರು.

ವಿಪಕ್ಷ ನಾಯಕನ ಏಟಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರೇ, ಮೋದಿಯವರು ಓಡಾಡುವ ಐಷಾರಾಮಿ ವಿಮಾನದ ಬೆಲೆ ಎಷ್ಟು ತಿಳಿದಿದೆಯೇ? ಹಿಂದಿನ ಪ್ರಧಾನಿಗಳು ವಾಯುಪಡೆಯ ವಿಮಾನ ಬಳಸುತ್ತಿದ್ದರು, ಮೋದಿಗೆ ₹8000 ಕೋಟಿಯ ವಿಮಾನದ ಅಗತ್ಯ ಬಿದ್ದಿದ್ದೇಕೆ? ಮಣಿಪುರ ಹೊತ್ತಿ ಉರಿಯುತ್ತಿರುವಾಗ ಮೋದಿ ರೋಡ್ ಶೋಕಿ ಮಾಡಿಕೊಂಡು ತಿರುಗಿದ್ದೇಕೆ? ಅಂದಹಾಗೆ ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರಶ್ನಿಸಿದೆ.

ಆಪರೇಷನ್ ಕಮಲಕ್ಕೆ ಬಳಸಿದ ಹಣ ಬಿಜೆಪಿಗರು ಕೂಲಿ ಮಾಡಿ ಕೂಡಿಟ್ಟದ್ದಲ್ಲ:

ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ, ‘ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ’ ಎಂದು ಪ್ರಶ್ನಿಸಿದ್ದಾರೆ.

ಘಟನೆ ಹಿನ್ನೆಲೆ:

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿಗೆ ಮರಳಲು ಖಾಸಗಿ ಜೆಟ್ ಬಳಸಿದ್ದರು. ಪ್ರಯಾಣದ ಸಂದರ್ಭದಲ್ಲಿನ ಫೋಟೋ ಹಾಗೂ ವಿಡಿಯೋಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ‘ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚಿನ ರೈತರ ಜಮೀನಿನಲ್ಲಿ ಬೆಳೆ ನಷ್ಟವಾಗಿದ್ದು, ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗ್ತಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಹಾಗೂ ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

‘ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ; ಎಂದು ಕಿಡಿಕಾರಿದ್ದ ಅಶೋಕ್, ‘ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಜಮೀರ್ ಟ್ವೀಟ್ ಮಾಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ; ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...