Homeಕರ್ನಾಟಕಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಕೃಷ್ಣಬೈರೇಗೌಡ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡುತ್ತಾರೆ. ಇಲ್ಲಿ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ’ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ಐಶಾರಾಮಿ ಜೆಟ್ ಬಳಸಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ‘ಐಶಾರಾಮಿ ಜೆಟ್ ಬಳಸುವ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಪ್ರಶ್ನಿಸಿದ್ದರು.

ವಿಪಕ್ಷ ನಾಯಕನ ಏಟಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರೇ, ಮೋದಿಯವರು ಓಡಾಡುವ ಐಷಾರಾಮಿ ವಿಮಾನದ ಬೆಲೆ ಎಷ್ಟು ತಿಳಿದಿದೆಯೇ? ಹಿಂದಿನ ಪ್ರಧಾನಿಗಳು ವಾಯುಪಡೆಯ ವಿಮಾನ ಬಳಸುತ್ತಿದ್ದರು, ಮೋದಿಗೆ ₹8000 ಕೋಟಿಯ ವಿಮಾನದ ಅಗತ್ಯ ಬಿದ್ದಿದ್ದೇಕೆ? ಮಣಿಪುರ ಹೊತ್ತಿ ಉರಿಯುತ್ತಿರುವಾಗ ಮೋದಿ ರೋಡ್ ಶೋಕಿ ಮಾಡಿಕೊಂಡು ತಿರುಗಿದ್ದೇಕೆ? ಅಂದಹಾಗೆ ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರಶ್ನಿಸಿದೆ.

ಆಪರೇಷನ್ ಕಮಲಕ್ಕೆ ಬಳಸಿದ ಹಣ ಬಿಜೆಪಿಗರು ಕೂಲಿ ಮಾಡಿ ಕೂಡಿಟ್ಟದ್ದಲ್ಲ:

ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ, ‘ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ’ ಎಂದು ಪ್ರಶ್ನಿಸಿದ್ದಾರೆ.

ಘಟನೆ ಹಿನ್ನೆಲೆ:

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿಗೆ ಮರಳಲು ಖಾಸಗಿ ಜೆಟ್ ಬಳಸಿದ್ದರು. ಪ್ರಯಾಣದ ಸಂದರ್ಭದಲ್ಲಿನ ಫೋಟೋ ಹಾಗೂ ವಿಡಿಯೋಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ‘ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚಿನ ರೈತರ ಜಮೀನಿನಲ್ಲಿ ಬೆಳೆ ನಷ್ಟವಾಗಿದ್ದು, ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗ್ತಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಹಾಗೂ ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

‘ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ; ಎಂದು ಕಿಡಿಕಾರಿದ್ದ ಅಶೋಕ್, ‘ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಜಮೀರ್ ಟ್ವೀಟ್ ಮಾಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ; ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...