Homeಕರ್ನಾಟಕಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಕೃಷ್ಣಬೈರೇಗೌಡ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡುತ್ತಾರೆ. ಇಲ್ಲಿ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ’ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ಐಶಾರಾಮಿ ಜೆಟ್ ಬಳಸಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ‘ಐಶಾರಾಮಿ ಜೆಟ್ ಬಳಸುವ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಪ್ರಶ್ನಿಸಿದ್ದರು.

ವಿಪಕ್ಷ ನಾಯಕನ ಏಟಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರೇ, ಮೋದಿಯವರು ಓಡಾಡುವ ಐಷಾರಾಮಿ ವಿಮಾನದ ಬೆಲೆ ಎಷ್ಟು ತಿಳಿದಿದೆಯೇ? ಹಿಂದಿನ ಪ್ರಧಾನಿಗಳು ವಾಯುಪಡೆಯ ವಿಮಾನ ಬಳಸುತ್ತಿದ್ದರು, ಮೋದಿಗೆ ₹8000 ಕೋಟಿಯ ವಿಮಾನದ ಅಗತ್ಯ ಬಿದ್ದಿದ್ದೇಕೆ? ಮಣಿಪುರ ಹೊತ್ತಿ ಉರಿಯುತ್ತಿರುವಾಗ ಮೋದಿ ರೋಡ್ ಶೋಕಿ ಮಾಡಿಕೊಂಡು ತಿರುಗಿದ್ದೇಕೆ? ಅಂದಹಾಗೆ ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರಶ್ನಿಸಿದೆ.

ಆಪರೇಷನ್ ಕಮಲಕ್ಕೆ ಬಳಸಿದ ಹಣ ಬಿಜೆಪಿಗರು ಕೂಲಿ ಮಾಡಿ ಕೂಡಿಟ್ಟದ್ದಲ್ಲ:

ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ, ‘ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ’ ಎಂದು ಪ್ರಶ್ನಿಸಿದ್ದಾರೆ.

ಘಟನೆ ಹಿನ್ನೆಲೆ:

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿಗೆ ಮರಳಲು ಖಾಸಗಿ ಜೆಟ್ ಬಳಸಿದ್ದರು. ಪ್ರಯಾಣದ ಸಂದರ್ಭದಲ್ಲಿನ ಫೋಟೋ ಹಾಗೂ ವಿಡಿಯೋಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ‘ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚಿನ ರೈತರ ಜಮೀನಿನಲ್ಲಿ ಬೆಳೆ ನಷ್ಟವಾಗಿದ್ದು, ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗ್ತಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಹಾಗೂ ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

‘ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ; ಎಂದು ಕಿಡಿಕಾರಿದ್ದ ಅಶೋಕ್, ‘ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಜಮೀರ್ ಟ್ವೀಟ್ ಮಾಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ; ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...