Homeಮುಖಪುಟಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

’ಕೇವಲ ಮನರಂಜನೆ ಅಷ್ಟೇ ಅಲ್ಲ ಅದಕ್ಕಿಂತ ಹೆಚ್ಚಿನದನ್ನು ನೀಡುವ ಚಲನಚಿತ್ರಗಳನ್ನು ಮಾಡುವುದು  ನನ್ನ ಪ್ರಯತ್ನವಾಗಿದೆ’

- Advertisement -
- Advertisement -

ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ನಟಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಜಭವನದಲ್ಲಿ ರಾಜ್ಯಪಾಲರು ರಿಚಾ ಚಾಡ್ಡಾ ಅವರನ್ನು ಗೌರವಿಸಿದರು. ರಿಚಾ ಇತ್ತೀಚೆಗೆ ಎಲ್ ಗೌನಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು, ಅಲ್ಲಿ ಮಹಿಳಾ ಸಬಲೀಕರಣದ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದರು.

ಭಾರತ ರತ್ನ ಡಾ.ಅಂಬೇಡ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ರಿಚಾ ಚಾಡ್ಡಾ “ಈ ಗೌರವ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಗಾಡ್ ಫಾದರ್ ಇಲ್ಲದ ನಟಿಗೆ, ಪ್ರತಿ ಸಾಧನೆಯೂ ಅಮೂಲ್ಯ ಮತ್ತು ಉತ್ತಮವಾಗಿರುತ್ತದೆ. ಈ ಪ್ರಶಸ್ತಿ ನನ್ನ ಕನಸುಗಳ ಮೇಲಿನ ನನ್ನ ನಂಬಿಕೆಯನ್ನು ಪುನರುಚ್ಚರಿಸುತ್ತದೆ. ಕೇವಲ ಮನರಂಜನೆಗಿಂತ ಹೆಚ್ಚಿನದನ್ನು ನೀಡುವ ಚಲನಚಿತ್ರಗಳನ್ನು ಮಾಡುವುದು  ನನ್ನ ಪ್ರಯತ್ನವಾಗಿದೆ” ಎಂದಿದ್ದಾರೆ.

“ಈ ಪ್ರಶಸ್ತಿಗೆ ಕೃತಜ್ಞರಾಗಿರುತ್ತೇವೆ. ಜೊತೆಗೆ ಈದು ‘ಭವಿಷ್ಯದಲ್ಲಿ ಉತ್ತಮ ಯೋಜನೆಗಳನ್ನು ಆಯ್ಕೆ ಮಾಡಲು ಧೈರ್ಯ ತುಂಬುತ್ತದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಕಡಿಮೆ ಸವಲತ್ತುಗಳನ್ನು ಹೊಂದಿರುವವರನ್ನು ಬೆಂಬಲಿಸುವುದು ಮತ್ತು ಅವರ ಜೀವನವನ್ನು ಪುನಃ ಸ್ಥಾಪಿಸಲು ಸಹಾಯ ಮಾಡುವುದು ಕಲಾವಿದರ ನಿರಂತರ ಕರ್ತವ್ಯವಾಗಿ ಉಳಿದಿದೆ. ನಟ – ನಟಿಯರ ಕೆಲಸ ಮನರಂಜನೆಯನ್ನು ಮೀರಿದೆ” ಎಂಬ ಮಾತುಗಳನ್ನು ರಿಚಾ ಆಡಿದ್ದಾರೆ.

“ನಾವೆಲ್ಲರೂ ಸಮಾಜವನ್ನು ಉನ್ನತೀಕರಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇವೆ ಮತ್ತು ಕಡಿಮೆ ಸವಲತ್ತುಗಳನ್ನು ಹೊಂದಿರುವವರನ್ನು ಬೆಂಬಲಿಸುವಲ್ಲಿ ಹೆಚ್ಚಿನ ಜನರು ಸೇರಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೆ ನಿರಂತರ ಬೆಂಬಲ ನೀಡುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ನಟಿ ಹೇಳಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಶಸ್ತಿ ಬಗ್ಗೆ ಸಂಸತ ಹಂಚಿಕೊಂಡಿರುವ ನಟಿ, “ಭಾರತ್ ರತ್ನ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದವರಲ್ಲಿ ಒಬ್ಬರಾಗಿರುವುದು ರೋಮಾಂಚನವಾಗಿದೆ. ಮಹಾರಾಷ್ಟ್ರದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಜಾತಿ ಸವಲತ್ತು ಕಾರಣದಿಂದ ಬಾಬಾಸಾಹೇಬರ ಶ್ರೇಷ್ಠತೆ ಬಗ್ಗೆ ಜೀವನದಲ್ಲಿ ತಡವಾಗಿ ಎಚ್ಚರವಾಯಿತು! ಜೈ ಭೀಮ್! ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

ರಿಚಾ ಚಾಡ್ಡಾ ಅವರು 2008 ರಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ಆದರೆ, 2012ರ ಗ್ಯಾಂಗ್ಸ್ ಆಫ್ ವಾಸ್ಸೆಪುರ್ ಚಿತ್ರ ಆಕೆಗೆ ದೊಡ್ಡ ಬ್ರೇಕ್ ನೀಡಿತ್ತು. ಅಂದಿನಿಂದ, ರಿಚಾ ಮಸಾನ್, ಸರ್ಬ್ಜಿತ್, ಲವ್ ಸೋನಿಯಾ, ಮತ್ತು ಸೆಕ್ಷನ್ 375 ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿ ಕಂಗನಾ ರಾಣಾವತ್ ಜೊತೆ ನಟಿಸಿದ್ದ ಪಂಗಾ ಚಿತ್ರದಲ್ಲಿ ಆಕೆಯ ನಟನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...