Homeಮುಖಪುಟಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

’ಕೇವಲ ಮನರಂಜನೆ ಅಷ್ಟೇ ಅಲ್ಲ ಅದಕ್ಕಿಂತ ಹೆಚ್ಚಿನದನ್ನು ನೀಡುವ ಚಲನಚಿತ್ರಗಳನ್ನು ಮಾಡುವುದು  ನನ್ನ ಪ್ರಯತ್ನವಾಗಿದೆ’

- Advertisement -
- Advertisement -

ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ನಟಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಜಭವನದಲ್ಲಿ ರಾಜ್ಯಪಾಲರು ರಿಚಾ ಚಾಡ್ಡಾ ಅವರನ್ನು ಗೌರವಿಸಿದರು. ರಿಚಾ ಇತ್ತೀಚೆಗೆ ಎಲ್ ಗೌನಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು, ಅಲ್ಲಿ ಮಹಿಳಾ ಸಬಲೀಕರಣದ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದರು.

ಭಾರತ ರತ್ನ ಡಾ.ಅಂಬೇಡ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ರಿಚಾ ಚಾಡ್ಡಾ “ಈ ಗೌರವ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಗಾಡ್ ಫಾದರ್ ಇಲ್ಲದ ನಟಿಗೆ, ಪ್ರತಿ ಸಾಧನೆಯೂ ಅಮೂಲ್ಯ ಮತ್ತು ಉತ್ತಮವಾಗಿರುತ್ತದೆ. ಈ ಪ್ರಶಸ್ತಿ ನನ್ನ ಕನಸುಗಳ ಮೇಲಿನ ನನ್ನ ನಂಬಿಕೆಯನ್ನು ಪುನರುಚ್ಚರಿಸುತ್ತದೆ. ಕೇವಲ ಮನರಂಜನೆಗಿಂತ ಹೆಚ್ಚಿನದನ್ನು ನೀಡುವ ಚಲನಚಿತ್ರಗಳನ್ನು ಮಾಡುವುದು  ನನ್ನ ಪ್ರಯತ್ನವಾಗಿದೆ” ಎಂದಿದ್ದಾರೆ.

“ಈ ಪ್ರಶಸ್ತಿಗೆ ಕೃತಜ್ಞರಾಗಿರುತ್ತೇವೆ. ಜೊತೆಗೆ ಈದು ‘ಭವಿಷ್ಯದಲ್ಲಿ ಉತ್ತಮ ಯೋಜನೆಗಳನ್ನು ಆಯ್ಕೆ ಮಾಡಲು ಧೈರ್ಯ ತುಂಬುತ್ತದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಕಡಿಮೆ ಸವಲತ್ತುಗಳನ್ನು ಹೊಂದಿರುವವರನ್ನು ಬೆಂಬಲಿಸುವುದು ಮತ್ತು ಅವರ ಜೀವನವನ್ನು ಪುನಃ ಸ್ಥಾಪಿಸಲು ಸಹಾಯ ಮಾಡುವುದು ಕಲಾವಿದರ ನಿರಂತರ ಕರ್ತವ್ಯವಾಗಿ ಉಳಿದಿದೆ. ನಟ – ನಟಿಯರ ಕೆಲಸ ಮನರಂಜನೆಯನ್ನು ಮೀರಿದೆ” ಎಂಬ ಮಾತುಗಳನ್ನು ರಿಚಾ ಆಡಿದ್ದಾರೆ.

“ನಾವೆಲ್ಲರೂ ಸಮಾಜವನ್ನು ಉನ್ನತೀಕರಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇವೆ ಮತ್ತು ಕಡಿಮೆ ಸವಲತ್ತುಗಳನ್ನು ಹೊಂದಿರುವವರನ್ನು ಬೆಂಬಲಿಸುವಲ್ಲಿ ಹೆಚ್ಚಿನ ಜನರು ಸೇರಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೆ ನಿರಂತರ ಬೆಂಬಲ ನೀಡುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ನಟಿ ಹೇಳಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಶಸ್ತಿ ಬಗ್ಗೆ ಸಂಸತ ಹಂಚಿಕೊಂಡಿರುವ ನಟಿ, “ಭಾರತ್ ರತ್ನ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದವರಲ್ಲಿ ಒಬ್ಬರಾಗಿರುವುದು ರೋಮಾಂಚನವಾಗಿದೆ. ಮಹಾರಾಷ್ಟ್ರದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಜಾತಿ ಸವಲತ್ತು ಕಾರಣದಿಂದ ಬಾಬಾಸಾಹೇಬರ ಶ್ರೇಷ್ಠತೆ ಬಗ್ಗೆ ಜೀವನದಲ್ಲಿ ತಡವಾಗಿ ಎಚ್ಚರವಾಯಿತು! ಜೈ ಭೀಮ್! ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

ರಿಚಾ ಚಾಡ್ಡಾ ಅವರು 2008 ರಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ಆದರೆ, 2012ರ ಗ್ಯಾಂಗ್ಸ್ ಆಫ್ ವಾಸ್ಸೆಪುರ್ ಚಿತ್ರ ಆಕೆಗೆ ದೊಡ್ಡ ಬ್ರೇಕ್ ನೀಡಿತ್ತು. ಅಂದಿನಿಂದ, ರಿಚಾ ಮಸಾನ್, ಸರ್ಬ್ಜಿತ್, ಲವ್ ಸೋನಿಯಾ, ಮತ್ತು ಸೆಕ್ಷನ್ 375 ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿ ಕಂಗನಾ ರಾಣಾವತ್ ಜೊತೆ ನಟಿಸಿದ್ದ ಪಂಗಾ ಚಿತ್ರದಲ್ಲಿ ಆಕೆಯ ನಟನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...