Homeಮುಖಪುಟಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿ

’ಕೇವಲ ಮನರಂಜನೆ ಅಷ್ಟೇ ಅಲ್ಲ ಅದಕ್ಕಿಂತ ಹೆಚ್ಚಿನದನ್ನು ನೀಡುವ ಚಲನಚಿತ್ರಗಳನ್ನು ಮಾಡುವುದು  ನನ್ನ ಪ್ರಯತ್ನವಾಗಿದೆ’

- Advertisement -
- Advertisement -

ಬಾಲಿವುಡ್ ನಟಿ ರಿಚಾ ಚಾಡ್ಡಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಭಾರತರತ್ನ ಡಾ.ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ನಟಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಜಭವನದಲ್ಲಿ ರಾಜ್ಯಪಾಲರು ರಿಚಾ ಚಾಡ್ಡಾ ಅವರನ್ನು ಗೌರವಿಸಿದರು. ರಿಚಾ ಇತ್ತೀಚೆಗೆ ಎಲ್ ಗೌನಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು, ಅಲ್ಲಿ ಮಹಿಳಾ ಸಬಲೀಕರಣದ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದರು.

ಭಾರತ ರತ್ನ ಡಾ.ಅಂಬೇಡ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ರಿಚಾ ಚಾಡ್ಡಾ “ಈ ಗೌರವ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಗಾಡ್ ಫಾದರ್ ಇಲ್ಲದ ನಟಿಗೆ, ಪ್ರತಿ ಸಾಧನೆಯೂ ಅಮೂಲ್ಯ ಮತ್ತು ಉತ್ತಮವಾಗಿರುತ್ತದೆ. ಈ ಪ್ರಶಸ್ತಿ ನನ್ನ ಕನಸುಗಳ ಮೇಲಿನ ನನ್ನ ನಂಬಿಕೆಯನ್ನು ಪುನರುಚ್ಚರಿಸುತ್ತದೆ. ಕೇವಲ ಮನರಂಜನೆಗಿಂತ ಹೆಚ್ಚಿನದನ್ನು ನೀಡುವ ಚಲನಚಿತ್ರಗಳನ್ನು ಮಾಡುವುದು  ನನ್ನ ಪ್ರಯತ್ನವಾಗಿದೆ” ಎಂದಿದ್ದಾರೆ.

“ಈ ಪ್ರಶಸ್ತಿಗೆ ಕೃತಜ್ಞರಾಗಿರುತ್ತೇವೆ. ಜೊತೆಗೆ ಈದು ‘ಭವಿಷ್ಯದಲ್ಲಿ ಉತ್ತಮ ಯೋಜನೆಗಳನ್ನು ಆಯ್ಕೆ ಮಾಡಲು ಧೈರ್ಯ ತುಂಬುತ್ತದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಕಡಿಮೆ ಸವಲತ್ತುಗಳನ್ನು ಹೊಂದಿರುವವರನ್ನು ಬೆಂಬಲಿಸುವುದು ಮತ್ತು ಅವರ ಜೀವನವನ್ನು ಪುನಃ ಸ್ಥಾಪಿಸಲು ಸಹಾಯ ಮಾಡುವುದು ಕಲಾವಿದರ ನಿರಂತರ ಕರ್ತವ್ಯವಾಗಿ ಉಳಿದಿದೆ. ನಟ – ನಟಿಯರ ಕೆಲಸ ಮನರಂಜನೆಯನ್ನು ಮೀರಿದೆ” ಎಂಬ ಮಾತುಗಳನ್ನು ರಿಚಾ ಆಡಿದ್ದಾರೆ.

“ನಾವೆಲ್ಲರೂ ಸಮಾಜವನ್ನು ಉನ್ನತೀಕರಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇವೆ ಮತ್ತು ಕಡಿಮೆ ಸವಲತ್ತುಗಳನ್ನು ಹೊಂದಿರುವವರನ್ನು ಬೆಂಬಲಿಸುವಲ್ಲಿ ಹೆಚ್ಚಿನ ಜನರು ಸೇರಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೆ ನಿರಂತರ ಬೆಂಬಲ ನೀಡುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ನಟಿ ಹೇಳಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಶಸ್ತಿ ಬಗ್ಗೆ ಸಂಸತ ಹಂಚಿಕೊಂಡಿರುವ ನಟಿ, “ಭಾರತ್ ರತ್ನ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದವರಲ್ಲಿ ಒಬ್ಬರಾಗಿರುವುದು ರೋಮಾಂಚನವಾಗಿದೆ. ಮಹಾರಾಷ್ಟ್ರದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಜಾತಿ ಸವಲತ್ತು ಕಾರಣದಿಂದ ಬಾಬಾಸಾಹೇಬರ ಶ್ರೇಷ್ಠತೆ ಬಗ್ಗೆ ಜೀವನದಲ್ಲಿ ತಡವಾಗಿ ಎಚ್ಚರವಾಯಿತು! ಜೈ ಭೀಮ್! ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

ರಿಚಾ ಚಾಡ್ಡಾ ಅವರು 2008 ರಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ಆದರೆ, 2012ರ ಗ್ಯಾಂಗ್ಸ್ ಆಫ್ ವಾಸ್ಸೆಪುರ್ ಚಿತ್ರ ಆಕೆಗೆ ದೊಡ್ಡ ಬ್ರೇಕ್ ನೀಡಿತ್ತು. ಅಂದಿನಿಂದ, ರಿಚಾ ಮಸಾನ್, ಸರ್ಬ್ಜಿತ್, ಲವ್ ಸೋನಿಯಾ, ಮತ್ತು ಸೆಕ್ಷನ್ 375 ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿ ಕಂಗನಾ ರಾಣಾವತ್ ಜೊತೆ ನಟಿಸಿದ್ದ ಪಂಗಾ ಚಿತ್ರದಲ್ಲಿ ಆಕೆಯ ನಟನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...