Homeಮುಖಪುಟಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

- Advertisement -
- Advertisement -

ಪುಣೆ ಮೂಲದ ಆಟೋರಿಕ್ಷಾ ಚಾಲಕರೊಬ್ಬರು ತನ್ನ ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಆಹಾರಕ್ಕಾಗಿ ಬಳಸುತ್ತಾ ಆದರ್ಶವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾದ ಹಲವಾರು ಜನರು ಅವರಿಗೆ ಹಣದ ಸಹಾಯವನ್ನು ಮಾಡುತ್ತಿದ್ದಾರೆ.

ಅಕ್ಷಯ್ ಕೊಥಾವಾಲೆ (30) ಮಹಾರಾಷ್ಟ್ರದ ಪುಣೆಯಲ್ಲಿ ಅಗತ್ಯವಿರುವ ಹಾಗೂ ಬಡ ಜನರಿಗೆ ಆಹಾರ ಮತ್ತು ಪಡಿತರ ಕಿಟ್‌ಗಳನ್ನು ಒದಗಿಸಲು ತನ್ನ ಹಣ ಮತ್ತು ತನಗೆ ದೊರೆತ ಸಹಾಯದ ಹಣವನ್ನೂ ಮತ್ತೆ ಬಳಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊತವಾಲೆ, ತನಗೆ ದೊರೆತ ಅಪಾರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಮತ್ತು ಪುಣೆಯಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ನನ್ನನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕೊಥಾವಾಲೆ ತನ್ನ ಮದುವೆಗೆಂದು 2 ಲಕ್ಷ ರೂ.ಗಳನ್ನು ಉಳಿಸಿದ್ದರು. ಮದುವೆಯನ್ನು ಮೇ 25 ರಂದು ನಿಗದಿಪಡಿಸಲಾಗಿತ್ತು ಆದರೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಕಾರಣ ಮದುವೆಯನ್ನು ಮುಂದೂಡಲಾಗಿತ್ತು.

ಬಡ ಜನರು ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು, ಯಾವುದೇ ಕೆಲಸ ಮತ್ತು ಆದಾಯವಿಲ್ಲದ ಕಾರಣ ಸಂಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿದ ಅವರು, ತಮ್ಮಲ್ಲಿರುವ ಹಣದಿಂದ ಕೆಲವು ಸ್ನೇಹಿತರೊಂದಿಗೆ ಸೇರಿ ಆಹಾರವನ್ನು ಸಿದ್ಧಪಡಿಸುವ ಅಡುಗೆಮನೆ ಸ್ಥಾಪಿಸಿ, ಆಹಾರವನ್ನು ಪುಣೆಯ ಹಲವಾರು ಸ್ಥಳಗಳಲ್ಲಿ ವಿತರಿಸಿದರು.

ಅವರ ತಂದೆ ಕಳೆದ ತಿಂಗಳು ನಿಧನರಾಗಿದ್ದು, ಇದರ ಮಧ್ಯೆಯೂ ಅಕ್ಷಯ್ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ತಮಗೆ ಒದಗಿ ಬಂದ ದುರಂತದ ನಡುವೆಯೂ ಆಹಾರ ವಿತರಣೆಯನ್ನು ಮುಂದುವರೆಸುವ ಅವರ ಸಂಕಲ್ಪದ ಬಗ್ಗೆ ಓದಿದ ದೇಶದಾದ್ಯಂತ ಹಲವಾರು ಜನರು ಆರ್ಥಿಕ ಸಹಾಯವನ್ನು ನೀಡಿದ್ದಾರೆ.

“ನಾನು ದೇಶಾದ್ಯಂತದ ಜನರಿಂದ ಸುಮಾರು 6 ಲಕ್ಷ ರೂ. ಪಡೆದಿದ್ದೇನೆ. ನಮ್ಮ ಕಾರ್ಯಕ್ರಮದ ಬಗ್ಗೆ ಓದಿದ ಹಲವಾರು ಜನರು ಮುಂದೆ ಬಂದು ಸಹಾಯ ಹಸ್ತ ನೀಡಿದ್ದಾರೆ. ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳುತ್ತಾರೆ.

ತಾನು ಸ್ವೀಕರಿಸಿದ ಹಣದಿಂದ ಹಲವಾರು ಪ್ರದೇಶಗಳಲ್ಲಿ ಆಹಾರ ವಿತರಣೆಯನ್ನು ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

“ಕೈಯಲ್ಲಿರುವ ಹಣದೊಂದಿಗೆ, ನಾವು ಸಗಟು ಮಾರುಕಟ್ಟೆಯಿಂದ ಅಗತ್ಯವಾದ ದಿನಸಿ ವಸ್ತುಗಳನ್ನು ಖರೀದಿಸಿದ್ದೇವೆ, ನಂತರ ಅದನ್ನು ಬೇಯಿಸಿದ ಆಹಾರದ ಜೊತೆಗೆ, ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ವಿತರಿಸಲು ನಾವು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಹಾರ ವಿತರಣೆಯ ಜೊತೆಗೆ, ಅಕ್ಷಯ್ ಕೊಥವಾಲೆ ತಮ್ಮ ಸ್ವಂತ ರಿಕ್ಷಾದಲ್ಲಿ ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಉಚಿತ ಸವಾರಿಯನ್ನೂ ನೀಡುತ್ತಾರೆ.

ಅವರು ತಮ್ಮ ಆಟೋರಿಕ್ಷಾದಲ್ಲಿ ಧ್ವನಿವರ್ಧಕವನ್ನು ಹಾಕಿದ್ದು, ಅದರ ಮೂಲಕ ಅವರು ಮತ್ತು ಅವರ ಸ್ನೇಹಿತರು ಕೊರೊನಾ ಸಾಂಕ್ರಮಿಕದ ವಿರುದ್ಧ ಹೇಗೆ ಸುರಕ್ಷಿತವಾಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.


ಓದಿ: ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟಿರುವ ನಟರಾದ ಸೋನು ಸೂದ್‌ ಹಾಗೂ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...