Homeಮುಖಪುಟಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

- Advertisement -
- Advertisement -

ಪುಣೆ ಮೂಲದ ಆಟೋರಿಕ್ಷಾ ಚಾಲಕರೊಬ್ಬರು ತನ್ನ ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಆಹಾರಕ್ಕಾಗಿ ಬಳಸುತ್ತಾ ಆದರ್ಶವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾದ ಹಲವಾರು ಜನರು ಅವರಿಗೆ ಹಣದ ಸಹಾಯವನ್ನು ಮಾಡುತ್ತಿದ್ದಾರೆ.

ಅಕ್ಷಯ್ ಕೊಥಾವಾಲೆ (30) ಮಹಾರಾಷ್ಟ್ರದ ಪುಣೆಯಲ್ಲಿ ಅಗತ್ಯವಿರುವ ಹಾಗೂ ಬಡ ಜನರಿಗೆ ಆಹಾರ ಮತ್ತು ಪಡಿತರ ಕಿಟ್‌ಗಳನ್ನು ಒದಗಿಸಲು ತನ್ನ ಹಣ ಮತ್ತು ತನಗೆ ದೊರೆತ ಸಹಾಯದ ಹಣವನ್ನೂ ಮತ್ತೆ ಬಳಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊತವಾಲೆ, ತನಗೆ ದೊರೆತ ಅಪಾರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಮತ್ತು ಪುಣೆಯಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ನನ್ನನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕೊಥಾವಾಲೆ ತನ್ನ ಮದುವೆಗೆಂದು 2 ಲಕ್ಷ ರೂ.ಗಳನ್ನು ಉಳಿಸಿದ್ದರು. ಮದುವೆಯನ್ನು ಮೇ 25 ರಂದು ನಿಗದಿಪಡಿಸಲಾಗಿತ್ತು ಆದರೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಕಾರಣ ಮದುವೆಯನ್ನು ಮುಂದೂಡಲಾಗಿತ್ತು.

ಬಡ ಜನರು ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು, ಯಾವುದೇ ಕೆಲಸ ಮತ್ತು ಆದಾಯವಿಲ್ಲದ ಕಾರಣ ಸಂಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿದ ಅವರು, ತಮ್ಮಲ್ಲಿರುವ ಹಣದಿಂದ ಕೆಲವು ಸ್ನೇಹಿತರೊಂದಿಗೆ ಸೇರಿ ಆಹಾರವನ್ನು ಸಿದ್ಧಪಡಿಸುವ ಅಡುಗೆಮನೆ ಸ್ಥಾಪಿಸಿ, ಆಹಾರವನ್ನು ಪುಣೆಯ ಹಲವಾರು ಸ್ಥಳಗಳಲ್ಲಿ ವಿತರಿಸಿದರು.

ಅವರ ತಂದೆ ಕಳೆದ ತಿಂಗಳು ನಿಧನರಾಗಿದ್ದು, ಇದರ ಮಧ್ಯೆಯೂ ಅಕ್ಷಯ್ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ತಮಗೆ ಒದಗಿ ಬಂದ ದುರಂತದ ನಡುವೆಯೂ ಆಹಾರ ವಿತರಣೆಯನ್ನು ಮುಂದುವರೆಸುವ ಅವರ ಸಂಕಲ್ಪದ ಬಗ್ಗೆ ಓದಿದ ದೇಶದಾದ್ಯಂತ ಹಲವಾರು ಜನರು ಆರ್ಥಿಕ ಸಹಾಯವನ್ನು ನೀಡಿದ್ದಾರೆ.

“ನಾನು ದೇಶಾದ್ಯಂತದ ಜನರಿಂದ ಸುಮಾರು 6 ಲಕ್ಷ ರೂ. ಪಡೆದಿದ್ದೇನೆ. ನಮ್ಮ ಕಾರ್ಯಕ್ರಮದ ಬಗ್ಗೆ ಓದಿದ ಹಲವಾರು ಜನರು ಮುಂದೆ ಬಂದು ಸಹಾಯ ಹಸ್ತ ನೀಡಿದ್ದಾರೆ. ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳುತ್ತಾರೆ.

ತಾನು ಸ್ವೀಕರಿಸಿದ ಹಣದಿಂದ ಹಲವಾರು ಪ್ರದೇಶಗಳಲ್ಲಿ ಆಹಾರ ವಿತರಣೆಯನ್ನು ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

“ಕೈಯಲ್ಲಿರುವ ಹಣದೊಂದಿಗೆ, ನಾವು ಸಗಟು ಮಾರುಕಟ್ಟೆಯಿಂದ ಅಗತ್ಯವಾದ ದಿನಸಿ ವಸ್ತುಗಳನ್ನು ಖರೀದಿಸಿದ್ದೇವೆ, ನಂತರ ಅದನ್ನು ಬೇಯಿಸಿದ ಆಹಾರದ ಜೊತೆಗೆ, ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ವಿತರಿಸಲು ನಾವು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಹಾರ ವಿತರಣೆಯ ಜೊತೆಗೆ, ಅಕ್ಷಯ್ ಕೊಥವಾಲೆ ತಮ್ಮ ಸ್ವಂತ ರಿಕ್ಷಾದಲ್ಲಿ ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಉಚಿತ ಸವಾರಿಯನ್ನೂ ನೀಡುತ್ತಾರೆ.

ಅವರು ತಮ್ಮ ಆಟೋರಿಕ್ಷಾದಲ್ಲಿ ಧ್ವನಿವರ್ಧಕವನ್ನು ಹಾಕಿದ್ದು, ಅದರ ಮೂಲಕ ಅವರು ಮತ್ತು ಅವರ ಸ್ನೇಹಿತರು ಕೊರೊನಾ ಸಾಂಕ್ರಮಿಕದ ವಿರುದ್ಧ ಹೇಗೆ ಸುರಕ್ಷಿತವಾಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.


ಓದಿ: ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟಿರುವ ನಟರಾದ ಸೋನು ಸೂದ್‌ ಹಾಗೂ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...