Homeಮುಖಪುಟಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

- Advertisement -
- Advertisement -

ಪುಣೆ ಮೂಲದ ಆಟೋರಿಕ್ಷಾ ಚಾಲಕರೊಬ್ಬರು ತನ್ನ ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಆಹಾರಕ್ಕಾಗಿ ಬಳಸುತ್ತಾ ಆದರ್ಶವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾದ ಹಲವಾರು ಜನರು ಅವರಿಗೆ ಹಣದ ಸಹಾಯವನ್ನು ಮಾಡುತ್ತಿದ್ದಾರೆ.

ಅಕ್ಷಯ್ ಕೊಥಾವಾಲೆ (30) ಮಹಾರಾಷ್ಟ್ರದ ಪುಣೆಯಲ್ಲಿ ಅಗತ್ಯವಿರುವ ಹಾಗೂ ಬಡ ಜನರಿಗೆ ಆಹಾರ ಮತ್ತು ಪಡಿತರ ಕಿಟ್‌ಗಳನ್ನು ಒದಗಿಸಲು ತನ್ನ ಹಣ ಮತ್ತು ತನಗೆ ದೊರೆತ ಸಹಾಯದ ಹಣವನ್ನೂ ಮತ್ತೆ ಬಳಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊತವಾಲೆ, ತನಗೆ ದೊರೆತ ಅಪಾರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಮತ್ತು ಪುಣೆಯಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ನನ್ನನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕೊಥಾವಾಲೆ ತನ್ನ ಮದುವೆಗೆಂದು 2 ಲಕ್ಷ ರೂ.ಗಳನ್ನು ಉಳಿಸಿದ್ದರು. ಮದುವೆಯನ್ನು ಮೇ 25 ರಂದು ನಿಗದಿಪಡಿಸಲಾಗಿತ್ತು ಆದರೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಕಾರಣ ಮದುವೆಯನ್ನು ಮುಂದೂಡಲಾಗಿತ್ತು.

ಬಡ ಜನರು ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು, ಯಾವುದೇ ಕೆಲಸ ಮತ್ತು ಆದಾಯವಿಲ್ಲದ ಕಾರಣ ಸಂಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿದ ಅವರು, ತಮ್ಮಲ್ಲಿರುವ ಹಣದಿಂದ ಕೆಲವು ಸ್ನೇಹಿತರೊಂದಿಗೆ ಸೇರಿ ಆಹಾರವನ್ನು ಸಿದ್ಧಪಡಿಸುವ ಅಡುಗೆಮನೆ ಸ್ಥಾಪಿಸಿ, ಆಹಾರವನ್ನು ಪುಣೆಯ ಹಲವಾರು ಸ್ಥಳಗಳಲ್ಲಿ ವಿತರಿಸಿದರು.

ಅವರ ತಂದೆ ಕಳೆದ ತಿಂಗಳು ನಿಧನರಾಗಿದ್ದು, ಇದರ ಮಧ್ಯೆಯೂ ಅಕ್ಷಯ್ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ತಮಗೆ ಒದಗಿ ಬಂದ ದುರಂತದ ನಡುವೆಯೂ ಆಹಾರ ವಿತರಣೆಯನ್ನು ಮುಂದುವರೆಸುವ ಅವರ ಸಂಕಲ್ಪದ ಬಗ್ಗೆ ಓದಿದ ದೇಶದಾದ್ಯಂತ ಹಲವಾರು ಜನರು ಆರ್ಥಿಕ ಸಹಾಯವನ್ನು ನೀಡಿದ್ದಾರೆ.

“ನಾನು ದೇಶಾದ್ಯಂತದ ಜನರಿಂದ ಸುಮಾರು 6 ಲಕ್ಷ ರೂ. ಪಡೆದಿದ್ದೇನೆ. ನಮ್ಮ ಕಾರ್ಯಕ್ರಮದ ಬಗ್ಗೆ ಓದಿದ ಹಲವಾರು ಜನರು ಮುಂದೆ ಬಂದು ಸಹಾಯ ಹಸ್ತ ನೀಡಿದ್ದಾರೆ. ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳುತ್ತಾರೆ.

ತಾನು ಸ್ವೀಕರಿಸಿದ ಹಣದಿಂದ ಹಲವಾರು ಪ್ರದೇಶಗಳಲ್ಲಿ ಆಹಾರ ವಿತರಣೆಯನ್ನು ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

“ಕೈಯಲ್ಲಿರುವ ಹಣದೊಂದಿಗೆ, ನಾವು ಸಗಟು ಮಾರುಕಟ್ಟೆಯಿಂದ ಅಗತ್ಯವಾದ ದಿನಸಿ ವಸ್ತುಗಳನ್ನು ಖರೀದಿಸಿದ್ದೇವೆ, ನಂತರ ಅದನ್ನು ಬೇಯಿಸಿದ ಆಹಾರದ ಜೊತೆಗೆ, ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ವಿತರಿಸಲು ನಾವು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಹಾರ ವಿತರಣೆಯ ಜೊತೆಗೆ, ಅಕ್ಷಯ್ ಕೊಥವಾಲೆ ತಮ್ಮ ಸ್ವಂತ ರಿಕ್ಷಾದಲ್ಲಿ ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಉಚಿತ ಸವಾರಿಯನ್ನೂ ನೀಡುತ್ತಾರೆ.

ಅವರು ತಮ್ಮ ಆಟೋರಿಕ್ಷಾದಲ್ಲಿ ಧ್ವನಿವರ್ಧಕವನ್ನು ಹಾಕಿದ್ದು, ಅದರ ಮೂಲಕ ಅವರು ಮತ್ತು ಅವರ ಸ್ನೇಹಿತರು ಕೊರೊನಾ ಸಾಂಕ್ರಮಿಕದ ವಿರುದ್ಧ ಹೇಗೆ ಸುರಕ್ಷಿತವಾಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.


ಓದಿ: ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟಿರುವ ನಟರಾದ ಸೋನು ಸೂದ್‌ ಹಾಗೂ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...