Homeಮುಖಪುಟಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

- Advertisement -
- Advertisement -

ಪುಣೆ ಮೂಲದ ಆಟೋರಿಕ್ಷಾ ಚಾಲಕರೊಬ್ಬರು ತನ್ನ ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಆಹಾರಕ್ಕಾಗಿ ಬಳಸುತ್ತಾ ಆದರ್ಶವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾದ ಹಲವಾರು ಜನರು ಅವರಿಗೆ ಹಣದ ಸಹಾಯವನ್ನು ಮಾಡುತ್ತಿದ್ದಾರೆ.

ಅಕ್ಷಯ್ ಕೊಥಾವಾಲೆ (30) ಮಹಾರಾಷ್ಟ್ರದ ಪುಣೆಯಲ್ಲಿ ಅಗತ್ಯವಿರುವ ಹಾಗೂ ಬಡ ಜನರಿಗೆ ಆಹಾರ ಮತ್ತು ಪಡಿತರ ಕಿಟ್‌ಗಳನ್ನು ಒದಗಿಸಲು ತನ್ನ ಹಣ ಮತ್ತು ತನಗೆ ದೊರೆತ ಸಹಾಯದ ಹಣವನ್ನೂ ಮತ್ತೆ ಬಳಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊತವಾಲೆ, ತನಗೆ ದೊರೆತ ಅಪಾರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಮತ್ತು ಪುಣೆಯಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ನನ್ನನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕೊಥಾವಾಲೆ ತನ್ನ ಮದುವೆಗೆಂದು 2 ಲಕ್ಷ ರೂ.ಗಳನ್ನು ಉಳಿಸಿದ್ದರು. ಮದುವೆಯನ್ನು ಮೇ 25 ರಂದು ನಿಗದಿಪಡಿಸಲಾಗಿತ್ತು ಆದರೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಕಾರಣ ಮದುವೆಯನ್ನು ಮುಂದೂಡಲಾಗಿತ್ತು.

ಬಡ ಜನರು ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು, ಯಾವುದೇ ಕೆಲಸ ಮತ್ತು ಆದಾಯವಿಲ್ಲದ ಕಾರಣ ಸಂಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿದ ಅವರು, ತಮ್ಮಲ್ಲಿರುವ ಹಣದಿಂದ ಕೆಲವು ಸ್ನೇಹಿತರೊಂದಿಗೆ ಸೇರಿ ಆಹಾರವನ್ನು ಸಿದ್ಧಪಡಿಸುವ ಅಡುಗೆಮನೆ ಸ್ಥಾಪಿಸಿ, ಆಹಾರವನ್ನು ಪುಣೆಯ ಹಲವಾರು ಸ್ಥಳಗಳಲ್ಲಿ ವಿತರಿಸಿದರು.

ಅವರ ತಂದೆ ಕಳೆದ ತಿಂಗಳು ನಿಧನರಾಗಿದ್ದು, ಇದರ ಮಧ್ಯೆಯೂ ಅಕ್ಷಯ್ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ತಮಗೆ ಒದಗಿ ಬಂದ ದುರಂತದ ನಡುವೆಯೂ ಆಹಾರ ವಿತರಣೆಯನ್ನು ಮುಂದುವರೆಸುವ ಅವರ ಸಂಕಲ್ಪದ ಬಗ್ಗೆ ಓದಿದ ದೇಶದಾದ್ಯಂತ ಹಲವಾರು ಜನರು ಆರ್ಥಿಕ ಸಹಾಯವನ್ನು ನೀಡಿದ್ದಾರೆ.

“ನಾನು ದೇಶಾದ್ಯಂತದ ಜನರಿಂದ ಸುಮಾರು 6 ಲಕ್ಷ ರೂ. ಪಡೆದಿದ್ದೇನೆ. ನಮ್ಮ ಕಾರ್ಯಕ್ರಮದ ಬಗ್ಗೆ ಓದಿದ ಹಲವಾರು ಜನರು ಮುಂದೆ ಬಂದು ಸಹಾಯ ಹಸ್ತ ನೀಡಿದ್ದಾರೆ. ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳುತ್ತಾರೆ.

ತಾನು ಸ್ವೀಕರಿಸಿದ ಹಣದಿಂದ ಹಲವಾರು ಪ್ರದೇಶಗಳಲ್ಲಿ ಆಹಾರ ವಿತರಣೆಯನ್ನು ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

“ಕೈಯಲ್ಲಿರುವ ಹಣದೊಂದಿಗೆ, ನಾವು ಸಗಟು ಮಾರುಕಟ್ಟೆಯಿಂದ ಅಗತ್ಯವಾದ ದಿನಸಿ ವಸ್ತುಗಳನ್ನು ಖರೀದಿಸಿದ್ದೇವೆ, ನಂತರ ಅದನ್ನು ಬೇಯಿಸಿದ ಆಹಾರದ ಜೊತೆಗೆ, ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ವಿತರಿಸಲು ನಾವು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಹಾರ ವಿತರಣೆಯ ಜೊತೆಗೆ, ಅಕ್ಷಯ್ ಕೊಥವಾಲೆ ತಮ್ಮ ಸ್ವಂತ ರಿಕ್ಷಾದಲ್ಲಿ ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಉಚಿತ ಸವಾರಿಯನ್ನೂ ನೀಡುತ್ತಾರೆ.

ಅವರು ತಮ್ಮ ಆಟೋರಿಕ್ಷಾದಲ್ಲಿ ಧ್ವನಿವರ್ಧಕವನ್ನು ಹಾಕಿದ್ದು, ಅದರ ಮೂಲಕ ಅವರು ಮತ್ತು ಅವರ ಸ್ನೇಹಿತರು ಕೊರೊನಾ ಸಾಂಕ್ರಮಿಕದ ವಿರುದ್ಧ ಹೇಗೆ ಸುರಕ್ಷಿತವಾಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.


ಓದಿ: ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟಿರುವ ನಟರಾದ ಸೋನು ಸೂದ್‌ ಹಾಗೂ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...