Homeಮುಖಪುಟಹೋಲಿಕೆ ಹಾಸ್ಯಾಸ್ಪದ: ಸಂಸದ ತೇಜಸ್ವಿ ಸೂರ್ಯರ ಕಾಲೆಳೆದ ಕಾರ್ತಿ ಚಿದಂಬರಂ

ಹೋಲಿಕೆ ಹಾಸ್ಯಾಸ್ಪದ: ಸಂಸದ ತೇಜಸ್ವಿ ಸೂರ್ಯರ ಕಾಲೆಳೆದ ಕಾರ್ತಿ ಚಿದಂಬರಂ

- Advertisement -
- Advertisement -

ಕೊರೊನ ವೈರಸ್ ಭೀತಿಯಿಂದ ಸಂಸತ್ ಅಧಿವೇಶನವನ್ನು ಮೂಂದೂಡಬೇಕೆಂದು ಅನೇಕ ವಿರೋಧ ಪಕ್ಷದ ಸದಸ್ಯರ ಸೂಚನೆಯ ಹೊರತಾಗಿಯು ಮೇಲೆಯು ಸಂಸತ್ತು ಮುಂದುವರೆದಿದೆ. ಈ ಬಗ್ಗೆ ಬಿಜೆಪಿ ತೇಜಸ್ವಿ ಸೂರ್ಯ, “ಸಂಸದರು ಕೂಡಾ ವೈದ್ಯರು ಮತ್ತು ಸೈನಿಕರಂತೆ ಈ ಸಮಯದಲ್ಲಿ ಹೆಚ್ಚು ಕೆಲಸ ಮಾಡಬೇಕು” ಎಂದು ಹೇಳಿದ್ದಕ್ಕೆ ಸಂಸದ ಕಾರ್ತಿ ಚಿದಂಬರಂ ’ತೇಜಸ್ವಿ ಹೇಳಿಕೆ ಹಾಸ್ಯಾಸ್ಪದ’ ಎಂದು ಟ್ವಿಟ್ಟರಿನಲ್ಲಿ ಕಾಲೆಳೆದಿದ್ದಾರೆ.

ಕಾರ್ತಿ ಪಿ ಚಿದಂಬರಂ “ಈ ಹೋಲಿಕೆ ಹಾಸ್ಯಾಸ್ಪದವಾಗಿದೆ, ವೈದ್ಯರ ಬದ್ಧತೆ ಹಾಗೂ ಸಮರ್ಪಣೆಗಾಗಿ ವಂದಿಸುತ್ತೇನೆ. ಆದರೆ ಸಂಸತ್ತು ಈ ರೀತಿಯಾಗಿ ಕಾರ್ಯನಿರ್ವಹಿಸುವ ಅಗತ್ಯವಿಲ್ಲ ಮತ್ತು ಸಮರ್ಥನೆ ಮಾಡುವ ಅಗತ್ಯವಿಲ್ಲ. ಎಲ್ಲಾ  ಸಭೆ-ಸಮಾರಂಭಗಳನ್ನು ಕಡಿತಗೊಳಿಸಲಾಗಿದೆ ಆದರೆ ಸಂಸತ್ತು ಅದರಿಂದ ಹೊರುಳಿದ್ದು ಯಾಕೆ?” ಎಂದು ಟ್ವೀಟಿಸಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಇತರರಿಗೆ ಸಾಮಾಜಿಕವಾಗಿ ದೂರ-ದೂರದಲ್ಲಿರಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಎಂದು ಸೂಚಿಸುತ್ತಿರುವ ಸಂಸತ್‌ ಸದಸ್ಯರು ಸಹ ಸಂಸತ್ತಿನಲ್ಲಿ ಒಟ್ಟಿಗೆ ಕುಳಿತುಕೊಳ್ಳಬೇಕಾಗಿದೆ” ಎಂದು ಪ್ರತಿಕ್ರಿಯಿಸುವುದರೊಂದಿಗೆ ಈ ವಿವಾದ ಪ್ರಾರಂಭವಾಯಿತು.

“COVID19 ವಿರುದ್ಧ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಂಸತ್ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡುವುದು ಬಿಟ್ಟು ಸಂಸತ್ತಿನಲ್ಲಿ ಸಭೆ ನಡೆಸುವುದನ್ನು ಮುಂದುವರೆಸುವುದು ವಿಪರ್ಯಾಸ. ಅಲ್ಲಿ ಜನರು ಸಭೆ ಸೇರಬೇಡಿ ಅನ್ನುತ್ತೇವೆ, ಇಲ್ಲಿ ನಾವೇ ಕಿರಿದಾದ ಬೆಂಚುಗಳ ಮೇಲೆ ಕೆನ್ನೆಗೆ ಕೈಒತ್ತಿ ಕುಳಿತುಕೊಳ್ಳುತ್ತೇವೆ. ಅಂದರೆ ಸಂಸದರ ಸಂದೇಶ ಇದು: “ನಾನು ಹೇಳಿದಂತೆ ಮಾಡು, ನಾನು ಮಾಡಿದಂತೆ ಅಲ್ಲ” ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಬಿಜೆಪಿಯ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿ “ಸರ್, ಸಂಸದರು ವಿಶೇಷರಲ್ಲ. ನಮ್ಮ ವೈದ್ಯರು, ಆರೋಗ್ಯ ಕಾರ್ಯಕರ್ತರು, ಗಡಿಗಳಲ್ಲಿನ ಸೈನಿಕರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಗಳು ಎಲ್ಲಾ ಧೈರ್ಯದಿಂದ ಕಾರ್ಯನಿರ್ವಹಿಸುತ್ತಿದ್ದರೆ, ನಾವು ನಮ್ಮ ಕರ್ತವ್ಯಗಳನ್ನು ಸಹ ಮಾಡಬೇಕಲ್ಲವೇ? ಮುನ್ನೆಚ್ಚರಿಕೆ ಮುಖ್ಯ ಆದರೆ ಭೀತಿಯಲ್ಲ. ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ಭಾರತ # COVID19 ಅನ್ನು ನಿರ್ವಹಿಸುವಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸುತ್ತಿದೆ” ಎಂದು ಟ್ವೀಟ್‌ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...