Homeಮುಖಪುಟಹೋಲಿಕೆ ಹಾಸ್ಯಾಸ್ಪದ: ಸಂಸದ ತೇಜಸ್ವಿ ಸೂರ್ಯರ ಕಾಲೆಳೆದ ಕಾರ್ತಿ ಚಿದಂಬರಂ

ಹೋಲಿಕೆ ಹಾಸ್ಯಾಸ್ಪದ: ಸಂಸದ ತೇಜಸ್ವಿ ಸೂರ್ಯರ ಕಾಲೆಳೆದ ಕಾರ್ತಿ ಚಿದಂಬರಂ

- Advertisement -
- Advertisement -

ಕೊರೊನ ವೈರಸ್ ಭೀತಿಯಿಂದ ಸಂಸತ್ ಅಧಿವೇಶನವನ್ನು ಮೂಂದೂಡಬೇಕೆಂದು ಅನೇಕ ವಿರೋಧ ಪಕ್ಷದ ಸದಸ್ಯರ ಸೂಚನೆಯ ಹೊರತಾಗಿಯು ಮೇಲೆಯು ಸಂಸತ್ತು ಮುಂದುವರೆದಿದೆ. ಈ ಬಗ್ಗೆ ಬಿಜೆಪಿ ತೇಜಸ್ವಿ ಸೂರ್ಯ, “ಸಂಸದರು ಕೂಡಾ ವೈದ್ಯರು ಮತ್ತು ಸೈನಿಕರಂತೆ ಈ ಸಮಯದಲ್ಲಿ ಹೆಚ್ಚು ಕೆಲಸ ಮಾಡಬೇಕು” ಎಂದು ಹೇಳಿದ್ದಕ್ಕೆ ಸಂಸದ ಕಾರ್ತಿ ಚಿದಂಬರಂ ’ತೇಜಸ್ವಿ ಹೇಳಿಕೆ ಹಾಸ್ಯಾಸ್ಪದ’ ಎಂದು ಟ್ವಿಟ್ಟರಿನಲ್ಲಿ ಕಾಲೆಳೆದಿದ್ದಾರೆ.

ಕಾರ್ತಿ ಪಿ ಚಿದಂಬರಂ “ಈ ಹೋಲಿಕೆ ಹಾಸ್ಯಾಸ್ಪದವಾಗಿದೆ, ವೈದ್ಯರ ಬದ್ಧತೆ ಹಾಗೂ ಸಮರ್ಪಣೆಗಾಗಿ ವಂದಿಸುತ್ತೇನೆ. ಆದರೆ ಸಂಸತ್ತು ಈ ರೀತಿಯಾಗಿ ಕಾರ್ಯನಿರ್ವಹಿಸುವ ಅಗತ್ಯವಿಲ್ಲ ಮತ್ತು ಸಮರ್ಥನೆ ಮಾಡುವ ಅಗತ್ಯವಿಲ್ಲ. ಎಲ್ಲಾ  ಸಭೆ-ಸಮಾರಂಭಗಳನ್ನು ಕಡಿತಗೊಳಿಸಲಾಗಿದೆ ಆದರೆ ಸಂಸತ್ತು ಅದರಿಂದ ಹೊರುಳಿದ್ದು ಯಾಕೆ?” ಎಂದು ಟ್ವೀಟಿಸಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಇತರರಿಗೆ ಸಾಮಾಜಿಕವಾಗಿ ದೂರ-ದೂರದಲ್ಲಿರಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಎಂದು ಸೂಚಿಸುತ್ತಿರುವ ಸಂಸತ್‌ ಸದಸ್ಯರು ಸಹ ಸಂಸತ್ತಿನಲ್ಲಿ ಒಟ್ಟಿಗೆ ಕುಳಿತುಕೊಳ್ಳಬೇಕಾಗಿದೆ” ಎಂದು ಪ್ರತಿಕ್ರಿಯಿಸುವುದರೊಂದಿಗೆ ಈ ವಿವಾದ ಪ್ರಾರಂಭವಾಯಿತು.

“COVID19 ವಿರುದ್ಧ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಂಸತ್ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡುವುದು ಬಿಟ್ಟು ಸಂಸತ್ತಿನಲ್ಲಿ ಸಭೆ ನಡೆಸುವುದನ್ನು ಮುಂದುವರೆಸುವುದು ವಿಪರ್ಯಾಸ. ಅಲ್ಲಿ ಜನರು ಸಭೆ ಸೇರಬೇಡಿ ಅನ್ನುತ್ತೇವೆ, ಇಲ್ಲಿ ನಾವೇ ಕಿರಿದಾದ ಬೆಂಚುಗಳ ಮೇಲೆ ಕೆನ್ನೆಗೆ ಕೈಒತ್ತಿ ಕುಳಿತುಕೊಳ್ಳುತ್ತೇವೆ. ಅಂದರೆ ಸಂಸದರ ಸಂದೇಶ ಇದು: “ನಾನು ಹೇಳಿದಂತೆ ಮಾಡು, ನಾನು ಮಾಡಿದಂತೆ ಅಲ್ಲ” ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಬಿಜೆಪಿಯ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿ “ಸರ್, ಸಂಸದರು ವಿಶೇಷರಲ್ಲ. ನಮ್ಮ ವೈದ್ಯರು, ಆರೋಗ್ಯ ಕಾರ್ಯಕರ್ತರು, ಗಡಿಗಳಲ್ಲಿನ ಸೈನಿಕರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಗಳು ಎಲ್ಲಾ ಧೈರ್ಯದಿಂದ ಕಾರ್ಯನಿರ್ವಹಿಸುತ್ತಿದ್ದರೆ, ನಾವು ನಮ್ಮ ಕರ್ತವ್ಯಗಳನ್ನು ಸಹ ಮಾಡಬೇಕಲ್ಲವೇ? ಮುನ್ನೆಚ್ಚರಿಕೆ ಮುಖ್ಯ ಆದರೆ ಭೀತಿಯಲ್ಲ. ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ಭಾರತ # COVID19 ಅನ್ನು ನಿರ್ವಹಿಸುವಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸುತ್ತಿದೆ” ಎಂದು ಟ್ವೀಟ್‌ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...