Homeಮುಖಪುಟರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ರಾಮಾಯಣ ಮಹಾಭಾರತ ಕಾಲದಲ್ಲಿಯೇ ಅನುಲೋಮ ಪ್ರತಿಲೋಮ ವಿವಾಹ ಪದ್ಧತಿಗಳು, ಸ್ವಯಂವರ ಗಾಂಧರ್ವವಿವಾಹ ನಾನಾ ನಮೂನೆ ವಿವಾಹಗಳು ಹಿಂದೂ ಧರ್ಮಗಳಲ್ಲಿದ್ದವೆಂಬುದನ್ನು ಭಕ್ತರು ಅರಿಯುವ ಅಗತ್ಯವಿದೆ.

- Advertisement -
- Advertisement -

ಜನರಿಂದ ಆರಿಸಿ ಬಂದ ಸರ್ಕಾರವು ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ದೇಶದ ಭದ್ರತೆ, ಪ್ರಜೆಗಳ ಸೌಖ್ಯವನ್ನು ಮೆರೆತು ಏನೇನೋ ತರ್ಕ, ಕುತರ್ಕ, ಚಿಂತನೆಗಳ ಕರ್ಫ್ಯೂವನ್ನು ಪ್ರಜೆಗಳ ಮೇಲೆ ಹೇರಲು ಹವಣಿಸುತ್ತಿದೆ. ದೇಶದ ಆರ್ಥಿಕತೆಯ ಕುಸಿತ ಆಡಳಿತ ವೈಫಲ್ಯ ಮರೆಮಾಚಲು ದಿಢೀರನೆ ಒಂದು ದೇಶ ಒಂದು ಚುನಾವಣೆ ಅನ್ನೋದು. ಒಂದು ದೇಶ ಒಂದೇ ಧರ್ಮ ಒಂದೇ ಭಾಷೆ ಒಂದೇ ತೆರಿಗೆ ಅಂತ ಹೆದರಿಸೋದು ಅವ್ಯಾಹತವಾಗಿ ನಡೆದಿದೆ.

ಇದೆಲ್ಲಾ ದೇಶದ ಐಕ್ಯತೆಯನ್ನು ವಿಘಟನೆಯತ್ತ ಕೊಂಡೊಯುತ್ತದಲ್ಲದೆ ಆಯಾ ಭಾಷಿಕರ ಅಸ್ಮಿತೆಯ ಆತ್ಮಹತ್ಯೆಯಾದಿತೆಂಬುದರ ಬಗ್ಗೆ ಚಿಂತಿಸುತ್ತಿಲ್ಲ. ನಿರ್ದಿಷ್ಟ ಚುನಾವಣೆಯಲ್ಲಿ ಗೆಲ್ಲಲು ಆಯಾ ಸಮುದಾಯಗಳಿಗೆ ನಿಗಮಮಂಡಳಿ ಪ್ರಾಧಿಕಾರಗಳನ್ನು ಮಾಡ ಹೊರಡುವುದೂ ನಡೆಯುತ್ತಿದೆ.

ಸಾಲದ್ದಕ್ಕೆ ಇಲ್ಲದ ’ಲವ್ ಜಿಹಾದ್ ಬಗ್ಗೆ ಪ್ರಸ್ತಾಪಿಸಿ ಅಂತರಧರ್ಮೀಯ ಮದುವೆಗಳನ್ನು ನಿಷೇಧಿಸಲು ಪ್ರಯತ್ನಿಸಲಾಗುತ್ತಿದೆ. ’ಗೋಹತ್ಯೆ ನಿಷೇಧ’ ಜಾರಿಗೆ ತರುತ್ತೇವೆಂದು ಫರಮಾನು ಹೊರಡಿಸುತ್ತಾ ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳವರ ಮೇಲೆ ಸವಾರಿ ಮಾಡುವ ಚೋದ್ಯವೂ ನಡೆದಿದೆ. ಉತ್ತರ ಪ್ರದೇಶದಲ್ಲಿ ಜಾರಿಯಾಯಿತೆಂದು ’ಲವ್ ಜಿಹಾದ್ ಕಾಯ್ದೆ ತರಲು ಹೊರಟಿರುವ ಸರ್ಕಾರವೂ ಇದು ಅಸಂವಿಧಾನಿಕವೆಂದರಿಯದ್ದೇನಲ್ಲ. ನಿಗದಿಗೊಳಿಸಿದ ವಯೋಮಾನ ದಾಟಿದ ಪ್ರತಿ ಗಂಡು ಹೆಣ್ಣು ಇಷ್ಟಪಟ್ಟವರನ್ನು ವರಿಸುವ ಸ್ವಾತಂತ್ರ್ಯವಿದೆಯೆಂಬ ಕಾನೂನೇ ಇರುವಾಗ ನಿಯಮ ಹೇಗೆ ತರುತ್ತಾರಂತೆ! ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರನ್ನು, ಮುಸ್ಲಿಂ ಹುಡುಗರು ಹಿಂದೂ ಹುಡುಗಿಯರನ್ನು ಪ್ರೇಮಿಸಿ ವರಿಸಬಾರದೆಂಬ ಯಾವ ಕಾಯ್ದೆ ಇದೆ? ಬಲವಂತ ಮತಾಂತರ ತಪ್ಪಿರಬಹುದು. ಇಷ್ಟಪಟ್ಟ ಧರ್ಮಕ್ಕೆ ಮತಾಂತರವಾಗುವುದು ತಪ್ಪಲ್ಲವೆಂದು ಸಂವಿಧಾನವೇ ಸಾರಿರುವಾಗ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕೇಕೆ? ಮನುಷ್ಯರನ್ನು ಮನುಷ್ಯ ಮಟ್ಟಿಸಿಕೊಳ್ಳದ, ಮಮತೆ ತೋರದ ಧರ್ಮ ಒಂದಿದ್ದರೆ ಅದರಲ್ಲೆ ಉಳಿಯಲು ಜಿಗುಪ್ಸೆಗೊಂಡು ಪ್ರೀತಿ ಸಾಮರಸ್ಯ ಸಮಾನತೆ ತೋರುವ ಯಾವ ಧರ್ಮವಾದರೇನು ಹೋಗುವುದು ಸಹಜವಲ್ಲವೆ. ಕನಿಷ್ಟ ಜೊತೆಗೆ ಕೂತು ಉಣ್ಣದವರ ನಡುವೆ ವಿವಾಹಗಳಾದವೆ? ಹೀಗಾಗಿಯೇ ಕಾಲಕಾಲಕ್ಕೆ ರೂಪಾಂತರಗಳಾಗಿವೆ. ಅಪಾರ ಬುದ್ಧಿಮತ್ತೆ ಇರುವ ಮಾನವತಾವಾದಿ ಅಂಬೇಡ್ಕರ್ ಅಂಥವರೇ ನೋವುಂಡು ಬೌದ್ಧಧರ್ಮಕ್ಕೆ ಮತಾಂತರಗೊಂಡರೆಂದಾಗ ಜಾತಿಯ ಅಟ್ಟಹಾಸ ಅಳೆವ ಮಾಪನವೆಲ್ಲಿಂದ ತರೋದು ಹೇಳಿ.

ಹಿಂದೆಂದಿಗಿಂತಲೂ ಇಂದು ಭಾರತದಲ್ಲಿ ರಾಷ್ಟ್ರೀಯತೆಯನ್ನು ಪ್ರಚೋದಿಸುವ ಕಾರ್ಯ ಹೆಚ್ಚುತ್ತಿದೆ. ಧರ್ಮದ ಹೆಸರಿನಲ್ಲಿ ಮುಸ್ಲಿಂ ದ್ವೇಷವನ್ನು ವ್ಯವಸ್ಥಿತವಾಗಿ ಬಿತ್ತುವುದೂ ಸಹ ’ಜಿಹಾದಿ’ ಅಲ್ಲವೆ? ಜಿಹಾದಿಗೂ ಲವ್‌ಗೂ ಏಕೆ ಸಂಬಂಧ ಕಲ್ಪಿಸುತ್ತಿದ್ದಾರೊ! ’ಜಿಹಾ’ ಅಂದರೆ ಇಷ್ಟೆ ಅನ್ಯಾಯದ ವಿರುದ್ಧ ಹೋರಾಟ, ಮುಸ್ಲಿಂ ಬಾಂಧವರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಾ ಅವರ ಸಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ, ಅವರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಪ್ರಯತ್ನಗಳಾಗುತ್ತಿರುವುದು ಜನಸಮಾನ್ಯರಿಂದಲ್ಲ. ಆಳುವ ಪ್ರಭುತ್ವದಿಂದಲೇ ಎಂದಾಗ ಯಾರ ಬಳಿ ದೂರುವುದು? ಮುಸ್ಲಿಂ ಹುಡುಗರು ಮಾತ್ರವೇ ಪ್ರೀತಿಸಿ ಮದುವೆಯಾಗಿಯೋ, ಆಗದೆಯೋ ಮೋಸ ಮಾಡುತ್ತಿದ್ದಾರೆಯೆ? ಹಿಂದೂಗಳಲ್ಲಿಯೂ ಅದೆಷ್ಟು ಅಂತರ್ಜಾತಿ ವಿವಾಹಗಳು ವಿಫಲವಾಗಿಲ್ಲ ಹೇಳಿ. ಸನಾತನವ್ಯಾಧಿಗಳಿಂದಾಗಿ ಮರ್ಯಾದಾ ಹತ್ಯೆಗಳು ನಡೆಯುತ್ತಿಲ್ಲವೆ.

ಯಾವನೋ ಮುಸಲ್ಮಾನನೊಬ್ಬ ಹಿಂದೂ ಹೆಣ್ಣೊಬ್ಬಳಿಗೆ ಮೋಸ ಮಾಡಿದನೆಂದಾದರೆ ಅವನನ್ನು ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸದೆ, ಲವ್ ಜಿಹಾದಿ ನಿಷೇಧ ಕಾಯ್ದೆಗೆ ಮುಂದಾಗೋದು ನೆಗಡಿಯಾಯಿತೆಂದು ಮೂಗು ಕತ್ತರಿಸಿಕೊಂಡಂತೆ. ಇದನ್ನು ಕಾನೂನಿಂದ ಮಾನ್ಯ ಮಾಡಲು ಸಾಧ್ಯವೇ? ಜಾತಿ ಧರ್ಮದ ಹೊರತಾಗಿಯೂ ಇಬ್ಬರ ನಡುವಿನ ವೈಯಕ್ತಿಕ ಸಂಬಂಧವನ್ನು ಅತಿಕ್ರಮಿಸುವ ಸ್ವಾತಂತ್ರ್ಯ ಯಾರಿಗೂ ಇಲ್ಲವೆಂದು ಅಲಹಾಬಾದ್ ಹೈಕೋರ್ಟ್ ಹೇಳಿದ್ದಾಗಿದೆ. ಇತ್ತೀಚಿಗೆ ಇಂತದ್ದೇ ಪ್ರೇಮ ಪ್ರಕರಣದಲ್ಲಿ ರಮ್ಯ ಮತ್ತು ವಾಜಿದಾಖಾನ್‌ರ ಅಂತರ್ಧರ್ಮಿಯ ವಿವಾದ ವಿಚಾರದಲ್ಲಿ ನ್ಯಾಯಾಮೂರ್ತಿ ಎಸ್. ಸುಜಾತ ಹಾಗೂ ಸಚಿನ್ ಶಂಕರ್ ಮಗದಮ್ ಅವರುಗಳಿದ್ದ ಪೀಠ ಇಂತದ್ದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಆದರೂ ಸರ್ಕಾರ ಕಾಯ್ದೆ ತರಲು ಹೊರಟಿದೆ. ಇದು ಸ್ವಂತ ಆಲೋಚನೆಯೂ ಅಲ್ಲ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥರ ನಕಲು.

ಇನ್ನು ಗೋಹತ್ಯೆ ನಿಷೇಧದ ಮಾತು ಬೇರೆ. ಈ ವಿಷಯದಲ್ಲಾಗಲೇ ಧರ್ಮಧರ್ಮಗಳ ನಡುವೆ, ಜಾತಿಜಾತಿಗಳ ಮಧ್ಯೆ ಕೊಲೆಗಳೇ ಆಗಿವೆಯಾದರೂ ಹಗ್ಗಜಗ್ಗಾಟ ನಿಲ್ಲುವಂತಿಲ್ಲ. ಅನಾದಿಕಾಲದಲ್ಲಿ ಎಲ್ಲರೂ ಒಂದೇ ಜಾತಿಯವರೆ – ಬೇಟೆಯಾಡುವ ಬೇಡರು, ಎಲ್ಲಾ ಮಾಂಸಾಹಾರಿಗಳೇ. ಒಂದು ಕಾಲದಲ್ಲಿ ವೈದಿಕರೂ ಮಾಂಸಾಹಾರಿಗಳೇ ಎಂಬ ವಾದವೂ ಈಗ ಹಳೆಯದು. ನಾವು ಏನನ್ನು ಇಷ್ಟಪಟ್ಟು ಉಣ್ಣುತ್ತೇವೋ ಉಡುತ್ತೇವೋ ಹಾಗೆ ಮತಾಂತರವೋ ವೈಯಕ್ತಿಕ ಹಕ್ಕೆಂದು ಸಂವಿಧಾನದಲ್ಲಿ ಹೇಳಿದ್ದರೂ ಸರ್ಕಾರ ಜನರ ನೆಮ್ಮದಿಗೆ ಮತ್ತೆ ಮತ್ತೆ ಕೊಳ್ಳಿ ಇಡುವ ಯತ್ನ ಮಾಡುತ್ತಲೇ ಇದೆಯೇಕೆ? ಮುಸ್ಲಿಮರಲ್ಲಿ ಮಾತ್ರವೆ ಉಗ್ರರಿದ್ದಾರೆಯೇ? ಹಿಂದೂಗಳಲ್ಲಿ ಉಗ್ರರು, ಮೂಲಭೂತವಾದಿಗಳಿಲ್ಲವೇ? ಭಯೋತ್ಪಾದಕರು ಜಿಹಾದಿಗಳೂ ಮುಸ್ಲಿಮರಲ್ಲಿ ಮಾತ್ರವಿದ್ದಾರೆಂಬುದು ಪೂರ್ವಾಗ್ರಹಪೀಡಿತ ಅರ್ಧ ಸತ್ಯವಷ್ಟೆ.

ಇನ್ನು ಕ್ರಾಸ್ ಮದುವೆಗಳಾಗಿವೆ ಎಂದು ವಿರೋಧ ಪಕ್ಷದ ನಾಯಕರ ಮಾತಿಗೆ ಆಳುವ ರಾಜಕಾರಣಿಗಳು ಮುನಿದು ಹೊಗೆ ಹಾಕಿದ್ದಾರೆ. ಇಂತಹ ಮದುವೆಗಳು 600 ವರ್ಷ ಆಳಿದ ಮೊಘಲರ ಕಾಲದಲ್ಲೂ ನಂತರ 200 ವರ್ಷ ಆಳಿದ ಬ್ರಿಟಿಷರ ಕಾಲದಲ್ಲೂ ನಡೆದಿದೆ. ಇಲ್ಲಿರುವ ಬಹುತೇಕ ಮುಸ್ಲಿಮರು ಕ್ರಿಶ್ಚಿಯನ್ನರೂ ಕನ್ವರ್ಟೆಡ್ ಹಿಂದೂಗಳು. ಇಂತಹ ಕೇಸ್‌ಗಳು ವೇದಗಳ ಕಾಲದಲ್ಲೇ ನಡೆದಿವೆ, ವಸಿಷ್ಠ ಅರುಂಧತಿ, ಜಮದಗ್ನಿ ರೇಣುಕಾರ ವಿವಾಹಗಳಿಗೇನಂತೀರಿ?

ರಾಮಾಯಣ ಮಹಾಭಾರತ ಕಾಲದಲ್ಲಿಯೇ ಅನುಲೋಮ ಪ್ರತಿಲೋಮ ವಿವಾಹ ಪದ್ಧತಿಗಳು, ಸ್ವಯಂವರ ಗಾಂಧರ್ವವಿವಾಹ ನಾನಾ ನಮೂನೆ ವಿವಾಹಗಳು ಹಿಂದೂ ಧರ್ಮಗಳಲ್ಲಿದ್ದವೆಂಬುದನ್ನು ಭಕ್ತರು ಅರಿಯುವ ಅಗತ್ಯವಿದೆ.

ಹೀಗಂದರೆ ತಟ್ಟನೆ ಧರ್ಮದ್ರೋಹಿ, ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತದೆ. ಅಂಬೇಡ್ಕರ್ ಕೊಟ್ಟ ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರವೀಗ ನಡೆದಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲವೂ ಆಳುವವರ ಮುಖವಾಣಿಯಾಗಿದೆ. ವಿರೋಧ ಪಕ್ಷದಂತೆ ಧ್ವನಿ ಎತ್ತಬೇಕಾದ ದವರು ಆಳುವವರಿಗೆ ಮಾರಿಕೊಂಡು ಬಕೆಟ್ ಹಿಡಿದು ವಾಚಾಮಗೋಚರವಾಗಿ ಹೊಗಳಿ ಆಟ್ಟಕ್ಕೇರಿಸುತ್ತಾ ಅಸಹ್ಯ ಹುಟ್ಟಿಸುತ್ತಿದೆ. ಸರ್ಕಾರವಾಗಲಿ ಯಾರೇ ಅಗಲಿ ಕಾನೂನಿಗಿಂತ ಅತೀ ಅಲ್ಲವೆಂದು ತಿಳಿದೂ ಇಂತಹ ಕೆಲಸಕ್ಕೆ ಸರ್ಕಾರ ಕೈ ಹಾಕುವಲ್ಲಿ ಸದುದ್ದೇಶವಂತೂ ಕಾಣುತ್ತಿಲ್ಲ. ಎದೆ ಎಷ್ಟು ಇಂಚಿದೆ ಅನ್ನೋದು ದೊಡ್ಡ ವಿಷಯವಾಗದೆ ಮಿದುಳು ಎಷ್ಟಿದೆ ಎಂಬುದೀಗ ಸಾಬೀತಾಗಬೇಕಿದೆಯಲ್ಲವೆ.

  • ಡಾ. ಬಿ. ಎಲ್ ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ. 26 ಕಾದಂಬರಿಗಳನ್ನು ಪ್ರಕಟಿಸಿದ್ದು ಈ ಪೈಕಿ 9 ಚಲನಚಿತ್ರಗಳಾಗಿವೆ. ಕುವೆಂಪು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಇದನ್ನೂ ಓದಿ: ಅಂಬೇಡ್ಕರ್ ಚಿಂತನೆಗಳನ್ನು ತಿರುಚುವ ಕುತ್ಸಿತ ಶಕ್ತಿಗಳು ಮತ್ತು ಅವರ ಆಶಯಗಳನ್ನು ಮಣ್ಣುಗೂಡಿಸುವ ಕಾನೂನುಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...