Homeಮುಖಪುಟರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ರಾಮಾಯಣ ಮಹಾಭಾರತ ಕಾಲದಲ್ಲಿಯೇ ಅನುಲೋಮ ಪ್ರತಿಲೋಮ ವಿವಾಹ ಪದ್ಧತಿಗಳು, ಸ್ವಯಂವರ ಗಾಂಧರ್ವವಿವಾಹ ನಾನಾ ನಮೂನೆ ವಿವಾಹಗಳು ಹಿಂದೂ ಧರ್ಮಗಳಲ್ಲಿದ್ದವೆಂಬುದನ್ನು ಭಕ್ತರು ಅರಿಯುವ ಅಗತ್ಯವಿದೆ.

- Advertisement -
- Advertisement -

ಜನರಿಂದ ಆರಿಸಿ ಬಂದ ಸರ್ಕಾರವು ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ದೇಶದ ಭದ್ರತೆ, ಪ್ರಜೆಗಳ ಸೌಖ್ಯವನ್ನು ಮೆರೆತು ಏನೇನೋ ತರ್ಕ, ಕುತರ್ಕ, ಚಿಂತನೆಗಳ ಕರ್ಫ್ಯೂವನ್ನು ಪ್ರಜೆಗಳ ಮೇಲೆ ಹೇರಲು ಹವಣಿಸುತ್ತಿದೆ. ದೇಶದ ಆರ್ಥಿಕತೆಯ ಕುಸಿತ ಆಡಳಿತ ವೈಫಲ್ಯ ಮರೆಮಾಚಲು ದಿಢೀರನೆ ಒಂದು ದೇಶ ಒಂದು ಚುನಾವಣೆ ಅನ್ನೋದು. ಒಂದು ದೇಶ ಒಂದೇ ಧರ್ಮ ಒಂದೇ ಭಾಷೆ ಒಂದೇ ತೆರಿಗೆ ಅಂತ ಹೆದರಿಸೋದು ಅವ್ಯಾಹತವಾಗಿ ನಡೆದಿದೆ.

ಇದೆಲ್ಲಾ ದೇಶದ ಐಕ್ಯತೆಯನ್ನು ವಿಘಟನೆಯತ್ತ ಕೊಂಡೊಯುತ್ತದಲ್ಲದೆ ಆಯಾ ಭಾಷಿಕರ ಅಸ್ಮಿತೆಯ ಆತ್ಮಹತ್ಯೆಯಾದಿತೆಂಬುದರ ಬಗ್ಗೆ ಚಿಂತಿಸುತ್ತಿಲ್ಲ. ನಿರ್ದಿಷ್ಟ ಚುನಾವಣೆಯಲ್ಲಿ ಗೆಲ್ಲಲು ಆಯಾ ಸಮುದಾಯಗಳಿಗೆ ನಿಗಮಮಂಡಳಿ ಪ್ರಾಧಿಕಾರಗಳನ್ನು ಮಾಡ ಹೊರಡುವುದೂ ನಡೆಯುತ್ತಿದೆ.

ಸಾಲದ್ದಕ್ಕೆ ಇಲ್ಲದ ’ಲವ್ ಜಿಹಾದ್ ಬಗ್ಗೆ ಪ್ರಸ್ತಾಪಿಸಿ ಅಂತರಧರ್ಮೀಯ ಮದುವೆಗಳನ್ನು ನಿಷೇಧಿಸಲು ಪ್ರಯತ್ನಿಸಲಾಗುತ್ತಿದೆ. ’ಗೋಹತ್ಯೆ ನಿಷೇಧ’ ಜಾರಿಗೆ ತರುತ್ತೇವೆಂದು ಫರಮಾನು ಹೊರಡಿಸುತ್ತಾ ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳವರ ಮೇಲೆ ಸವಾರಿ ಮಾಡುವ ಚೋದ್ಯವೂ ನಡೆದಿದೆ. ಉತ್ತರ ಪ್ರದೇಶದಲ್ಲಿ ಜಾರಿಯಾಯಿತೆಂದು ’ಲವ್ ಜಿಹಾದ್ ಕಾಯ್ದೆ ತರಲು ಹೊರಟಿರುವ ಸರ್ಕಾರವೂ ಇದು ಅಸಂವಿಧಾನಿಕವೆಂದರಿಯದ್ದೇನಲ್ಲ. ನಿಗದಿಗೊಳಿಸಿದ ವಯೋಮಾನ ದಾಟಿದ ಪ್ರತಿ ಗಂಡು ಹೆಣ್ಣು ಇಷ್ಟಪಟ್ಟವರನ್ನು ವರಿಸುವ ಸ್ವಾತಂತ್ರ್ಯವಿದೆಯೆಂಬ ಕಾನೂನೇ ಇರುವಾಗ ನಿಯಮ ಹೇಗೆ ತರುತ್ತಾರಂತೆ! ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರನ್ನು, ಮುಸ್ಲಿಂ ಹುಡುಗರು ಹಿಂದೂ ಹುಡುಗಿಯರನ್ನು ಪ್ರೇಮಿಸಿ ವರಿಸಬಾರದೆಂಬ ಯಾವ ಕಾಯ್ದೆ ಇದೆ? ಬಲವಂತ ಮತಾಂತರ ತಪ್ಪಿರಬಹುದು. ಇಷ್ಟಪಟ್ಟ ಧರ್ಮಕ್ಕೆ ಮತಾಂತರವಾಗುವುದು ತಪ್ಪಲ್ಲವೆಂದು ಸಂವಿಧಾನವೇ ಸಾರಿರುವಾಗ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕೇಕೆ? ಮನುಷ್ಯರನ್ನು ಮನುಷ್ಯ ಮಟ್ಟಿಸಿಕೊಳ್ಳದ, ಮಮತೆ ತೋರದ ಧರ್ಮ ಒಂದಿದ್ದರೆ ಅದರಲ್ಲೆ ಉಳಿಯಲು ಜಿಗುಪ್ಸೆಗೊಂಡು ಪ್ರೀತಿ ಸಾಮರಸ್ಯ ಸಮಾನತೆ ತೋರುವ ಯಾವ ಧರ್ಮವಾದರೇನು ಹೋಗುವುದು ಸಹಜವಲ್ಲವೆ. ಕನಿಷ್ಟ ಜೊತೆಗೆ ಕೂತು ಉಣ್ಣದವರ ನಡುವೆ ವಿವಾಹಗಳಾದವೆ? ಹೀಗಾಗಿಯೇ ಕಾಲಕಾಲಕ್ಕೆ ರೂಪಾಂತರಗಳಾಗಿವೆ. ಅಪಾರ ಬುದ್ಧಿಮತ್ತೆ ಇರುವ ಮಾನವತಾವಾದಿ ಅಂಬೇಡ್ಕರ್ ಅಂಥವರೇ ನೋವುಂಡು ಬೌದ್ಧಧರ್ಮಕ್ಕೆ ಮತಾಂತರಗೊಂಡರೆಂದಾಗ ಜಾತಿಯ ಅಟ್ಟಹಾಸ ಅಳೆವ ಮಾಪನವೆಲ್ಲಿಂದ ತರೋದು ಹೇಳಿ.

ಹಿಂದೆಂದಿಗಿಂತಲೂ ಇಂದು ಭಾರತದಲ್ಲಿ ರಾಷ್ಟ್ರೀಯತೆಯನ್ನು ಪ್ರಚೋದಿಸುವ ಕಾರ್ಯ ಹೆಚ್ಚುತ್ತಿದೆ. ಧರ್ಮದ ಹೆಸರಿನಲ್ಲಿ ಮುಸ್ಲಿಂ ದ್ವೇಷವನ್ನು ವ್ಯವಸ್ಥಿತವಾಗಿ ಬಿತ್ತುವುದೂ ಸಹ ’ಜಿಹಾದಿ’ ಅಲ್ಲವೆ? ಜಿಹಾದಿಗೂ ಲವ್‌ಗೂ ಏಕೆ ಸಂಬಂಧ ಕಲ್ಪಿಸುತ್ತಿದ್ದಾರೊ! ’ಜಿಹಾ’ ಅಂದರೆ ಇಷ್ಟೆ ಅನ್ಯಾಯದ ವಿರುದ್ಧ ಹೋರಾಟ, ಮುಸ್ಲಿಂ ಬಾಂಧವರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಾ ಅವರ ಸಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ, ಅವರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಪ್ರಯತ್ನಗಳಾಗುತ್ತಿರುವುದು ಜನಸಮಾನ್ಯರಿಂದಲ್ಲ. ಆಳುವ ಪ್ರಭುತ್ವದಿಂದಲೇ ಎಂದಾಗ ಯಾರ ಬಳಿ ದೂರುವುದು? ಮುಸ್ಲಿಂ ಹುಡುಗರು ಮಾತ್ರವೇ ಪ್ರೀತಿಸಿ ಮದುವೆಯಾಗಿಯೋ, ಆಗದೆಯೋ ಮೋಸ ಮಾಡುತ್ತಿದ್ದಾರೆಯೆ? ಹಿಂದೂಗಳಲ್ಲಿಯೂ ಅದೆಷ್ಟು ಅಂತರ್ಜಾತಿ ವಿವಾಹಗಳು ವಿಫಲವಾಗಿಲ್ಲ ಹೇಳಿ. ಸನಾತನವ್ಯಾಧಿಗಳಿಂದಾಗಿ ಮರ್ಯಾದಾ ಹತ್ಯೆಗಳು ನಡೆಯುತ್ತಿಲ್ಲವೆ.

ಯಾವನೋ ಮುಸಲ್ಮಾನನೊಬ್ಬ ಹಿಂದೂ ಹೆಣ್ಣೊಬ್ಬಳಿಗೆ ಮೋಸ ಮಾಡಿದನೆಂದಾದರೆ ಅವನನ್ನು ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸದೆ, ಲವ್ ಜಿಹಾದಿ ನಿಷೇಧ ಕಾಯ್ದೆಗೆ ಮುಂದಾಗೋದು ನೆಗಡಿಯಾಯಿತೆಂದು ಮೂಗು ಕತ್ತರಿಸಿಕೊಂಡಂತೆ. ಇದನ್ನು ಕಾನೂನಿಂದ ಮಾನ್ಯ ಮಾಡಲು ಸಾಧ್ಯವೇ? ಜಾತಿ ಧರ್ಮದ ಹೊರತಾಗಿಯೂ ಇಬ್ಬರ ನಡುವಿನ ವೈಯಕ್ತಿಕ ಸಂಬಂಧವನ್ನು ಅತಿಕ್ರಮಿಸುವ ಸ್ವಾತಂತ್ರ್ಯ ಯಾರಿಗೂ ಇಲ್ಲವೆಂದು ಅಲಹಾಬಾದ್ ಹೈಕೋರ್ಟ್ ಹೇಳಿದ್ದಾಗಿದೆ. ಇತ್ತೀಚಿಗೆ ಇಂತದ್ದೇ ಪ್ರೇಮ ಪ್ರಕರಣದಲ್ಲಿ ರಮ್ಯ ಮತ್ತು ವಾಜಿದಾಖಾನ್‌ರ ಅಂತರ್ಧರ್ಮಿಯ ವಿವಾದ ವಿಚಾರದಲ್ಲಿ ನ್ಯಾಯಾಮೂರ್ತಿ ಎಸ್. ಸುಜಾತ ಹಾಗೂ ಸಚಿನ್ ಶಂಕರ್ ಮಗದಮ್ ಅವರುಗಳಿದ್ದ ಪೀಠ ಇಂತದ್ದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಆದರೂ ಸರ್ಕಾರ ಕಾಯ್ದೆ ತರಲು ಹೊರಟಿದೆ. ಇದು ಸ್ವಂತ ಆಲೋಚನೆಯೂ ಅಲ್ಲ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥರ ನಕಲು.

ಇನ್ನು ಗೋಹತ್ಯೆ ನಿಷೇಧದ ಮಾತು ಬೇರೆ. ಈ ವಿಷಯದಲ್ಲಾಗಲೇ ಧರ್ಮಧರ್ಮಗಳ ನಡುವೆ, ಜಾತಿಜಾತಿಗಳ ಮಧ್ಯೆ ಕೊಲೆಗಳೇ ಆಗಿವೆಯಾದರೂ ಹಗ್ಗಜಗ್ಗಾಟ ನಿಲ್ಲುವಂತಿಲ್ಲ. ಅನಾದಿಕಾಲದಲ್ಲಿ ಎಲ್ಲರೂ ಒಂದೇ ಜಾತಿಯವರೆ – ಬೇಟೆಯಾಡುವ ಬೇಡರು, ಎಲ್ಲಾ ಮಾಂಸಾಹಾರಿಗಳೇ. ಒಂದು ಕಾಲದಲ್ಲಿ ವೈದಿಕರೂ ಮಾಂಸಾಹಾರಿಗಳೇ ಎಂಬ ವಾದವೂ ಈಗ ಹಳೆಯದು. ನಾವು ಏನನ್ನು ಇಷ್ಟಪಟ್ಟು ಉಣ್ಣುತ್ತೇವೋ ಉಡುತ್ತೇವೋ ಹಾಗೆ ಮತಾಂತರವೋ ವೈಯಕ್ತಿಕ ಹಕ್ಕೆಂದು ಸಂವಿಧಾನದಲ್ಲಿ ಹೇಳಿದ್ದರೂ ಸರ್ಕಾರ ಜನರ ನೆಮ್ಮದಿಗೆ ಮತ್ತೆ ಮತ್ತೆ ಕೊಳ್ಳಿ ಇಡುವ ಯತ್ನ ಮಾಡುತ್ತಲೇ ಇದೆಯೇಕೆ? ಮುಸ್ಲಿಮರಲ್ಲಿ ಮಾತ್ರವೆ ಉಗ್ರರಿದ್ದಾರೆಯೇ? ಹಿಂದೂಗಳಲ್ಲಿ ಉಗ್ರರು, ಮೂಲಭೂತವಾದಿಗಳಿಲ್ಲವೇ? ಭಯೋತ್ಪಾದಕರು ಜಿಹಾದಿಗಳೂ ಮುಸ್ಲಿಮರಲ್ಲಿ ಮಾತ್ರವಿದ್ದಾರೆಂಬುದು ಪೂರ್ವಾಗ್ರಹಪೀಡಿತ ಅರ್ಧ ಸತ್ಯವಷ್ಟೆ.

ಇನ್ನು ಕ್ರಾಸ್ ಮದುವೆಗಳಾಗಿವೆ ಎಂದು ವಿರೋಧ ಪಕ್ಷದ ನಾಯಕರ ಮಾತಿಗೆ ಆಳುವ ರಾಜಕಾರಣಿಗಳು ಮುನಿದು ಹೊಗೆ ಹಾಕಿದ್ದಾರೆ. ಇಂತಹ ಮದುವೆಗಳು 600 ವರ್ಷ ಆಳಿದ ಮೊಘಲರ ಕಾಲದಲ್ಲೂ ನಂತರ 200 ವರ್ಷ ಆಳಿದ ಬ್ರಿಟಿಷರ ಕಾಲದಲ್ಲೂ ನಡೆದಿದೆ. ಇಲ್ಲಿರುವ ಬಹುತೇಕ ಮುಸ್ಲಿಮರು ಕ್ರಿಶ್ಚಿಯನ್ನರೂ ಕನ್ವರ್ಟೆಡ್ ಹಿಂದೂಗಳು. ಇಂತಹ ಕೇಸ್‌ಗಳು ವೇದಗಳ ಕಾಲದಲ್ಲೇ ನಡೆದಿವೆ, ವಸಿಷ್ಠ ಅರುಂಧತಿ, ಜಮದಗ್ನಿ ರೇಣುಕಾರ ವಿವಾಹಗಳಿಗೇನಂತೀರಿ?

ರಾಮಾಯಣ ಮಹಾಭಾರತ ಕಾಲದಲ್ಲಿಯೇ ಅನುಲೋಮ ಪ್ರತಿಲೋಮ ವಿವಾಹ ಪದ್ಧತಿಗಳು, ಸ್ವಯಂವರ ಗಾಂಧರ್ವವಿವಾಹ ನಾನಾ ನಮೂನೆ ವಿವಾಹಗಳು ಹಿಂದೂ ಧರ್ಮಗಳಲ್ಲಿದ್ದವೆಂಬುದನ್ನು ಭಕ್ತರು ಅರಿಯುವ ಅಗತ್ಯವಿದೆ.

ಹೀಗಂದರೆ ತಟ್ಟನೆ ಧರ್ಮದ್ರೋಹಿ, ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತದೆ. ಅಂಬೇಡ್ಕರ್ ಕೊಟ್ಟ ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರವೀಗ ನಡೆದಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲವೂ ಆಳುವವರ ಮುಖವಾಣಿಯಾಗಿದೆ. ವಿರೋಧ ಪಕ್ಷದಂತೆ ಧ್ವನಿ ಎತ್ತಬೇಕಾದ ದವರು ಆಳುವವರಿಗೆ ಮಾರಿಕೊಂಡು ಬಕೆಟ್ ಹಿಡಿದು ವಾಚಾಮಗೋಚರವಾಗಿ ಹೊಗಳಿ ಆಟ್ಟಕ್ಕೇರಿಸುತ್ತಾ ಅಸಹ್ಯ ಹುಟ್ಟಿಸುತ್ತಿದೆ. ಸರ್ಕಾರವಾಗಲಿ ಯಾರೇ ಅಗಲಿ ಕಾನೂನಿಗಿಂತ ಅತೀ ಅಲ್ಲವೆಂದು ತಿಳಿದೂ ಇಂತಹ ಕೆಲಸಕ್ಕೆ ಸರ್ಕಾರ ಕೈ ಹಾಕುವಲ್ಲಿ ಸದುದ್ದೇಶವಂತೂ ಕಾಣುತ್ತಿಲ್ಲ. ಎದೆ ಎಷ್ಟು ಇಂಚಿದೆ ಅನ್ನೋದು ದೊಡ್ಡ ವಿಷಯವಾಗದೆ ಮಿದುಳು ಎಷ್ಟಿದೆ ಎಂಬುದೀಗ ಸಾಬೀತಾಗಬೇಕಿದೆಯಲ್ಲವೆ.

  • ಡಾ. ಬಿ. ಎಲ್ ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ. 26 ಕಾದಂಬರಿಗಳನ್ನು ಪ್ರಕಟಿಸಿದ್ದು ಈ ಪೈಕಿ 9 ಚಲನಚಿತ್ರಗಳಾಗಿವೆ. ಕುವೆಂಪು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಇದನ್ನೂ ಓದಿ: ಅಂಬೇಡ್ಕರ್ ಚಿಂತನೆಗಳನ್ನು ತಿರುಚುವ ಕುತ್ಸಿತ ಶಕ್ತಿಗಳು ಮತ್ತು ಅವರ ಆಶಯಗಳನ್ನು ಮಣ್ಣುಗೂಡಿಸುವ ಕಾನೂನುಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...