Homeಮುಖಪುಟಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್!

ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್!

- Advertisement -
- Advertisement -

ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಟಿಎಂಸಿಯಲ್ಲಿಗ ಭಿನ್ನಾಭಿಪ್ರಾಯದ ಬಿರುಕು ಕಾಣಿಸಿಕೊಂಡಿದೆ. ಸರ್ಕಾರದಲ್ಲಿನ ಹಲವು ಹುದ್ದೆಗಳಲ್ಲಿ ಪಕ್ಷದ ಹಿರಿಯ ಮುಖಂಡರೆ ತುಂಬಿಕೊಂಡಿದ್ದು, ಕೆಲವರು ಎರಡು ಮೂರು ಹುದ್ದೆಗಳನ್ನು ನಿರ್ವಹಿಸುವ ಮೂಲಕ ಉಳಿದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ (ಒನ್ ಮ್ಯಾನ್ ಒನ್ ಪೋಸ್ಟ್) ಎಂಬ ಪ್ರಚಾರಾಂದೋಲನ ಸಹ ಆರಂಭಿಸಿದ್ದು, ಇದು ಮಮತಾ ಬ್ಯಾನರ್ಜಿಗೆ ಇರಿಸುಮುರಿಸು ತಂದಿದೆ. ಈ ವಿಚಾರವನ್ನು ಬಗೆಹರಿಸಲು ಇಂದು ಟಿಎಂಸಿ ಹಿರಿಯ ನಾಯಕರ ಸಭೆ ಕರೆಯಲಾಗಿದೆ.

ಅಭಿಷೇಕ್ ಬ್ಯಾನರ್ಜಿ ಪಕ್ಷದ ಎರಡನೇ ಉನ್ನತ ಸ್ಥಾನದಲ್ಲಿದ್ದಾರೆ. ಪ್ರಶಾಂತ್ ಕಿಶೋರ್‌ರವರ ಐ ಪ್ಯಾಕ್ ಅನ್ನು ಪಕ್ಷಕ್ಕೆ ಪರಿಚಯಿಸಿದ್ದೆ ಅವರು. ಆ ಮೂಲಕ ಪಕ್ಷ ಪ್ರಚಂಡ ಬಹುಮತ ಸಹ ಗಳಿಸಿತು. ಆದರೆ ಈಗ ಅದೇ ಐ ಪ್ಯಾಕ್ ಬಳಸಿಕೊಂಡು ಹಿರಿಯ ನಾಯಕರ ವಿರುದ್ಧ ಪ್ರಚಾರಾಂದೋಲನ ನಡೆಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಟಿಎಂಸಿ ನಾಯಕಿ ಚಂದ್ರಿಮ ಭಟ್ಟಾಚಾರ್ಯರವರು ನನ್ನ ಸಾಮಾಜಿಕ ಜಾಲತಾಣ ಖಾತೆಗಳ್ನು ಐ ಪ್ಯಾಕ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರೆ. ಚುನಾವಣೆ ಸಮಯದಲ್ಲಿ ಐ ಪ್ಯಾಕ್ ನನ್ನ ಹೆಸರಿನಲ್ಲಿ ಟ್ವಿಟರ್ ಖಾತೆ ತೆರೆದಿತ್ತು. ಇಂದು ಅದರಲ್ಲಿ ನನ್ನ ಗಮನಕ್ಕೆ ತಾರದೆ ‘ಒನ್ ಮ್ಯಾನ್ ಒನ್ ಪೋಸ್ಟ್’ ಎಂಬುದಾಗಿ ಪೋಸ್ಟ್ ಮಾಡಲಾಗಿದೆ. ಇದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಐ ಪ್ಯಾಕ್, “ಟಿಎಂಸಿ ಅಥವಾ ಅದರ ಯಾವುದೇ ನಾಯಕರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಂಡಲ್ ಮಾಡುವುದಿಲ್ಲ. ಈ ರೀತಿಯ ಆರೋಪ ಮಾಡುತ್ತಿರುವುದು ಸಂಪೂರ್ಣ ಸುಳ್ಳಾಗಿದೆ” ಎಂದಿದೆ.

ಅಲ್ಲದೆ ಟಿಎಂಸಿ ನಾಯಕಿ ಚಂದ್ರಿಮ ಭಟ್ಟಾಚಾರ್ಯರವರು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸಹ ಕಿಡಿಕಾರಿದ್ದಾರೆ. ನೀವು ಗೋವಾಗೆ ಪ್ರಚಾರ ಮಾಡಲು ಹೋಗುವುದಿಲ್ಲವೇ ಎಂಬ ಪ್ರಶ್ನೆಗೆ, “ಇಲ್ಲ ಅಲ್ಲಿ ಕೆಲವರು ಪ್ರಚಾರ ಮಾಡುತ್ತಿದ್ದಾರೆ. ನಾನು ಸಮಾಜವಾದಿ ಪಕ್ಷಕ್ಕೆ ಬೆಂಬಲ ಸೂಚಿಸಲು ಉತ್ತರ ಪ್ರದೇಶಕ್ಕೆ ಹೋಗುತ್ತೇನೆ” ಎಂದು ಅಭಿಷೇಕ್ ಹೆಸರು ಹೇಳದೆ ಕಮೆಂಟ್ ಮಾಡಿದ್ದಾರೆ.

ಮಮತಾ ಬ್ಯಾನರ್ಜಿಯವರು ಪಕ್ಷದ ಹಿರಿಯ ನಾಯಕರ ಪರವಾಗಿದ್ದಾರೆ. ಆದರೆ ಅಭಿಷೇಕ್ ಅದರ ವಿರುದ್ಧ ದನಿಯೆತ್ತಿದ್ದು ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಆದರೆ ಐ ಪ್ಯಾಕ್ ಆ ರೀತಿಯ ಭಿನ್ನಾಭಿಪ್ರಾಯ ಇಲ್ಲವೆಂದು ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...