Homeಕರ್ನಾಟಕಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

- Advertisement -
- Advertisement -

ಹೊಸ ವರ್ಷಾಚರಣೆ ವೇಳೆ ಅನೇಕ ಕನ್ನಡ ಟಿವಿ ಚಾನೆಲ್‌ಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ನಡುವೆ ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಕ್ಯಾಮೆರಾ ಮುಂದೆಯೆ ಯುವಕರೊಬ್ಬರಿಗೆ ಜನಾಂಗಿಯ ನಿಂದನೆ ಮಾಡಿದ್ದಾರೆ.

ಹೊಸವರ್ಷದ ಆಚರಣೆ ವೇಳೆ ಕನ್ನಡದ ಪ್ರಮುಖ ಸುದ್ದಿ ವಾಹಿನಿಗಳು ಬೆಂಗಳೂರಿನ ಎಂಜಿ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದ ಪಬ್‌ಗಳು ಮತ್ತು ಬಾರ್‌ಗಳಿಂದ ಯುವಕ, ಯುವತಿಯರು ನಿರ್ಗಮಿಸುವ ವೀಡಿಯೊಗಳನ್ನು ಪ್ರಸಾರ ಮಾಡಿತ್ತು. ಜೊತೆಗೆ ಅದಕ್ಕೆ ಕೆಟ್ಟದಾಗಿ ಶೀರ್ಷಿಕೆ ಹಾಕಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಪ್ರಸಾರ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಮಧ್ಯೆ, ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಅಶ್ವ ದಿವಿತ್ ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ಸೇರಿದ್ದ ಜನರೊಂದಿಗೆ ಹೊಸ ವರ್ಷಾಚರಣೆಯ ಅಭಿಪ್ರಾಯಗಳನ್ನು ಕೇಳುತ್ತಿದ್ದರು. ಈ ವೇಳೆ ಯುವಕನೊಬ್ಬ, ಸಿನಿಮಾ ಡೈಲಾಗ್‌ ಒಂದನ್ನು ಹೇಳುತ್ತಾ, ಏನ್ರಿ ಮೀಡಿಯಾ ಎಂದು ರಿಪಬ್ಲಿಕ್ ಕನ್ನಡ ಟಿವಿ ಮೈಕ್ ಮುಂದೆ ಕೇಳಿದ್ದಾರೆ. ಈ ವೇಳೆ ಅಸಮಾಧಾನದಿಂದ ಮಾತನಾಡಿದ ವರದಿಗಾರ ಅಶ್ವ ದಿವಿತ್, ”ಹೋಗೋ ಕರಿಯ ಹೋಗ್…” ಎಂದು ಕ್ಯಾಮೆರಾ ಮುಂದೆಯೆ ಎರೆಡೆರೆದು ಭಾರಿ ಹೇಳಿ, ಯುವಕನ ಜನಾಂಗೀಯ ನಿಂದನೆ ಮಾಡಿದ್ದಾರೆ.

ವಿಡಿಯೊವನ್ನು ರಿಪಬ್ಲಿಕ್ ಕನ್ನಡ ಟಿವಿ ತನ್ನ ಯೂಟ್ಯೂಬ್‌ನಲ್ಲಿ ಹಾಗೆ ಪ್ರಸಾರ ಮಾಡಿದ್ದು, ಅದನ್ನು ಹಾಗೆಯೆ ಉಳಿಸಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಗೌಡ್ರು ಸರ್ಕಾರ ಎಂಬ ಟ್ವಿಟರ್ ಖಾತೆಯೊಂದು, “ಏನ್ರಿ ಮೀಡಿಯಾ ಅಂದಿದ್ದಕ್ಕೆ ಅಷ್ಟೊಂದು ಕೋಪ ಬಂತಾ? ಪ್ರತಿಷ್ಠಿತ ಸಂಸ್ಥೆಯ ನ್ಯೂಸ್ ರಿಪೋರ್ಟರ್ ಒಬ್ಬ ಯುವಕನಿಗೆ ನೇರವಾಗಿ ಹೋಗೋ ಕರಿಯಾ ಎಂದು ಜನಾಂಗೀಯ ನಿಂದನೆ ಮಾಡುತ್ತಿದ್ದಾನೆ, ಹಾಗಾದರೆ ಅವನ ಮೇಲೆ ಕ್ರಮ ಕೈಗೊಳ್ಳಬಾರದೇಕೆ?” ಎಂದು ಪ್ರಶ್ನಿಸಿದ್ದಾರೆ.

ಇಷ್ಟೆ ಅಲ್ಲದೆ, ಕನ್ನಡದ ಇತರ ಟಿವಿ ಮಾಧ್ಯಮಗಳು, ಹೊಸ ವರ್ಷಾಚರಣೆ ಮಾಡುತ್ತಿದ್ದ ಯುವತಿಯರ ದೇಹದ ಮೇಲೆ ಕ್ಯಾಮರಾವನ್ನು ಜೂಮ್ ಮಾಡಿ, ಅದರಕ್ಕೆ ಅಶ್ಲೀಲ ಶೀರ್ಷಿಕೆಯನ್ನು ಹಾಕಿ ಪ್ರಸಾರ ಮಾಡಿವೆ. ಈ ಬಗ್ಗೆ ಸರ್ಕಾರ ಯಾವುದೆ ಪ್ರತಿಕ್ರಿಯೆ ನೀಡಿಲ್ಲ, ದೂರು ಕೂಡಾ ದಾಖಲಾಗಿಲ್ಲ. ಅಲ್ಲದೆ, ಮಹಿಳಾ ಆಯೋಗ ಮತ್ತು ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುವ ಯಾವುದೆ ಪ್ರಾಧಿಕಾರಗಳು ಪ್ರತಿಕ್ರಿಯೆ ನೀಡಿಲ್ಲ.

ಕನ್ನಡ ಮಾಧ್ಯಮಗಳ ಈ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ತಜ್ಞರು, “ಸಾರ್ವಜನಿಕ ಪ್ರದೇಶದಲ್ಲಿ ಚಿತ್ರೀಕರಿಸಲು ಯಾವುದೇ ಕಾನೂನು ನಿರ್ಬಂಧವಿಲ್ಲದಿದ್ದರೂ, ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಖಾಸಗಿ ವ್ಯಕ್ತಿಯ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡಿದರೆ ಕಾನೂನು ವಿರೋಧಿಯಾಗಿದೆ” ಎಂದು ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79, ಮಹಿಳೆಯ ಗೌಪ್ಯತೆಯ ಉಲ್ಲಂಘನೆ ಮಾಡಿ ಅವಮಾನಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದ ಕಠಿಣ ಶಿಕ್ಷೆಯಿದೆ.

ಇದನ್ನೂಓದಿ:  ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...