Homeಕರ್ನಾಟಕಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

- Advertisement -
- Advertisement -

ಹೊಸ ವರ್ಷಾಚರಣೆ ವೇಳೆ ಅನೇಕ ಕನ್ನಡ ಟಿವಿ ಚಾನೆಲ್‌ಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ನಡುವೆ ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಕ್ಯಾಮೆರಾ ಮುಂದೆಯೆ ಯುವಕರೊಬ್ಬರಿಗೆ ಜನಾಂಗಿಯ ನಿಂದನೆ ಮಾಡಿದ್ದಾರೆ.

ಹೊಸವರ್ಷದ ಆಚರಣೆ ವೇಳೆ ಕನ್ನಡದ ಪ್ರಮುಖ ಸುದ್ದಿ ವಾಹಿನಿಗಳು ಬೆಂಗಳೂರಿನ ಎಂಜಿ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದ ಪಬ್‌ಗಳು ಮತ್ತು ಬಾರ್‌ಗಳಿಂದ ಯುವಕ, ಯುವತಿಯರು ನಿರ್ಗಮಿಸುವ ವೀಡಿಯೊಗಳನ್ನು ಪ್ರಸಾರ ಮಾಡಿತ್ತು. ಜೊತೆಗೆ ಅದಕ್ಕೆ ಕೆಟ್ಟದಾಗಿ ಶೀರ್ಷಿಕೆ ಹಾಕಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಪ್ರಸಾರ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಮಧ್ಯೆ, ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಅಶ್ವ ದಿವಿತ್ ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ಸೇರಿದ್ದ ಜನರೊಂದಿಗೆ ಹೊಸ ವರ್ಷಾಚರಣೆಯ ಅಭಿಪ್ರಾಯಗಳನ್ನು ಕೇಳುತ್ತಿದ್ದರು. ಈ ವೇಳೆ ಯುವಕನೊಬ್ಬ, ಸಿನಿಮಾ ಡೈಲಾಗ್‌ ಒಂದನ್ನು ಹೇಳುತ್ತಾ, ಏನ್ರಿ ಮೀಡಿಯಾ ಎಂದು ರಿಪಬ್ಲಿಕ್ ಕನ್ನಡ ಟಿವಿ ಮೈಕ್ ಮುಂದೆ ಕೇಳಿದ್ದಾರೆ. ಈ ವೇಳೆ ಅಸಮಾಧಾನದಿಂದ ಮಾತನಾಡಿದ ವರದಿಗಾರ ಅಶ್ವ ದಿವಿತ್, ”ಹೋಗೋ ಕರಿಯ ಹೋಗ್…” ಎಂದು ಕ್ಯಾಮೆರಾ ಮುಂದೆಯೆ ಎರೆಡೆರೆದು ಭಾರಿ ಹೇಳಿ, ಯುವಕನ ಜನಾಂಗೀಯ ನಿಂದನೆ ಮಾಡಿದ್ದಾರೆ.

ವಿಡಿಯೊವನ್ನು ರಿಪಬ್ಲಿಕ್ ಕನ್ನಡ ಟಿವಿ ತನ್ನ ಯೂಟ್ಯೂಬ್‌ನಲ್ಲಿ ಹಾಗೆ ಪ್ರಸಾರ ಮಾಡಿದ್ದು, ಅದನ್ನು ಹಾಗೆಯೆ ಉಳಿಸಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಗೌಡ್ರು ಸರ್ಕಾರ ಎಂಬ ಟ್ವಿಟರ್ ಖಾತೆಯೊಂದು, “ಏನ್ರಿ ಮೀಡಿಯಾ ಅಂದಿದ್ದಕ್ಕೆ ಅಷ್ಟೊಂದು ಕೋಪ ಬಂತಾ? ಪ್ರತಿಷ್ಠಿತ ಸಂಸ್ಥೆಯ ನ್ಯೂಸ್ ರಿಪೋರ್ಟರ್ ಒಬ್ಬ ಯುವಕನಿಗೆ ನೇರವಾಗಿ ಹೋಗೋ ಕರಿಯಾ ಎಂದು ಜನಾಂಗೀಯ ನಿಂದನೆ ಮಾಡುತ್ತಿದ್ದಾನೆ, ಹಾಗಾದರೆ ಅವನ ಮೇಲೆ ಕ್ರಮ ಕೈಗೊಳ್ಳಬಾರದೇಕೆ?” ಎಂದು ಪ್ರಶ್ನಿಸಿದ್ದಾರೆ.

ಇಷ್ಟೆ ಅಲ್ಲದೆ, ಕನ್ನಡದ ಇತರ ಟಿವಿ ಮಾಧ್ಯಮಗಳು, ಹೊಸ ವರ್ಷಾಚರಣೆ ಮಾಡುತ್ತಿದ್ದ ಯುವತಿಯರ ದೇಹದ ಮೇಲೆ ಕ್ಯಾಮರಾವನ್ನು ಜೂಮ್ ಮಾಡಿ, ಅದರಕ್ಕೆ ಅಶ್ಲೀಲ ಶೀರ್ಷಿಕೆಯನ್ನು ಹಾಕಿ ಪ್ರಸಾರ ಮಾಡಿವೆ. ಈ ಬಗ್ಗೆ ಸರ್ಕಾರ ಯಾವುದೆ ಪ್ರತಿಕ್ರಿಯೆ ನೀಡಿಲ್ಲ, ದೂರು ಕೂಡಾ ದಾಖಲಾಗಿಲ್ಲ. ಅಲ್ಲದೆ, ಮಹಿಳಾ ಆಯೋಗ ಮತ್ತು ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುವ ಯಾವುದೆ ಪ್ರಾಧಿಕಾರಗಳು ಪ್ರತಿಕ್ರಿಯೆ ನೀಡಿಲ್ಲ.

ಕನ್ನಡ ಮಾಧ್ಯಮಗಳ ಈ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ತಜ್ಞರು, “ಸಾರ್ವಜನಿಕ ಪ್ರದೇಶದಲ್ಲಿ ಚಿತ್ರೀಕರಿಸಲು ಯಾವುದೇ ಕಾನೂನು ನಿರ್ಬಂಧವಿಲ್ಲದಿದ್ದರೂ, ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಖಾಸಗಿ ವ್ಯಕ್ತಿಯ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡಿದರೆ ಕಾನೂನು ವಿರೋಧಿಯಾಗಿದೆ” ಎಂದು ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79, ಮಹಿಳೆಯ ಗೌಪ್ಯತೆಯ ಉಲ್ಲಂಘನೆ ಮಾಡಿ ಅವಮಾನಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದ ಕಠಿಣ ಶಿಕ್ಷೆಯಿದೆ.

ಇದನ್ನೂಓದಿ:  ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...