Homeಕರ್ನಾಟಕಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

- Advertisement -
- Advertisement -

ಹೊಸ ವರ್ಷಾಚರಣೆ ವೇಳೆ ಅನೇಕ ಕನ್ನಡ ಟಿವಿ ಚಾನೆಲ್‌ಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ನಡುವೆ ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಕ್ಯಾಮೆರಾ ಮುಂದೆಯೆ ಯುವಕರೊಬ್ಬರಿಗೆ ಜನಾಂಗಿಯ ನಿಂದನೆ ಮಾಡಿದ್ದಾರೆ.

ಹೊಸವರ್ಷದ ಆಚರಣೆ ವೇಳೆ ಕನ್ನಡದ ಪ್ರಮುಖ ಸುದ್ದಿ ವಾಹಿನಿಗಳು ಬೆಂಗಳೂರಿನ ಎಂಜಿ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದ ಪಬ್‌ಗಳು ಮತ್ತು ಬಾರ್‌ಗಳಿಂದ ಯುವಕ, ಯುವತಿಯರು ನಿರ್ಗಮಿಸುವ ವೀಡಿಯೊಗಳನ್ನು ಪ್ರಸಾರ ಮಾಡಿತ್ತು. ಜೊತೆಗೆ ಅದಕ್ಕೆ ಕೆಟ್ಟದಾಗಿ ಶೀರ್ಷಿಕೆ ಹಾಕಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಪ್ರಸಾರ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಮಧ್ಯೆ, ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಅಶ್ವ ದಿವಿತ್ ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ಸೇರಿದ್ದ ಜನರೊಂದಿಗೆ ಹೊಸ ವರ್ಷಾಚರಣೆಯ ಅಭಿಪ್ರಾಯಗಳನ್ನು ಕೇಳುತ್ತಿದ್ದರು. ಈ ವೇಳೆ ಯುವಕನೊಬ್ಬ, ಸಿನಿಮಾ ಡೈಲಾಗ್‌ ಒಂದನ್ನು ಹೇಳುತ್ತಾ, ಏನ್ರಿ ಮೀಡಿಯಾ ಎಂದು ರಿಪಬ್ಲಿಕ್ ಕನ್ನಡ ಟಿವಿ ಮೈಕ್ ಮುಂದೆ ಕೇಳಿದ್ದಾರೆ. ಈ ವೇಳೆ ಅಸಮಾಧಾನದಿಂದ ಮಾತನಾಡಿದ ವರದಿಗಾರ ಅಶ್ವ ದಿವಿತ್, ”ಹೋಗೋ ಕರಿಯ ಹೋಗ್…” ಎಂದು ಕ್ಯಾಮೆರಾ ಮುಂದೆಯೆ ಎರೆಡೆರೆದು ಭಾರಿ ಹೇಳಿ, ಯುವಕನ ಜನಾಂಗೀಯ ನಿಂದನೆ ಮಾಡಿದ್ದಾರೆ.

ವಿಡಿಯೊವನ್ನು ರಿಪಬ್ಲಿಕ್ ಕನ್ನಡ ಟಿವಿ ತನ್ನ ಯೂಟ್ಯೂಬ್‌ನಲ್ಲಿ ಹಾಗೆ ಪ್ರಸಾರ ಮಾಡಿದ್ದು, ಅದನ್ನು ಹಾಗೆಯೆ ಉಳಿಸಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಗೌಡ್ರು ಸರ್ಕಾರ ಎಂಬ ಟ್ವಿಟರ್ ಖಾತೆಯೊಂದು, “ಏನ್ರಿ ಮೀಡಿಯಾ ಅಂದಿದ್ದಕ್ಕೆ ಅಷ್ಟೊಂದು ಕೋಪ ಬಂತಾ? ಪ್ರತಿಷ್ಠಿತ ಸಂಸ್ಥೆಯ ನ್ಯೂಸ್ ರಿಪೋರ್ಟರ್ ಒಬ್ಬ ಯುವಕನಿಗೆ ನೇರವಾಗಿ ಹೋಗೋ ಕರಿಯಾ ಎಂದು ಜನಾಂಗೀಯ ನಿಂದನೆ ಮಾಡುತ್ತಿದ್ದಾನೆ, ಹಾಗಾದರೆ ಅವನ ಮೇಲೆ ಕ್ರಮ ಕೈಗೊಳ್ಳಬಾರದೇಕೆ?” ಎಂದು ಪ್ರಶ್ನಿಸಿದ್ದಾರೆ.

ಇಷ್ಟೆ ಅಲ್ಲದೆ, ಕನ್ನಡದ ಇತರ ಟಿವಿ ಮಾಧ್ಯಮಗಳು, ಹೊಸ ವರ್ಷಾಚರಣೆ ಮಾಡುತ್ತಿದ್ದ ಯುವತಿಯರ ದೇಹದ ಮೇಲೆ ಕ್ಯಾಮರಾವನ್ನು ಜೂಮ್ ಮಾಡಿ, ಅದರಕ್ಕೆ ಅಶ್ಲೀಲ ಶೀರ್ಷಿಕೆಯನ್ನು ಹಾಕಿ ಪ್ರಸಾರ ಮಾಡಿವೆ. ಈ ಬಗ್ಗೆ ಸರ್ಕಾರ ಯಾವುದೆ ಪ್ರತಿಕ್ರಿಯೆ ನೀಡಿಲ್ಲ, ದೂರು ಕೂಡಾ ದಾಖಲಾಗಿಲ್ಲ. ಅಲ್ಲದೆ, ಮಹಿಳಾ ಆಯೋಗ ಮತ್ತು ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುವ ಯಾವುದೆ ಪ್ರಾಧಿಕಾರಗಳು ಪ್ರತಿಕ್ರಿಯೆ ನೀಡಿಲ್ಲ.

ಕನ್ನಡ ಮಾಧ್ಯಮಗಳ ಈ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ತಜ್ಞರು, “ಸಾರ್ವಜನಿಕ ಪ್ರದೇಶದಲ್ಲಿ ಚಿತ್ರೀಕರಿಸಲು ಯಾವುದೇ ಕಾನೂನು ನಿರ್ಬಂಧವಿಲ್ಲದಿದ್ದರೂ, ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಖಾಸಗಿ ವ್ಯಕ್ತಿಯ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡಿದರೆ ಕಾನೂನು ವಿರೋಧಿಯಾಗಿದೆ” ಎಂದು ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79, ಮಹಿಳೆಯ ಗೌಪ್ಯತೆಯ ಉಲ್ಲಂಘನೆ ಮಾಡಿ ಅವಮಾನಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದ ಕಠಿಣ ಶಿಕ್ಷೆಯಿದೆ.

ಇದನ್ನೂಓದಿ:  ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...