Homeಮುಖಪುಟ'ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯವಾಗಿದೆ': ಮಣಿಪುರದ ಶಿಬಿರಗಳಲ್ಲಿ 'ಚುನಾವಣೆ' ಬಗ್ಗೆ ಸಂತ್ರಸ್ತರ ಅಸಮಾಧಾನ

‘ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯವಾಗಿದೆ’: ಮಣಿಪುರದ ಶಿಬಿರಗಳಲ್ಲಿ ‘ಚುನಾವಣೆ’ ಬಗ್ಗೆ ಸಂತ್ರಸ್ತರ ಅಸಮಾಧಾನ

- Advertisement -
- Advertisement -

ಮತದಾನದ ಮೊದಲು ಬದುಕುವ ಹಕ್ಕು ಮುಖ್ಯವಾಗಿದೆ, ಮತದಾನದ ಮೊದಲು ಶಾಂತಿ ಮುಖ್ಯವಾಗಿದೆ ಎಂದು ಮಣಿಪುರದ ಪರಿಹಾರ ಶಿಬಿರಗಳಿಂದ ಆಗ್ರಹ ಕೇಳಿ ಬಂದಿದ್ದು, ‘ಮತದಾನ ನಮಗೆ ಏನೂ ಅಲ್ಲ’ ಎಂದು ಮಣಿಪುರ ಜನಾಂಗೀಯ ಹಿಂಸಾಚಾರದ ಸಂತ್ರಸ್ತರು ಹೇಳಿಕೊಂಡಿದ್ದಾರೆ.

‘ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಹಾಕಬೇಕು. ಚುನಾವಣೆ ನಮಗೆ ಏನೂ ಅಲ್ಲ’ ಎಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ 11 ತಿಂಗಳ ಹಿಂದೆ ತನ್ನ ಮನೆಯನ್ನು ಕಳೆದುಕೊಂಡು ಶಿಬಿರದಲ್ಲಿ ವಾಸಿಸುತ್ತಿರುವ ಸಂತ್ರಸ್ತೆ ನೋಬಿ ಹೇಳುತ್ತಾರೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಮತ ಚಲಾಯಿಸುವ ಮೊದಲು ಬದುಕುವ ಹಕ್ಕು ಮತ್ತು ಚುನಾವಣೆಯ ಮೊದಲು ಶಾಂತಿ ಎಂಬ ಬೇಡಿಕೆಯನ್ನು ನೋಬಿ ಮಾತ್ರ ಮುಂದಿಟ್ಟಿರುವುದಲ್ಲ, ಮನೆಗೆ ಮರಳಲು ಸಾಧ್ಯವಾಗದೆ ಪರಿಹಾರ ಶಿಬಿರಗಳಲ್ಲಿ ದಿನದೂಡುತ್ತಿರುವ ಪ್ರತಿಯೊಬ್ಬ ನಿರಾಶ್ರಿತರ ಆಗ್ರಹ ಇದಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಣಿಪುರದಲ್ಲಿ ಶೇಕಡಾ 82ಕ್ಕಿಂತ ಹೆಚ್ಚು ಮತದಾನ ದಾಖಲಾಗುವುದರೊಂದಿಗೆ ರಾಜ್ಯವು ಸಾಂಪ್ರದಾಯಿಕವಾಗಿ ಅತಿ ಹೆಚ್ಚು ಮತದಾನವನ್ನು ಮಾಡಿದ ರಾಜ್ಯಗಳಲ್ಲಿ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಜನಾಂಗೀಯ ಹಿಂಸಾಚಾರವು ಈ ಬಾರಿಯ ಮತದಾನದ ಮೇಲೆ ಕರಿನೆರಳು ಬೀರಿದ್ದು, ಹಲವಾರು ನಾಗರಿಕ ಸಮಾಜದ ಗುಂಪುಗಳು ಮತ್ತು ಹಿಂಸಾಚಾರ ಪೀಡಿತ ಜನರು ಪ್ರಸ್ತುತ ಪರಿಸ್ಥಿತಿಯಲ್ಲಿ ಚುನಾವಣೆಗಳನ್ನು ನಡೆಸುವ ಬಗೆಯ ಪ್ರಸ್ತುತತೆಯನ್ನು ಪ್ರಶ್ನಿಸುತ್ತಿದ್ದಾರೆ.

ಗೌರವದಿಂದ ಬದುಕುವ ನನ್ನ ಹಕ್ಕನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಮತ್ತು ಅವರು ನನ್ನ ಮತದಾನದ ಹಕ್ಕನ್ನು ಖಚಿತಪಡಿಸಲು ಹೊರಟಿದ್ದಾರೆಯೇ? ನನ್ನ ಕಣ್ಣೆದುರೇ ನನ್ನ ಮನೆ ಸುಟ್ಟುಹೋಯಿತು. ನಾನು ಮತ್ತು ನನ್ನ ಕುಟುಂಬ ರಾತ್ರೋರಾತ್ರಿ ಅಲ್ಲಿಂದ ಪಲಾಯನ ಮಾಡಿದೆವು. ಅಲ್ಲಿ ಏನು ಉಳಿದಿದೆ ಎಂದು ನಮಗೆ ತಿಳಿದಿಲ್ಲ. ಇನ್ನು ಮುಂದೆ ನನ್ನದಲ್ಲದ ಸ್ಥಳದ ಪ್ರತಿನಿಧಿಗೆ ನಾನು ಏಕೆ ಮತ ಹಾಕಬೇಕು? ಇದೆಲ್ಲವೂ ಗಿಮಿಕ್, ಚುನಾವಣೆಗಳು ನಮಗೆ ಏನೂ ಅಲ್ಲ ಎಂದು ನೋಬಿ ಹೇಳಿದ್ದಾರೆ.

ಮಣಿಪುರ ರಾಜ್ಯವು ಕಳೆದ ವರ್ಷ ಮೇ 3ರಿಂದ ಬಹುಸಂಖ್ಯಾತ ಮೈತೈ ಸಮುದಾಯ ಮತ್ತು ಕುಕಿಗಳ ನಡುವೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ನಿರಂತರವಾಗಿ ಮುಂದುವರಿದ ಹಿಂಸಾಚಾರದ ಪರಿಣಾಮವಾಗಿ 200ಕ್ಕೂ ಹೆಚ್ಚು ಜೀವಗಳು ಬಲಿಯಾಗಿದೆ. ಮೈತೈ ಸಮುದಾಯದ ಜನರು ಇಂಫಾಲ್‌ ನಗರದಲ್ಲಿ ವಾಸಿಸುತ್ತಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಣಿಪುರದ ಕೆಲವು ಭಾಗಗಳಲ್ಲಿ ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಮತದಾನವಾದರೆ, ಉಳಿದ ಭಾಗಗಳಲ್ಲಿ ಏಪ್ರಿಲ್ 26ರಂದು 2ನೇ ಹಂತದಲ್ಲಿ ಮತದಾನ ನಡೆಯಲಿವೆ. ಅಧಿಕಾರಿಗಳ ಪ್ರಕಾರ, ಮಣಿಪುರದಲ್ಲಿ ಅಶಾಂತಿಯ ನಂತರ 50,000ಕ್ಕೂ ಹೆಚ್ಚು ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಶಿಬಿರಗಳಲ್ಲಿನ ಸಂತ್ರಸ್ತರು, ಲೋಕಸಭೆ ಚುನಾವಣೆಯ ಸಮಯವನ್ನು ಪ್ರಶ್ನಿಸಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಮತದಾನವನ್ನು ಆಯೋಜಿಸುವ ಕಲ್ಪನೆಯು ಒಂದು ಗಿಮಿಕ್ ಹೊರತು ಬೇರೇನೂ ಅಲ್ಲ ಎಂದು  ಹೇಳಿದ್ದಾರೆ. ಇಂಫಾಲ್ ಕಣಿವೆಯ ನಾಲ್ಕು ಪರಿಹಾರ ಶಿಬಿರಗಳಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು: ಪ್ರಣಾಳಿಕೆ ಕುರಿತ ಟೀಕೆಗೆ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...