Homeಮುಖಪುಟ'ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯವಾಗಿದೆ': ಮಣಿಪುರದ ಶಿಬಿರಗಳಲ್ಲಿ 'ಚುನಾವಣೆ' ಬಗ್ಗೆ ಸಂತ್ರಸ್ತರ ಅಸಮಾಧಾನ

‘ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯವಾಗಿದೆ’: ಮಣಿಪುರದ ಶಿಬಿರಗಳಲ್ಲಿ ‘ಚುನಾವಣೆ’ ಬಗ್ಗೆ ಸಂತ್ರಸ್ತರ ಅಸಮಾಧಾನ

- Advertisement -
- Advertisement -

ಮತದಾನದ ಮೊದಲು ಬದುಕುವ ಹಕ್ಕು ಮುಖ್ಯವಾಗಿದೆ, ಮತದಾನದ ಮೊದಲು ಶಾಂತಿ ಮುಖ್ಯವಾಗಿದೆ ಎಂದು ಮಣಿಪುರದ ಪರಿಹಾರ ಶಿಬಿರಗಳಿಂದ ಆಗ್ರಹ ಕೇಳಿ ಬಂದಿದ್ದು, ‘ಮತದಾನ ನಮಗೆ ಏನೂ ಅಲ್ಲ’ ಎಂದು ಮಣಿಪುರ ಜನಾಂಗೀಯ ಹಿಂಸಾಚಾರದ ಸಂತ್ರಸ್ತರು ಹೇಳಿಕೊಂಡಿದ್ದಾರೆ.

‘ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಹಾಕಬೇಕು. ಚುನಾವಣೆ ನಮಗೆ ಏನೂ ಅಲ್ಲ’ ಎಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ 11 ತಿಂಗಳ ಹಿಂದೆ ತನ್ನ ಮನೆಯನ್ನು ಕಳೆದುಕೊಂಡು ಶಿಬಿರದಲ್ಲಿ ವಾಸಿಸುತ್ತಿರುವ ಸಂತ್ರಸ್ತೆ ನೋಬಿ ಹೇಳುತ್ತಾರೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಮತ ಚಲಾಯಿಸುವ ಮೊದಲು ಬದುಕುವ ಹಕ್ಕು ಮತ್ತು ಚುನಾವಣೆಯ ಮೊದಲು ಶಾಂತಿ ಎಂಬ ಬೇಡಿಕೆಯನ್ನು ನೋಬಿ ಮಾತ್ರ ಮುಂದಿಟ್ಟಿರುವುದಲ್ಲ, ಮನೆಗೆ ಮರಳಲು ಸಾಧ್ಯವಾಗದೆ ಪರಿಹಾರ ಶಿಬಿರಗಳಲ್ಲಿ ದಿನದೂಡುತ್ತಿರುವ ಪ್ರತಿಯೊಬ್ಬ ನಿರಾಶ್ರಿತರ ಆಗ್ರಹ ಇದಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಣಿಪುರದಲ್ಲಿ ಶೇಕಡಾ 82ಕ್ಕಿಂತ ಹೆಚ್ಚು ಮತದಾನ ದಾಖಲಾಗುವುದರೊಂದಿಗೆ ರಾಜ್ಯವು ಸಾಂಪ್ರದಾಯಿಕವಾಗಿ ಅತಿ ಹೆಚ್ಚು ಮತದಾನವನ್ನು ಮಾಡಿದ ರಾಜ್ಯಗಳಲ್ಲಿ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಜನಾಂಗೀಯ ಹಿಂಸಾಚಾರವು ಈ ಬಾರಿಯ ಮತದಾನದ ಮೇಲೆ ಕರಿನೆರಳು ಬೀರಿದ್ದು, ಹಲವಾರು ನಾಗರಿಕ ಸಮಾಜದ ಗುಂಪುಗಳು ಮತ್ತು ಹಿಂಸಾಚಾರ ಪೀಡಿತ ಜನರು ಪ್ರಸ್ತುತ ಪರಿಸ್ಥಿತಿಯಲ್ಲಿ ಚುನಾವಣೆಗಳನ್ನು ನಡೆಸುವ ಬಗೆಯ ಪ್ರಸ್ತುತತೆಯನ್ನು ಪ್ರಶ್ನಿಸುತ್ತಿದ್ದಾರೆ.

ಗೌರವದಿಂದ ಬದುಕುವ ನನ್ನ ಹಕ್ಕನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಮತ್ತು ಅವರು ನನ್ನ ಮತದಾನದ ಹಕ್ಕನ್ನು ಖಚಿತಪಡಿಸಲು ಹೊರಟಿದ್ದಾರೆಯೇ? ನನ್ನ ಕಣ್ಣೆದುರೇ ನನ್ನ ಮನೆ ಸುಟ್ಟುಹೋಯಿತು. ನಾನು ಮತ್ತು ನನ್ನ ಕುಟುಂಬ ರಾತ್ರೋರಾತ್ರಿ ಅಲ್ಲಿಂದ ಪಲಾಯನ ಮಾಡಿದೆವು. ಅಲ್ಲಿ ಏನು ಉಳಿದಿದೆ ಎಂದು ನಮಗೆ ತಿಳಿದಿಲ್ಲ. ಇನ್ನು ಮುಂದೆ ನನ್ನದಲ್ಲದ ಸ್ಥಳದ ಪ್ರತಿನಿಧಿಗೆ ನಾನು ಏಕೆ ಮತ ಹಾಕಬೇಕು? ಇದೆಲ್ಲವೂ ಗಿಮಿಕ್, ಚುನಾವಣೆಗಳು ನಮಗೆ ಏನೂ ಅಲ್ಲ ಎಂದು ನೋಬಿ ಹೇಳಿದ್ದಾರೆ.

ಮಣಿಪುರ ರಾಜ್ಯವು ಕಳೆದ ವರ್ಷ ಮೇ 3ರಿಂದ ಬಹುಸಂಖ್ಯಾತ ಮೈತೈ ಸಮುದಾಯ ಮತ್ತು ಕುಕಿಗಳ ನಡುವೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ನಿರಂತರವಾಗಿ ಮುಂದುವರಿದ ಹಿಂಸಾಚಾರದ ಪರಿಣಾಮವಾಗಿ 200ಕ್ಕೂ ಹೆಚ್ಚು ಜೀವಗಳು ಬಲಿಯಾಗಿದೆ. ಮೈತೈ ಸಮುದಾಯದ ಜನರು ಇಂಫಾಲ್‌ ನಗರದಲ್ಲಿ ವಾಸಿಸುತ್ತಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಣಿಪುರದ ಕೆಲವು ಭಾಗಗಳಲ್ಲಿ ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಮತದಾನವಾದರೆ, ಉಳಿದ ಭಾಗಗಳಲ್ಲಿ ಏಪ್ರಿಲ್ 26ರಂದು 2ನೇ ಹಂತದಲ್ಲಿ ಮತದಾನ ನಡೆಯಲಿವೆ. ಅಧಿಕಾರಿಗಳ ಪ್ರಕಾರ, ಮಣಿಪುರದಲ್ಲಿ ಅಶಾಂತಿಯ ನಂತರ 50,000ಕ್ಕೂ ಹೆಚ್ಚು ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಶಿಬಿರಗಳಲ್ಲಿನ ಸಂತ್ರಸ್ತರು, ಲೋಕಸಭೆ ಚುನಾವಣೆಯ ಸಮಯವನ್ನು ಪ್ರಶ್ನಿಸಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಮತದಾನವನ್ನು ಆಯೋಜಿಸುವ ಕಲ್ಪನೆಯು ಒಂದು ಗಿಮಿಕ್ ಹೊರತು ಬೇರೇನೂ ಅಲ್ಲ ಎಂದು  ಹೇಳಿದ್ದಾರೆ. ಇಂಫಾಲ್ ಕಣಿವೆಯ ನಾಲ್ಕು ಪರಿಹಾರ ಶಿಬಿರಗಳಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು: ಪ್ರಣಾಳಿಕೆ ಕುರಿತ ಟೀಕೆಗೆ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...