Homeಮುಖಪುಟಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯ: ಮಣಿಪುರ ಹಿಂಸಾಚಾರ ಸಂತ್ರಸ್ತರ ಅಳಲು

ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯ: ಮಣಿಪುರ ಹಿಂಸಾಚಾರ ಸಂತ್ರಸ್ತರ ಅಳಲು

- Advertisement -
- Advertisement -

“ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಹಾಕಬೇಕು? ಚುನಾವಣೆ ಎಂದರೆ ನಮಗೆ ಏನೂ ಅಲ್ಲ” ಇದು ಕಳೆದ 11 ತಿಂಗಳ ಹಿಂದೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡ ನೋಬಿ ಎಂಬ ಮಹಿಳೆಯ ಮಾತು.

ಇದು 42 ವರ್ಷದ ನೋಬಿ ಒಬ್ಬರ ಹೇಳಿಕೆಯಲ್ಲ. ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಸಂಘರ್ಷದಿಂದ ಮನೆ ಕಳೆದುಕೊಂಡು ಪ್ರಸ್ತುತ ಶಿಬಿರಗಳಲ್ಲಿ ವಾಸಿಸುತ್ತಿರುವ ಹಲವರು “ನಮಗೆ ಮತದಾನದ ಹಕ್ಕಿಗಿಂತ ಮೊದಲು ಬದುಕುವ ಹಕ್ಕು ಬೇಕು” ಎಂದು ಹೇಳುತ್ತಿದ್ದಾರೆ.

2019ರ ಚುನಾವಣೆಯಲ್ಲಿ ಶೇಕಡಾ 82ಕ್ಕಿಂತ ಹೆಚ್ಚು ಮತದಾನದ ಮೂಲಕ ರಾಜ್ಯವು ಅತೀ ಹೆಚ್ಚು ಮತದಾನದ ಹೆಗ್ಗಳಿಕೆ ಪಡೆದಿತ್ತು. ಆದರೆ, ಕಳೆದ ವರ್ಷದ ನಡೆದ ಜನಾಂಗೀಯ ಸಂಘರ್ಷ ಈ ಬಾರಿಯ ಮತದಾನದ ಮೇಲೆ ಕರಿ ನೆರಳು ಬೀರಿದ್ದು, ಹಿಂಸಾಚಾರದಿಂದ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡ ಜನರು ಈಗ ಚುನಾವಣೆಯ ಅಗತ್ಯವೇನಿದೆ ಎಂದು ಕೇಳುತ್ತಿದ್ದಾರೆ.

“ಗೌರವದಿಂದ ಬದುಕುವ ನನ್ನ ಹಕ್ಕನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈಗ ನನ್ನ ಮತದಾನದ ಹಕ್ಕನ್ನು ಖಚಿತಪಡಿಸಲು ಹೊರಟಿದ್ದಾರೆಯೇ?” ಎಂದು ನೋಬಿ ಪ್ರಶ್ನಿಸಿದ್ದಾರೆ.

“ನನ್ನ ಕಣ್ಣೆದುರೇ ನನ್ನ ಮನೆ ಸುಟ್ಟು ಹೋಯಿತು. ನಾನು ಮತ್ತು ನನ್ನ ಕುಟುಂಬದವರು ರಾತ್ರೋ ರಾತ್ರಿ ಮನೆ ಬಿಟ್ಟು ಹೊರಟೆವು. ಅಲ್ಲಿ ಈಗ ಏನು ಉಳಿದಿದೆ ಎಂದು ನಮಗೆ ಗೊತ್ತಿಲ್ಲ. ಇನ್ನು ಮುಂದೆ ಆ ಸ್ಥಳ ನನ್ನದಲ್ಲ. ಹೀಗಿರುವಾಗ ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಮತ ಹಾಕಬೇಕು? ಇದೆಲ್ಲವೂ ಗಿಮಿಕ್… ಚುನಾವಣೆ ಎಂದರೆ ನಮಗೆ ಏನೂ ಎಂದೇ ಅರ್ಥವಾಗುತ್ತಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಜೊತೆ ನೋಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಣಿಪುರದಲ್ಲಿ ಕಳೆದ ವರ್ಷದ ಮೇ 3ರಂದು ಪ್ರಾರಂಭಗೊಂಡ ಕುಕೀಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷ 200 ಜನರನ್ನು ಬಲಿ ಪಡೆದಿದೆ. ಪ್ರಸ್ತುತ ಮೈತೇಯಿ ಸಮುದಾಯದವರು ಇಂಫಾಲ್ ನಗರದಲ್ಲಿ ಕೇಂದ್ರೀಕೃತವಾಗಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳಲ್ಲಿ ಉಳಿದುಕೊಂಡಿದ್ದಾರೆ. ಮಣಿಪುರ ಎಂಬ ರಾಜ್ಯವು ಎರಡು ಹೋಳಾದಂತಾಗಿದೆ.

ಮಣಿಪುರದ ಎರಡು ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನರ್ ಮಣಿಪುರ ಮತ್ತು ಔಟರ್ ಮಣಿಪುರದ ಕೆಲವು ಭಾಗಗಳಲ್ಲಿ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಔಟರ್ ಮಣಿಪುರದ ಉಳಿದ ಭಾಗಗಳಲ್ಲಿ ಏಪ್ರಿಲ್ 2 ಮತ್ತು 26 ರಂದು ಹಂತ ಹಂತವಾಗಿ ಮತದಾನ ನಡೆಯಲಿವೆ.

ಅಧಿಕಾರಿಗಳ ಪ್ರಕಾರ, ಹಿಂಸಾಚಾರದ ನಂತರ 50,000 ಕ್ಕೂ ಹೆಚ್ಚು ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಈ ಬಾರಿಯ ಚುನಾವಣೆಯನ್ನೇ ಅವರು ಪ್ರಶ್ನಿಸಿದ್ದು, ಇದೊಂದು ಗಿಮಿಕ್ ಮಾತ್ರವಲ್ಲದೆ, ನಮ್ಮ ನಿಜವಾದ ಸಮಸ್ಯೆಗಳು ಪರಿಹಾರಗೊಳ್ಳುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...