Homeಮುಖಪುಟಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯ: ಮಣಿಪುರ ಹಿಂಸಾಚಾರ ಸಂತ್ರಸ್ತರ ಅಳಲು

ಮತದಾನದ ಹಕ್ಕಿಗಿಂತ ಬದುಕುವ ಹಕ್ಕು ಮುಖ್ಯ: ಮಣಿಪುರ ಹಿಂಸಾಚಾರ ಸಂತ್ರಸ್ತರ ಅಳಲು

- Advertisement -
- Advertisement -

“ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಹಾಕಬೇಕು? ಚುನಾವಣೆ ಎಂದರೆ ನಮಗೆ ಏನೂ ಅಲ್ಲ” ಇದು ಕಳೆದ 11 ತಿಂಗಳ ಹಿಂದೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಮನೆ ಕಳೆದುಕೊಂಡ ನೋಬಿ ಎಂಬ ಮಹಿಳೆಯ ಮಾತು.

ಇದು 42 ವರ್ಷದ ನೋಬಿ ಒಬ್ಬರ ಹೇಳಿಕೆಯಲ್ಲ. ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಸಂಘರ್ಷದಿಂದ ಮನೆ ಕಳೆದುಕೊಂಡು ಪ್ರಸ್ತುತ ಶಿಬಿರಗಳಲ್ಲಿ ವಾಸಿಸುತ್ತಿರುವ ಹಲವರು “ನಮಗೆ ಮತದಾನದ ಹಕ್ಕಿಗಿಂತ ಮೊದಲು ಬದುಕುವ ಹಕ್ಕು ಬೇಕು” ಎಂದು ಹೇಳುತ್ತಿದ್ದಾರೆ.

2019ರ ಚುನಾವಣೆಯಲ್ಲಿ ಶೇಕಡಾ 82ಕ್ಕಿಂತ ಹೆಚ್ಚು ಮತದಾನದ ಮೂಲಕ ರಾಜ್ಯವು ಅತೀ ಹೆಚ್ಚು ಮತದಾನದ ಹೆಗ್ಗಳಿಕೆ ಪಡೆದಿತ್ತು. ಆದರೆ, ಕಳೆದ ವರ್ಷದ ನಡೆದ ಜನಾಂಗೀಯ ಸಂಘರ್ಷ ಈ ಬಾರಿಯ ಮತದಾನದ ಮೇಲೆ ಕರಿ ನೆರಳು ಬೀರಿದ್ದು, ಹಿಂಸಾಚಾರದಿಂದ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡ ಜನರು ಈಗ ಚುನಾವಣೆಯ ಅಗತ್ಯವೇನಿದೆ ಎಂದು ಕೇಳುತ್ತಿದ್ದಾರೆ.

“ಗೌರವದಿಂದ ಬದುಕುವ ನನ್ನ ಹಕ್ಕನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈಗ ನನ್ನ ಮತದಾನದ ಹಕ್ಕನ್ನು ಖಚಿತಪಡಿಸಲು ಹೊರಟಿದ್ದಾರೆಯೇ?” ಎಂದು ನೋಬಿ ಪ್ರಶ್ನಿಸಿದ್ದಾರೆ.

“ನನ್ನ ಕಣ್ಣೆದುರೇ ನನ್ನ ಮನೆ ಸುಟ್ಟು ಹೋಯಿತು. ನಾನು ಮತ್ತು ನನ್ನ ಕುಟುಂಬದವರು ರಾತ್ರೋ ರಾತ್ರಿ ಮನೆ ಬಿಟ್ಟು ಹೊರಟೆವು. ಅಲ್ಲಿ ಈಗ ಏನು ಉಳಿದಿದೆ ಎಂದು ನಮಗೆ ಗೊತ್ತಿಲ್ಲ. ಇನ್ನು ಮುಂದೆ ಆ ಸ್ಥಳ ನನ್ನದಲ್ಲ. ಹೀಗಿರುವಾಗ ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಮತ ಹಾಕಬೇಕು? ಇದೆಲ್ಲವೂ ಗಿಮಿಕ್… ಚುನಾವಣೆ ಎಂದರೆ ನಮಗೆ ಏನೂ ಎಂದೇ ಅರ್ಥವಾಗುತ್ತಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಜೊತೆ ನೋಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಣಿಪುರದಲ್ಲಿ ಕಳೆದ ವರ್ಷದ ಮೇ 3ರಂದು ಪ್ರಾರಂಭಗೊಂಡ ಕುಕೀಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷ 200 ಜನರನ್ನು ಬಲಿ ಪಡೆದಿದೆ. ಪ್ರಸ್ತುತ ಮೈತೇಯಿ ಸಮುದಾಯದವರು ಇಂಫಾಲ್ ನಗರದಲ್ಲಿ ಕೇಂದ್ರೀಕೃತವಾಗಿದ್ದರೆ, ಕುಕಿಗಳು ಬೆಟ್ಟ ಪ್ರದೇಶಗಳಲ್ಲಿ ಉಳಿದುಕೊಂಡಿದ್ದಾರೆ. ಮಣಿಪುರ ಎಂಬ ರಾಜ್ಯವು ಎರಡು ಹೋಳಾದಂತಾಗಿದೆ.

ಮಣಿಪುರದ ಎರಡು ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನರ್ ಮಣಿಪುರ ಮತ್ತು ಔಟರ್ ಮಣಿಪುರದ ಕೆಲವು ಭಾಗಗಳಲ್ಲಿ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಔಟರ್ ಮಣಿಪುರದ ಉಳಿದ ಭಾಗಗಳಲ್ಲಿ ಏಪ್ರಿಲ್ 2 ಮತ್ತು 26 ರಂದು ಹಂತ ಹಂತವಾಗಿ ಮತದಾನ ನಡೆಯಲಿವೆ.

ಅಧಿಕಾರಿಗಳ ಪ್ರಕಾರ, ಹಿಂಸಾಚಾರದ ನಂತರ 50,000 ಕ್ಕೂ ಹೆಚ್ಚು ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಈ ಬಾರಿಯ ಚುನಾವಣೆಯನ್ನೇ ಅವರು ಪ್ರಶ್ನಿಸಿದ್ದು, ಇದೊಂದು ಗಿಮಿಕ್ ಮಾತ್ರವಲ್ಲದೆ, ನಮ್ಮ ನಿಜವಾದ ಸಮಸ್ಯೆಗಳು ಪರಿಹಾರಗೊಳ್ಳುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...