Homeಮುಖಪುಟಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

- Advertisement -
- Advertisement -

ಹೆರಿಗೆ ರಜೆ ಎಂಬುದು ಮಹಿಳಾ ಉದ್ಯೋಗಿಯ ಸಂತಾನೋತ್ಪತ್ತಿ ಹಕ್ಕು ಮತ್ತು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನ ಭಾಗವಾಗಿದೆ. ಮಹಿಳೆಗೆ ಜನಿಸಿದ್ದು ಮೂರನೇ ಮಗು, ಎರಡನೇ ಮದುವೆಯಿಂದ ಪಡೆದದ್ದು ಎಂಬ ಕಾರಣಗಳನ್ನು ಮುಂದಿಟ್ಟು ಆಕೆಗೆ ಹೆರಿಗೆ ರಜೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.23) ತೀರ್ಪು ನೀಡಿದೆ.

ಮಹಿಳಾ ಉದ್ಯೋಗಿ ಮೂರನೇ ಮಗುವಿಗೆ ಜನ್ಮ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಆಕೆಗೆ ಹೆರಿಗೆ ರಜೆ ನಿರಾಕರಿಸುವುದು ಸಂವಿಧಾನದ 21ನೇ ವಿಧಿಯಡಿ ಆಕೆಗೆ ದೊರೆಯಬೇಕಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿರುವುದಾಗಿ barandbench.com ವರದಿ ಮಾಡಿದೆ.

ತಮಿಳುನಾಡಿನ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು 2021ರಲ್ಲಿ ತಮ್ಮ ಎರಡನೇ ಮದುವೆಯ ಫಲವಾಗಿ ಗರ್ಭ ಧರಿಸಿದ ಹಿನ್ನೆಲೆ ಹೆರಿಗೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಮದುವೆಯಿಂದ ಆಕೆಗೆ ಇಬ್ಬರು ಮಕ್ಕಳು ಜನಿಸಿದ್ದರು. ವಿಚ್ಛೇದನ ಪಡೆದಿದ್ದ ಹಿನ್ನೆಲೆಯಲ್ಲಿ ಮೊದಲ ಮದುವೆಯ ಫಲವಾಗಿ ಜನಿಸಿದ ಮಕ್ಕಳು ಮಾಜಿ ಪತಿಯ ಸುಪರ್ದಿಯಲ್ಲೇ ಇದ್ದರು.

ಎರಡನೇ ಮದುವೆಯ ಫಲವಾಗಿ ಜನಿಸಿದ ಮಗುವಿಗೆ ಆಕೆ ಜನ್ಮ ನೀಡಿದ್ದರೂ, ಜಿಲ್ಲಾ ಶಿಕ್ಷಣ ಕಚೇರಿ ಆಕೆಗೆ ಹೆರಿಗೆ ರಜೆ ನಿರಾಕರಿಸಿತ್ತು. ತಮಿಳುನಾಡು ಮೂಲಭೂತ ನಿಯಮಾವಳಿಯ ನಿಯಮ 101(ಎ) ಪ್ರಕಾರ ಎರಡು ಮಕ್ಕಳು ಪಡೆಯುವವರೆಗೆ ಮಾತ್ರ ಮಹಿಳಾ ಸರ್ಕಾರಿ ನೌಕರರಿಗೆ ಹೆರಿಗೆ ರಜೆ ಪಡೆಯಲು ಅವಕಾಶ ಇರುತ್ತದೆ. ಆದರೆ, ಅರ್ಜಿದಾರೆ ಮೂರನೇ ಮಗು ಪಡೆಯುತ್ತಿರುವುದರಿಂದ ಆಕೆ ಹೆರಿಗೆ ರಜೆ ಪಡೆಯಲು ಅರ್ಹರಲ್ಲ ಎಂದು ಅದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ಆಕೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಏಕ ಸದಸ್ಯ ಪೀಠ ಆಕೆಯ ಪರವಾಗಿ ತೀರ್ಪು ನೀಡಿತ್ತು. ಆಕೆಯ ಮೊದಲ ಇಬ್ಬರು ಮಕ್ಕಳು ಆಕೆ ಸೇವೆಗೆ ಸೇರುವ ಮುನ್ನ ಜನಿಸಿದ್ದರಿಂದ ಈ ಪ್ರಕರಣದಲ್ಲಿ ಇಬ್ಬರು ಮಕ್ಕಳಿಗಷ್ಟೇ ಹೆರಿಗೆ ರಜೆ ಅನ್ವಯ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತಿಲ್ಲ ಎಂದು ಅದು ಹೇಳಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಮಾತೃತ್ವ ರಜೆ ಮೂಲಭೂತ ಹಕ್ಕಲ್ಲ ಬದಲಿಗೆ ಸೇವಾ ಷರತ್ತಿನನ್ವಯ ದೊರೆಯುವ ಹಕ್ಕು ಎಂದ ವಿಭಾಗೀಯ ಪೀಠ ಆಕೆಗೆ ಪರಿಹಾರ ನಿರಾಕರಿಸಿತ್ತು. ಹೀಗಾಗಿ ಆಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ವಿಭಾಗೀಯ ಪೀಠದ ತಾರ್ಕಿಕತೆಯನ್ನು ಒಪ್ಪದ ಸುಪ್ರೀಂ ಕೋರ್ಟ್ ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮೂಲಭೂತ ಹಕ್ಕು ಸಂತಾನೋತ್ಪತ್ತಿಯನ್ನೂ ಒಳಗೊಂಡಿದೆ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಜಾರಿಗೊಳಿಸಲು ಉದ್ದೇಶಿಸಲಾದ ನೀತಿಗಳು ದುಡಿಯುವ ಮಹಿಳೆಯರ ಘನತೆ ಮತ್ತು ಕಲ್ಯಾಣಕ್ಕೆ ಅನುಗುಣವಾಗಿರಬೇಕು ಎಂದಿದೆ.

ಪ್ರಸಕ್ತ ಪ್ರಕರಣಗಳಂತಹ ಸಂದರ್ಭಗಳಲ್ಲಿ ಎರಡು ಮಕ್ಕಳ ನಿಯಮವನ್ನು ಯಾಂತ್ರಿಕ ರೀತಿಯಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶ ರದ್ದುಗೊಳಿಸಿದೆ ಮತ್ತು ಎಫ್‌ಆರ್ 101(ಎ) ಅಡಿಯಲ್ಲಿ ಅವರಿಗೆ ಹೆರಿಗೆ ರಜೆ ನೀಡಬೇಕೆಂದು ನಿರ್ದೇಶಿಸಿದೆ. ಅಲ್ಲದೆ, ಎರಡು ತಿಂಗಳೊಳಗೆ ಆಕೆಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವಂತೆ ಆದೇಶಿಸಿದೆ.

ಸೌಜನ್ಯ : barandbench.com

ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...