Homeಮುಖಪುಟಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

- Advertisement -
- Advertisement -

ಹೆರಿಗೆ ರಜೆ ಎಂಬುದು ಮಹಿಳಾ ಉದ್ಯೋಗಿಯ ಸಂತಾನೋತ್ಪತ್ತಿ ಹಕ್ಕು ಮತ್ತು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನ ಭಾಗವಾಗಿದೆ. ಮಹಿಳೆಗೆ ಜನಿಸಿದ್ದು ಮೂರನೇ ಮಗು, ಎರಡನೇ ಮದುವೆಯಿಂದ ಪಡೆದದ್ದು ಎಂಬ ಕಾರಣಗಳನ್ನು ಮುಂದಿಟ್ಟು ಆಕೆಗೆ ಹೆರಿಗೆ ರಜೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.23) ತೀರ್ಪು ನೀಡಿದೆ.

ಮಹಿಳಾ ಉದ್ಯೋಗಿ ಮೂರನೇ ಮಗುವಿಗೆ ಜನ್ಮ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಆಕೆಗೆ ಹೆರಿಗೆ ರಜೆ ನಿರಾಕರಿಸುವುದು ಸಂವಿಧಾನದ 21ನೇ ವಿಧಿಯಡಿ ಆಕೆಗೆ ದೊರೆಯಬೇಕಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿರುವುದಾಗಿ barandbench.com ವರದಿ ಮಾಡಿದೆ.

ತಮಿಳುನಾಡಿನ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು 2021ರಲ್ಲಿ ತಮ್ಮ ಎರಡನೇ ಮದುವೆಯ ಫಲವಾಗಿ ಗರ್ಭ ಧರಿಸಿದ ಹಿನ್ನೆಲೆ ಹೆರಿಗೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಮದುವೆಯಿಂದ ಆಕೆಗೆ ಇಬ್ಬರು ಮಕ್ಕಳು ಜನಿಸಿದ್ದರು. ವಿಚ್ಛೇದನ ಪಡೆದಿದ್ದ ಹಿನ್ನೆಲೆಯಲ್ಲಿ ಮೊದಲ ಮದುವೆಯ ಫಲವಾಗಿ ಜನಿಸಿದ ಮಕ್ಕಳು ಮಾಜಿ ಪತಿಯ ಸುಪರ್ದಿಯಲ್ಲೇ ಇದ್ದರು.

ಎರಡನೇ ಮದುವೆಯ ಫಲವಾಗಿ ಜನಿಸಿದ ಮಗುವಿಗೆ ಆಕೆ ಜನ್ಮ ನೀಡಿದ್ದರೂ, ಜಿಲ್ಲಾ ಶಿಕ್ಷಣ ಕಚೇರಿ ಆಕೆಗೆ ಹೆರಿಗೆ ರಜೆ ನಿರಾಕರಿಸಿತ್ತು. ತಮಿಳುನಾಡು ಮೂಲಭೂತ ನಿಯಮಾವಳಿಯ ನಿಯಮ 101(ಎ) ಪ್ರಕಾರ ಎರಡು ಮಕ್ಕಳು ಪಡೆಯುವವರೆಗೆ ಮಾತ್ರ ಮಹಿಳಾ ಸರ್ಕಾರಿ ನೌಕರರಿಗೆ ಹೆರಿಗೆ ರಜೆ ಪಡೆಯಲು ಅವಕಾಶ ಇರುತ್ತದೆ. ಆದರೆ, ಅರ್ಜಿದಾರೆ ಮೂರನೇ ಮಗು ಪಡೆಯುತ್ತಿರುವುದರಿಂದ ಆಕೆ ಹೆರಿಗೆ ರಜೆ ಪಡೆಯಲು ಅರ್ಹರಲ್ಲ ಎಂದು ಅದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ಆಕೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಏಕ ಸದಸ್ಯ ಪೀಠ ಆಕೆಯ ಪರವಾಗಿ ತೀರ್ಪು ನೀಡಿತ್ತು. ಆಕೆಯ ಮೊದಲ ಇಬ್ಬರು ಮಕ್ಕಳು ಆಕೆ ಸೇವೆಗೆ ಸೇರುವ ಮುನ್ನ ಜನಿಸಿದ್ದರಿಂದ ಈ ಪ್ರಕರಣದಲ್ಲಿ ಇಬ್ಬರು ಮಕ್ಕಳಿಗಷ್ಟೇ ಹೆರಿಗೆ ರಜೆ ಅನ್ವಯ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತಿಲ್ಲ ಎಂದು ಅದು ಹೇಳಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಮಾತೃತ್ವ ರಜೆ ಮೂಲಭೂತ ಹಕ್ಕಲ್ಲ ಬದಲಿಗೆ ಸೇವಾ ಷರತ್ತಿನನ್ವಯ ದೊರೆಯುವ ಹಕ್ಕು ಎಂದ ವಿಭಾಗೀಯ ಪೀಠ ಆಕೆಗೆ ಪರಿಹಾರ ನಿರಾಕರಿಸಿತ್ತು. ಹೀಗಾಗಿ ಆಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ವಿಭಾಗೀಯ ಪೀಠದ ತಾರ್ಕಿಕತೆಯನ್ನು ಒಪ್ಪದ ಸುಪ್ರೀಂ ಕೋರ್ಟ್ ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮೂಲಭೂತ ಹಕ್ಕು ಸಂತಾನೋತ್ಪತ್ತಿಯನ್ನೂ ಒಳಗೊಂಡಿದೆ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಜಾರಿಗೊಳಿಸಲು ಉದ್ದೇಶಿಸಲಾದ ನೀತಿಗಳು ದುಡಿಯುವ ಮಹಿಳೆಯರ ಘನತೆ ಮತ್ತು ಕಲ್ಯಾಣಕ್ಕೆ ಅನುಗುಣವಾಗಿರಬೇಕು ಎಂದಿದೆ.

ಪ್ರಸಕ್ತ ಪ್ರಕರಣಗಳಂತಹ ಸಂದರ್ಭಗಳಲ್ಲಿ ಎರಡು ಮಕ್ಕಳ ನಿಯಮವನ್ನು ಯಾಂತ್ರಿಕ ರೀತಿಯಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶ ರದ್ದುಗೊಳಿಸಿದೆ ಮತ್ತು ಎಫ್‌ಆರ್ 101(ಎ) ಅಡಿಯಲ್ಲಿ ಅವರಿಗೆ ಹೆರಿಗೆ ರಜೆ ನೀಡಬೇಕೆಂದು ನಿರ್ದೇಶಿಸಿದೆ. ಅಲ್ಲದೆ, ಎರಡು ತಿಂಗಳೊಳಗೆ ಆಕೆಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವಂತೆ ಆದೇಶಿಸಿದೆ.

ಸೌಜನ್ಯ : barandbench.com

ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...