Homeಮುಖಪುಟಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

- Advertisement -
- Advertisement -

ಹೆರಿಗೆ ರಜೆ ಎಂಬುದು ಮಹಿಳಾ ಉದ್ಯೋಗಿಯ ಸಂತಾನೋತ್ಪತ್ತಿ ಹಕ್ಕು ಮತ್ತು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನ ಭಾಗವಾಗಿದೆ. ಮಹಿಳೆಗೆ ಜನಿಸಿದ್ದು ಮೂರನೇ ಮಗು, ಎರಡನೇ ಮದುವೆಯಿಂದ ಪಡೆದದ್ದು ಎಂಬ ಕಾರಣಗಳನ್ನು ಮುಂದಿಟ್ಟು ಆಕೆಗೆ ಹೆರಿಗೆ ರಜೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.23) ತೀರ್ಪು ನೀಡಿದೆ.

ಮಹಿಳಾ ಉದ್ಯೋಗಿ ಮೂರನೇ ಮಗುವಿಗೆ ಜನ್ಮ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಆಕೆಗೆ ಹೆರಿಗೆ ರಜೆ ನಿರಾಕರಿಸುವುದು ಸಂವಿಧಾನದ 21ನೇ ವಿಧಿಯಡಿ ಆಕೆಗೆ ದೊರೆಯಬೇಕಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿರುವುದಾಗಿ barandbench.com ವರದಿ ಮಾಡಿದೆ.

ತಮಿಳುನಾಡಿನ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು 2021ರಲ್ಲಿ ತಮ್ಮ ಎರಡನೇ ಮದುವೆಯ ಫಲವಾಗಿ ಗರ್ಭ ಧರಿಸಿದ ಹಿನ್ನೆಲೆ ಹೆರಿಗೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಮದುವೆಯಿಂದ ಆಕೆಗೆ ಇಬ್ಬರು ಮಕ್ಕಳು ಜನಿಸಿದ್ದರು. ವಿಚ್ಛೇದನ ಪಡೆದಿದ್ದ ಹಿನ್ನೆಲೆಯಲ್ಲಿ ಮೊದಲ ಮದುವೆಯ ಫಲವಾಗಿ ಜನಿಸಿದ ಮಕ್ಕಳು ಮಾಜಿ ಪತಿಯ ಸುಪರ್ದಿಯಲ್ಲೇ ಇದ್ದರು.

ಎರಡನೇ ಮದುವೆಯ ಫಲವಾಗಿ ಜನಿಸಿದ ಮಗುವಿಗೆ ಆಕೆ ಜನ್ಮ ನೀಡಿದ್ದರೂ, ಜಿಲ್ಲಾ ಶಿಕ್ಷಣ ಕಚೇರಿ ಆಕೆಗೆ ಹೆರಿಗೆ ರಜೆ ನಿರಾಕರಿಸಿತ್ತು. ತಮಿಳುನಾಡು ಮೂಲಭೂತ ನಿಯಮಾವಳಿಯ ನಿಯಮ 101(ಎ) ಪ್ರಕಾರ ಎರಡು ಮಕ್ಕಳು ಪಡೆಯುವವರೆಗೆ ಮಾತ್ರ ಮಹಿಳಾ ಸರ್ಕಾರಿ ನೌಕರರಿಗೆ ಹೆರಿಗೆ ರಜೆ ಪಡೆಯಲು ಅವಕಾಶ ಇರುತ್ತದೆ. ಆದರೆ, ಅರ್ಜಿದಾರೆ ಮೂರನೇ ಮಗು ಪಡೆಯುತ್ತಿರುವುದರಿಂದ ಆಕೆ ಹೆರಿಗೆ ರಜೆ ಪಡೆಯಲು ಅರ್ಹರಲ್ಲ ಎಂದು ಅದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ಆಕೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಏಕ ಸದಸ್ಯ ಪೀಠ ಆಕೆಯ ಪರವಾಗಿ ತೀರ್ಪು ನೀಡಿತ್ತು. ಆಕೆಯ ಮೊದಲ ಇಬ್ಬರು ಮಕ್ಕಳು ಆಕೆ ಸೇವೆಗೆ ಸೇರುವ ಮುನ್ನ ಜನಿಸಿದ್ದರಿಂದ ಈ ಪ್ರಕರಣದಲ್ಲಿ ಇಬ್ಬರು ಮಕ್ಕಳಿಗಷ್ಟೇ ಹೆರಿಗೆ ರಜೆ ಅನ್ವಯ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತಿಲ್ಲ ಎಂದು ಅದು ಹೇಳಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಮಾತೃತ್ವ ರಜೆ ಮೂಲಭೂತ ಹಕ್ಕಲ್ಲ ಬದಲಿಗೆ ಸೇವಾ ಷರತ್ತಿನನ್ವಯ ದೊರೆಯುವ ಹಕ್ಕು ಎಂದ ವಿಭಾಗೀಯ ಪೀಠ ಆಕೆಗೆ ಪರಿಹಾರ ನಿರಾಕರಿಸಿತ್ತು. ಹೀಗಾಗಿ ಆಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ವಿಭಾಗೀಯ ಪೀಠದ ತಾರ್ಕಿಕತೆಯನ್ನು ಒಪ್ಪದ ಸುಪ್ರೀಂ ಕೋರ್ಟ್ ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮೂಲಭೂತ ಹಕ್ಕು ಸಂತಾನೋತ್ಪತ್ತಿಯನ್ನೂ ಒಳಗೊಂಡಿದೆ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಜಾರಿಗೊಳಿಸಲು ಉದ್ದೇಶಿಸಲಾದ ನೀತಿಗಳು ದುಡಿಯುವ ಮಹಿಳೆಯರ ಘನತೆ ಮತ್ತು ಕಲ್ಯಾಣಕ್ಕೆ ಅನುಗುಣವಾಗಿರಬೇಕು ಎಂದಿದೆ.

ಪ್ರಸಕ್ತ ಪ್ರಕರಣಗಳಂತಹ ಸಂದರ್ಭಗಳಲ್ಲಿ ಎರಡು ಮಕ್ಕಳ ನಿಯಮವನ್ನು ಯಾಂತ್ರಿಕ ರೀತಿಯಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶ ರದ್ದುಗೊಳಿಸಿದೆ ಮತ್ತು ಎಫ್‌ಆರ್ 101(ಎ) ಅಡಿಯಲ್ಲಿ ಅವರಿಗೆ ಹೆರಿಗೆ ರಜೆ ನೀಡಬೇಕೆಂದು ನಿರ್ದೇಶಿಸಿದೆ. ಅಲ್ಲದೆ, ಎರಡು ತಿಂಗಳೊಳಗೆ ಆಕೆಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವಂತೆ ಆದೇಶಿಸಿದೆ.

ಸೌಜನ್ಯ : barandbench.com

ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...