HomeಅಂಕಣಗಳುKarnataka against SIRಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

- Advertisement -
- Advertisement -

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ ನಾಗರಿಕರು ಮತ್ತು ಹೋರಾಟಗಾರರು ಗಂಭೀರ ಚಿಂತನೆಯೊಂದಿಗೆ ಸ್ವಾಗತಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ: ಪ್ರಜೆಯ ಜವಾಬ್ದಾರಿ

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿದರು. ನಮ್ಮ ಹೆಸರು ಪಟ್ಟಿಯಲ್ಲಿದೆ ಎಂದು ನಿಷ್ಕಾಳಜಿ ವಹಿಸುವಂತಿಲ್ಲ. ಇದೇ ತಿಂಗಳ 30ರಿಂದ ನಡೆಯಲಿರುವ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಸಕ್ರಿಯವಾಗಿ ಭಾಗವಹಿಸಬೇಕು. ಬಿಎಲ್‌ಒ (BLO)ಗಳು ನೀಡುವ ನಮೂನೆಗಳನ್ನು ಪೂರ್ಣಗೊಳಿಸಿ ಸಲ್ಲಿಸುವುದು ಪ್ರತಿಯೊಬ್ಬ ಅರ್ಹ ಮತದಾರನ ಆದ್ಯ ಕರ್ತವ್ಯವಾಗಿದೆ ಎಂದು ಕರೆ ನೀಡಿದರು.

ಮುಂದುವರೆದು ಮಾತನಾಡುತ್ತಾ, ನಮ್ಮ ತಾಲೂಕಿನಾದ್ಯಂತ ಬಿಎಲ್‌ಎ (BLA)ಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟು ಹೋದರೆ ಅದು ಕೇವಲ ಮತದಾನದ ಹಕ್ಕಿನ ಕಸಿಯುವಿಕೆಯಲ್ಲ, ಬದಲಾಗಿ ಸರ್ಕಾರದ ವಿವಿಧ ಕಲ್ಯಾಣ ಸೌಲಭ್ಯಗಳಿಂದಲೂ ವಂಚಿತರಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಎಚ್ಚರದಿಂದಿದ್ದು, ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸಂವಿಧಾನದ ಆಶಯ ಮತ್ತು ಆತಂಕ:

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಲಿತ ಮುಖಂಡ ತರೀಕೆರೆ ವೆಂಕಟೇಶ್ ಅವರು, ಸಂವಿಧಾನದ ಆಶಯಗಳನ್ನು ಸ್ಮರಿಸುತ್ತಾ ಆತಂಕ ವ್ಯಕ್ತಪಡಿಸಿದರು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಾರ್ವತ್ರಿಕ ಮತದಾನದ ಹಕ್ಕು ಭಾರತೀಯ ಪ್ರಜಾಪ್ರಭುತ್ವದ ಜೀವಾಳ. ಆದರೆ, ಇಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಪ್ರಭಾವದಿಂದ ಚುನಾವಣಾ ಆಯೋಗದ ನಿಷ್ಪಕ್ಷಪಾತ ಕಾರ್ಯನಿರ್ವಹಣೆಯ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಸಂಶಯಗಳು ವ್ಯಕ್ತವಾಗುತ್ತಿವೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ‘ಪ್ರಜೆಗಳೇ ಪ್ರಭುಗಳು’ ಎಂಬ ತತ್ವವು ಗೌಣವಾಗುತ್ತಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಕಳವಳಕಾರಿ ಸಂಗತಿ ಎಂದು ಅವರು ವಿಶ್ಲೇಷಿಸಿದರು.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಹಾಲ ವಜ್ರಪ್ಪ ಮಾತನಾಡಿ SIR ವಿರೋಧಿ ಜಾಥಾದ ಸದುದೇಶವನ್ನು ನಾವೆಲ್ಲರು ಅರ್ಥ ಮಾಡಿಕೊಳ್ಳಬೆಕು, ಸರ್ಕಾರಗಳು ಪ್ರಜೆಗಳ ರಕ್ಷಣೆಗೆ ನಿಲ್ಲಬೇಕು ಆದರೆ ಅವುಗಳು ತಮ್ಮ ಜವಾಬ್ದಾರಿ ಮರೆತಾಗ ಹೀಗೆ ನಾಗರಿಕ ಸಮಾಜ ಜನರ ಬೆಂಬಲವಾಗಿ ನಿಲ್ಲಬೇಕಾಗುತ್ತದೆ. ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಲ್ಲಿ ಆಗಿರುವ ಅನಾಹುತಗಳು ಕರ್ನಾಟಕದಲ್ಲಿ ಆಗದಂತೆ ನಾವು ತಡೆಯೊಡ್ಡಬೇಕೆಂದು ಕರೆ ನೀಡಿದರು.

ಈ ಜಾಗೃತಿ ಸಭೆಯಲ್ಲಿ ಎಪಿಸಿಆರ್ (APCR) ಜಿಲ್ಲಾಧ್ಯಕ್ಷ ಸಮೀವುಲ್ಲಾ, ಡಿಎಸ್‌ಎಸ್ ರಾಜ್ಯ ಸಂಚಾಲಕ ಎನ್. ವೆಂಕಟೇಶ್, ಸ್ಥಳೀಯ ಮುಖಂಡರು ಮತ್ತು ಜನಪ್ರತಿನಿಧಿಗಳಾದ ವರ್ಮ ಪ್ರಕಾಶ್, ದಾದಾಫೀರ್, ಗಿರೀಶ್, ಆದಿಲ್ ಪಾಷಾ, ರೋಷನ್, ಟಿ.ಜಿ. ಮಂಜುನಾಥ, ಟಿ.ಡಿ. ಮಂಜುನಾಥ, ಟಿ.ಆರ್. ಶ್ರೀಧರ್ ಹಾಗೂ ರಾಜು ಉಪಸ್ಥಿತರಿದ್ದರು. ಆದಿಲ್ ಪಾಷಾ ಸ್ವಾಗತಿಸಿದರೆ, ಸಾಹಿತಿ ಮನಸುವಳ್ಳಿ ಮೋಹನ್ ಅವರು ವಂದನಾರ್ಪಣೆ ಸಲ್ಲಿಸಿದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು, ರಾಮು ಕೌಳಿ, ಸುಮಂತ್, ರಾಜೀತ್ ಮತ್ತು ಸಂದೀಪ್ ಅವರು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...