Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...