Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...