Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...