Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...