Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...