Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...