Homeಮುಖಪುಟಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ಸುಲಿಗೆ ಮತ್ತು ಸುಳ್ಳು ಸುದ್ದಿ ಹರಡಿ 2 ಬಾರಿ ಜೈಲುಪಾಲಾಗಿದ್ದ ಸುಧೀರ್ ಚೌಧರಿ!

- Advertisement -
- Advertisement -

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ನಿರೂಪಕ

ಡಿಡಿ ನ್ಯೂಸ್‌ನ ಮಂಡಳಿಯು ನಿರೂಪಕ ಸುಧೀರ್ ಚೌಧರಿ ಅವರು ಮಾಡಿದ ಒಪ್ಪಂದದಂತೆ, ಅವರು ಡಿಡಿ ನ್ಯೂಸ್‌ನಿಂದ ಒಂದು ಗಂಟೆಯ ಅವಧಿಯ ವಿಶೇಷ ಕಾರ್ಯಕ್ರಮವನ್ನು ವಾರಕ್ಕೆ 5 ದಿನಗಳ ಕಾಲ  ನಿರ್ಮಿಸಬೇಕಾಗಿದೆ. ಇದಕ್ಕಾಗಿ ವಾರ್ಷಿಕ ರೂ. 15 ಕೋಟಿಯನ್ನು ಅವರಿಗೆ ನಿಗದಿಪಡಿಸಲಾಗಿದ್ದು,, ಈ ಮೊತ್ತದಲ್ಲಿ ಜಿಎಸ್‌ಟಿ ಕೂಡಾ ಸೇರಿದೆ. ಅಷ್ಟೆ ಅಲ್ಲದೆ, ಈ ಮೊತ್ತವು ಪ್ರತಿ ವರ್ಷ 10% ದರದಲ್ಲಿ ಹೆಚ್ಚಳಕ್ಕೆ ಒಳಪಟ್ಟಿರುತ್ತದೆ ಎಂದು ಒಪ್ಪಂದ ಸೂಚಿಸಿದೆ. ಬಲಪಂಥೀಯ ನಿರೂಪಕ

“ಪುನರ್ರಚಿಸಲಾದ ಮಾತುಕತೆ ಸಮಿತಿಯು ಫೆಬ್ರವರಿ 6 ರಿಂದ 20, 2025 ರ ನಡುವೆ ಐದು ಬಾರಿ ಸಭೆ ಸೇರಿ ಸುಧೀರ್ ಚೌಧರಿ ಪ್ರತಿನಿಧಿಸುವ ನಿರ್ಮಾಣ ಕಂಪನಿ M/s ESSPRIT ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಮಾತುಕತೆ ನಡೆಸಿತು. ಹಾರ್ಡ್‌ವೇರ್, ಸ್ಟುಡಿಯೋ ಬಳಕೆಯ ವೆಚ್ಚ, ಸ್ಥಳ, ಪೀಠೋಪಕರಣಗಳು, ಸುದ್ದಿ ಸಂಸ್ಥೆ ಶುಲ್ಕಗಳು ಮತ್ತು ಇತರ ವಿವಿಧ ವೆಚ್ಚಗಳಂತಹ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರಸಾರ ಭಾರತಿಯಿಂದ ಭರಿಸಬೇಕಾದ ಉತ್ಪಾದನಾ ವೆಚ್ಚದ ಕುರಿತು ಸರಣಿ ಚರ್ಚೆಗಳ ನಂತರ, ಎರಡೂ ಕಡೆಯವರು ಉತ್ಪಾದನಾ ವೆಚ್ಚವನ್ನು ಒಪ್ಪಿಕೊಂಡವು” ಎಂದು ದೂರದರ್ಶನದಂತಹ ಸಾರ್ವಜನಿಕ ಪ್ರಸಾರ ಸಂಸ್ಥೆಗಳನ್ನು ನಿಯಂತ್ರಿಸುವ ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳುತ್ತದೆ.

“ಡಿಡಿ ನ್ಯೂಸ್‌ನಲ್ಲಿ ವಾರಕ್ಕೆ 5 ದಿನಗಳು (ಒಂದು ವರ್ಷದಲ್ಲಿ ಒಟ್ಟು 260 ಸಂಚಿಕೆಗಳು) ಒಂದು ಗಂಟೆಯ ವಿಶೇಷ ಕಾರ್ಯಕ್ರಮಗಳನ್ನು ವರ್ಷಕ್ಕೆ ರೂ.15.00 ಕೋಟಿ ಮತ್ತು ಜಿಎಸ್‌ಟಿಯಲ್ಲಿ ಪ್ರಸಾರ ಮಾಡಲಾಗುತ್ತದೆ” ಎಂದು ಪ್ರಸಾರ ಭಾರತಿ ಮಂಡಳಿಯ ಕಾರ್ಯಸೂಚಿ ಹೇಳಿದೆ. ವಾರ್ಷಿಕವಾಗಿ 260 ಸಂಚಿಕೆಗಳನ್ನು ಉತ್ಪಾದಿಸಲು ಒಪ್ಪಿದ ವೆಚ್ಚವನ್ನು 2012 ರಲ್ಲಿ ನಿಗದಿಪಡಿಸಿದ ಸಿಬಿಸಿ-ಅನುಮೋದಿತ ದರಗಳಲ್ಲಿ ಪರಿಗಣಿಸಲಾಗಿದೆ ಎಂದು ಅದು ಹೇಳಿದೆ.

ಈ ಮಧ್ಯೆ, ಸುಧೀರ್ ಚೌಧರಿ ಅವರ ಕಂಪನಿಯಾದ ಮೆಸರ್ಸ್ ಇಎಸ್‌ಎಸ್‌ಪಿಆರ್‌ಐಟಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಯಾವುದೇ ಸಾರ್ವಜನಿಕ ದಾಖಲೆಗಳು ಮತ್ತು ವಿವರಗಳು ಲಭ್ಯವಿಲ್ಲ ಎಂದು pgurus.com ವರದಿ ಮಾಡಿದೆ.

ಎರಡು ಬಾರಿ ಜೈಲು ಶಿಕ್ಷೆಗೊಳಗಾಗಿದ್ದ ನಿರೂಪಕ ಸುಧೀರ್ ಚೌಧರಿ

2008 ರಲ್ಲಿ, ಶಾಲಾ ಶಿಕ್ಷಕಿಯೊಬ್ಬರ ವಿರುದ್ಧ ನಕಲಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಸುಧೀರ್ ಚೌಧರಿ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುದ್ದಿ ಮಾಡುವ ವೇಳೆ, ಶಿಕ್ಷಕಿಯು ಶಾಲಾ ಹುಡುಗಿಯರ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಸುಧೀರ್‌ ಆರೋಪಿಸಿದ್ದರು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಲೈವ್ ಇಂಡಿಯಾ ಟಿವಿ ಚಾನೆಲ್‌ನ ಸಂಪಾದಕರಾಗಿದ್ದರು. ಅವರ ಈ ನಕಲಿ ವರದಿಗಾಗಿ ಅವರ ಟಿವಿ ಚಾನೆಲ್ ಅನ್ನು ಕೆಲವು ವಾರಗಳ ಕಾಲ ನಿಷೇಧಿಸಲಾಗಿತ್ತು ಮತ್ತು ಸುಧೀರ್ ಚೌಧರಿ ಅವರನ್ನು ಜೈಲಿಗೆ ಹಾಕಲಾಯಿತು.

2012 ರಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಕಂಪನಿಯ ಪಾತ್ರವನ್ನು ಮುಚ್ಚಿಹಾಕಿದ್ದಕ್ಕಾಗಿ ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಸುಧೀರ್ ಚೌಧರಿ ಅವರನ್ನು ಮತ್ತೆ ಜೈಲಿಗೆ ಹಾಕಲಾಗಿತ್ತು. ಆ ಸಮಯದಲ್ಲಿ ಸುಧೀರ್ ಚೌಧರಿ ಅವರು ಸುಭಾಷ್ ಚಂದ್ರ ಅವರ ಜೀ ಗ್ರೂಪ್‌ನ ಮುಖ್ಯಸ್ಥರಾಗಿದ್ದರು. ಈ ವೇಳೆ ಅವರು ಜಿಂದಾಲ್ ಗ್ರೂಪ್‌ನಿಂದ ರೂ.100 ಕೋಟಿ ಸುಲಿಗೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಚೌಧರಿ ಮತ್ತು ಜೀ ಬಿಸಿನೆಸ್ ಸಂಪಾದಕ ಸಮೀರ್ ಅಹ್ಲುವಾಲಿಯಾ ಅವರನ್ನು ಬಂಧಿಸಿ ತಿಂಗಳುಗಟ್ಟಲೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜಿಂದಾಲ್ ಗ್ರೂಪ್ ಮುಖ್ಯಸ್ಥ ನವೀನ್ ಜಿಂದಾಲ್ ಸಲ್ಲಿಸಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಕ್ರಮ ಈ ಕೈಗೊಂಡಿದ್ದರು. ಜೊತೆಗೆ ಜೀ ಗ್ರೂಪ್‌ನ ಸುಭಾಷ್ ಚಂದ್ರ ಅವರನ್ನು ಕೂಡಾ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.

ಭ್ರಷ್ಟ ಮತ್ತು ಕಳಂಕಿತ ನಿರೂಪಕನೊಂದಿಗೆ ಪ್ರಸಾರ ಭಾರತಿ 15 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.

“ಎರಡು ಜೈಲು ಶಿಕ್ಷೆಯನ್ನು ಎದುರಿಸಿದ ಕಳಂಕಿತ ಪತ್ರಕರ್ತ ಸುಧೀರ್ ಚೌಧರಿ ಜೊತೆ ಸರ್ಕಾರಿ ಟಿವಿ ವಾರ್ಷಿಕ ರೂ.15 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ! ದೂರದರ್ಶನವು ನಮ್ಮ ಹಣದಲ್ಲಿ ನಡೆಯುತ್ತದೆ. ಗಂಭೀರ ಆರೋಪಗಳ ಮೇಲೆ ಎರಡು ಬಾರಿ ಜೈಲಿನಲ್ಲಿದ್ದು ಪ್ರತಿದಿನ ದ್ವೇಷವನ್ನು ಹರಡುವ ವ್ಯಕ್ತಿಗೆ ಪಾವತಿಸಲು ಅದನ್ನು ಲೂಟಿ ಮಾಡಲಾಗುತ್ತಿದೆ.” ಎಂದು ಪ್ರಶಾಂತ್ ಭೂಷಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...