Homeಮುಖಪುಟಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

- Advertisement -
- Advertisement -

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲ್ವೇ ಕೂಲಿಗಳ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ, ಇದು ಸರಿಯಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕೋಣೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಸೋಮವಾರ ವರದಿಯಾಗಿದೆ.

ಮಧುಗಿರಿ ಮೋದಿ ಮತ್ತು ಪುನೀತ್ ಕೆರೆಹಳ್ಳಿ ಎಂಬ ಹಿಂದುತ್ವ ಕಾರ್ಯಕರ್ತರು ರೈಲ್ವೆ ಕೂಲಿಗಳ ಕೋಣೆಗೆ ನುಗ್ಗಿ ಗಲಾಟೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ರೀತಿಯಾಗಿ ಅನಧಿಕೃತವಾಗಿ ಕೋಣೆಗೆ ನುಗ್ಗಿ ಗದ್ದಲವೆಬ್ಬಿಸಿ ಸೌಹಾರ್ಧತೆ ಕೆಡಿಸುತ್ತಿರುವ ಈ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸರ್ವ ಧರ್ಮೀಯರಿಗೂ ಪ್ರಾರ್ಥನೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಹಲವಾರು ಹಿಂದೂ ದೇವಾಲಯಗಳು ಮತ್ತು ಚರ್ಚ್ ಸಹ ನಿಲ್ದಾಣದಲ್ಲಿದೆ. ಈ ವಿಚಾರವನ್ನು ಸ್ವತಃ ರೈಲ್ವೇ ಅಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಕಳೆದ 35 ವರ್ಷಗಳಿಂದ ಎಲ್ಲರೂ ತಮ್ಮ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಪ್ರಾರ್ಥನೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಹಿಂದುತ್ವವಾದಿ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುವ ನಿಟ್ಟಿನಲ್ಲಿ ನಮಾಝ್ ಗೆ ಮೀಸಲಿರಿಸಿದ್ದ ಕೋಣೆಗೆ ದಾಳಿ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದು-ಮುಸ್ಲಿಮರ ನಡುವೆ ಒಡಕುಂಟು ಮಾಡಲು ಸಂಘಪರಿವಾರದ ಮತಾಂಧ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿವೆ. ಇದೀಗ ರೈಲ್ವೇ ನಿಲ್ದಾಣದಲ್ಲಿ ನಡೆದಿರುವ ಘಟನೆಯೂ ಸಂಘಪರಿವಾರದ ಹೀನ ಮನೋಸ್ಥಿತಿಯ ಭಾಗವಾಗಿದೆ. ಸಂಘಪರಿವಾರದ ದುಷ್ಕೃತ್ಯಗಳ ವಿರುದ್ಧ ಆಡಳಿತ ವ್ಯವಸ್ಥೆಯ ಮೃದು ಧೋರಣೆಯೂ ಇಂತಹ ಘಟನೆಗಳಿಗೆ ನೇರ ಕಾರಣವಾಗಿದೆ. ನಮಾಝ್ ಕೊಠಡಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಗೂಂಡಾಗಳ ವಿರುದ್ಧ ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಾಣವಾಗುತ್ತಿದೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ, ಅದು ಸಂಪೂರ್ಣ ಸುಳ್ಳು. ಇಲ್ಲಿ ಎಲ್ಲಾ ಧರ್ಮದ ಹಮಾಲಿ ಕೂಲಿಗಳು ಇದ್ದು ಅವರಿಗೆ ಕೆಲವು ಕೊಠಡಿಗಳನ್ನು ನೀಡಿದ್ದೇವೆ. ಅಲ್ಲಿ ಎಲ್ಲಾ ಧರ್ಮದ ಪೂಜೆಗೆ, ಪ್ರಾರ್ಥನೆಗೆ ಅವಕಾಶ ನೀಡಿದ್ದೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಫ್ಲಾಟ್‌ಫಾರಂ ನಂಬರ್ 07 ರಲ್ಲಿ ಹಿಂದೂ ದೇವಾಲಯವಿದ್ದು ಅಲ್ಲಿ ಪೂಜೆಗಳು ನಡೆಯುತ್ತಿವೆ. ಹಾಗಾಗಿ ಇಲ್ಲಿ ಒಂದು ಧರ್ಮದ ಆಚರಣೆ ಮಾತ್ರ ನಡೆಯುತ್ತಿದೆ ಎಂಬುದು ಸುಳ್ಳು ಎಂದು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹಿಂದೂಜನಜಾಗೃತಿ ಸಮಿತಿಯ ಗೂಂಡಾಗಳು ಪ್ರಾರ್ಥನಾ ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿರುವುದು ಸರ್ಕಾರ ಸತ್ತು ಹೋಗಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಬೆಂಗಳೂರು ಪೊಲೀಸರು
ಕೂಡಲೇ ಗೂಂಡಾಗಳನ್ನು ಬಂಧಿಸಿ.‌ ಮುಖ್ಯಮಂತ್ರಿಗಳೆ, ಪದೇ ಪದೇ ನಡೆಯುತ್ತಿರುವ ಇಂತಹ ಗೂಂಡಾಗಿರಿಯನ್ನು ತಡೆಯಲಾಗದ ನಿಮ್ಮ ಆಡಳಿತಕ್ಕೆ ಧಿಕ್ಕಾರ ಎಂದು ದಲಿತ ಮುಖಂಡರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಮೂರು ಹಿಂದೂ ದೇವಾಲಯಗಳಿವೆ. ಅಲ್ಲಿ ಹಿಂದಿನಿಂದಲೂ ಪೂಜೆ ನಡೆದುಕೊಂಡು ಬಂದಿದೆ. ಚರ್ಚ್ ಇದ್ದು ಅಲ್ಲಿಯೂ ಪ್ರಾರ್ಥನೆ ನಡೆಯುತ್ತಿದೆ. ಅದೇ ರೀತಿ ಕೂಲಿಗಳು ತಮ್ಮ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಿದರೆ ತಪ್ಪೇನು? ಇದರಲ್ಲಿ ತಪ್ಪು ಹುಡುಕುವುದು ಏಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾಗಿದೆ.


ಇದನ್ನೂ ಓದಿ: ಶಾಸಕ ಪೂಂಜಾ ಆಪ್ತ ಮರಗಳ್ಳರ ಮೇಲೆ ಕ್ರಮಕೈಗೊಂಡ ಮಹಿಳಾ ಅರಣ್ಯಾಧಿಕಾರಿ ವರ್ಗಾವಣೆಗೆ ತಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. These beggars dosent have any better job to do. Spoiling and destroying people peace and creating voilence in the name of religion.police and the government should book and punish them severely.

  2. ರೈಲ್ ನಿಲ್ದಾಣದಲ್ಲಿ ಮಸೀದಿ ಹೇಗೆ ಸಾಧ್ಯ? ಮುಂದೆ ಪೂರ್ತಿ ನಿಲ್ದಾಣ ಮಸೀದಿ ವ್ಯಾಪ್ತಿಗೆ ಬರುತ್ತೆ ಅಂತ ಪಿಸ್ ಫುಲ್ ಗಳು ಕೋರ್ಟಿಗೆ ಹೋದರು ಹೋಗಬಹುದು.ಸರ್ಕಾರ ಎಚ್ಚೆತ್ತು ಮಂದಿರ ಮಸೀದಿ ಚರ್ಚ್ ಎಲ್ಲ ಕಿತ್ತು ಹಾಕಿ ಭಾರತದ ಸಂವಿಧಾನ ಕಾಪಾಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...