Homeಮುಖಪುಟಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

- Advertisement -
- Advertisement -

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲ್ವೇ ಕೂಲಿಗಳ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ, ಇದು ಸರಿಯಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕೋಣೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಸೋಮವಾರ ವರದಿಯಾಗಿದೆ.

ಮಧುಗಿರಿ ಮೋದಿ ಮತ್ತು ಪುನೀತ್ ಕೆರೆಹಳ್ಳಿ ಎಂಬ ಹಿಂದುತ್ವ ಕಾರ್ಯಕರ್ತರು ರೈಲ್ವೆ ಕೂಲಿಗಳ ಕೋಣೆಗೆ ನುಗ್ಗಿ ಗಲಾಟೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ರೀತಿಯಾಗಿ ಅನಧಿಕೃತವಾಗಿ ಕೋಣೆಗೆ ನುಗ್ಗಿ ಗದ್ದಲವೆಬ್ಬಿಸಿ ಸೌಹಾರ್ಧತೆ ಕೆಡಿಸುತ್ತಿರುವ ಈ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸರ್ವ ಧರ್ಮೀಯರಿಗೂ ಪ್ರಾರ್ಥನೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಹಲವಾರು ಹಿಂದೂ ದೇವಾಲಯಗಳು ಮತ್ತು ಚರ್ಚ್ ಸಹ ನಿಲ್ದಾಣದಲ್ಲಿದೆ. ಈ ವಿಚಾರವನ್ನು ಸ್ವತಃ ರೈಲ್ವೇ ಅಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಕಳೆದ 35 ವರ್ಷಗಳಿಂದ ಎಲ್ಲರೂ ತಮ್ಮ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಪ್ರಾರ್ಥನೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಹಿಂದುತ್ವವಾದಿ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುವ ನಿಟ್ಟಿನಲ್ಲಿ ನಮಾಝ್ ಗೆ ಮೀಸಲಿರಿಸಿದ್ದ ಕೋಣೆಗೆ ದಾಳಿ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದು-ಮುಸ್ಲಿಮರ ನಡುವೆ ಒಡಕುಂಟು ಮಾಡಲು ಸಂಘಪರಿವಾರದ ಮತಾಂಧ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿವೆ. ಇದೀಗ ರೈಲ್ವೇ ನಿಲ್ದಾಣದಲ್ಲಿ ನಡೆದಿರುವ ಘಟನೆಯೂ ಸಂಘಪರಿವಾರದ ಹೀನ ಮನೋಸ್ಥಿತಿಯ ಭಾಗವಾಗಿದೆ. ಸಂಘಪರಿವಾರದ ದುಷ್ಕೃತ್ಯಗಳ ವಿರುದ್ಧ ಆಡಳಿತ ವ್ಯವಸ್ಥೆಯ ಮೃದು ಧೋರಣೆಯೂ ಇಂತಹ ಘಟನೆಗಳಿಗೆ ನೇರ ಕಾರಣವಾಗಿದೆ. ನಮಾಝ್ ಕೊಠಡಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಗೂಂಡಾಗಳ ವಿರುದ್ಧ ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಾಣವಾಗುತ್ತಿದೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ, ಅದು ಸಂಪೂರ್ಣ ಸುಳ್ಳು. ಇಲ್ಲಿ ಎಲ್ಲಾ ಧರ್ಮದ ಹಮಾಲಿ ಕೂಲಿಗಳು ಇದ್ದು ಅವರಿಗೆ ಕೆಲವು ಕೊಠಡಿಗಳನ್ನು ನೀಡಿದ್ದೇವೆ. ಅಲ್ಲಿ ಎಲ್ಲಾ ಧರ್ಮದ ಪೂಜೆಗೆ, ಪ್ರಾರ್ಥನೆಗೆ ಅವಕಾಶ ನೀಡಿದ್ದೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಫ್ಲಾಟ್‌ಫಾರಂ ನಂಬರ್ 07 ರಲ್ಲಿ ಹಿಂದೂ ದೇವಾಲಯವಿದ್ದು ಅಲ್ಲಿ ಪೂಜೆಗಳು ನಡೆಯುತ್ತಿವೆ. ಹಾಗಾಗಿ ಇಲ್ಲಿ ಒಂದು ಧರ್ಮದ ಆಚರಣೆ ಮಾತ್ರ ನಡೆಯುತ್ತಿದೆ ಎಂಬುದು ಸುಳ್ಳು ಎಂದು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹಿಂದೂಜನಜಾಗೃತಿ ಸಮಿತಿಯ ಗೂಂಡಾಗಳು ಪ್ರಾರ್ಥನಾ ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿರುವುದು ಸರ್ಕಾರ ಸತ್ತು ಹೋಗಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಬೆಂಗಳೂರು ಪೊಲೀಸರು
ಕೂಡಲೇ ಗೂಂಡಾಗಳನ್ನು ಬಂಧಿಸಿ.‌ ಮುಖ್ಯಮಂತ್ರಿಗಳೆ, ಪದೇ ಪದೇ ನಡೆಯುತ್ತಿರುವ ಇಂತಹ ಗೂಂಡಾಗಿರಿಯನ್ನು ತಡೆಯಲಾಗದ ನಿಮ್ಮ ಆಡಳಿತಕ್ಕೆ ಧಿಕ್ಕಾರ ಎಂದು ದಲಿತ ಮುಖಂಡರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಮೂರು ಹಿಂದೂ ದೇವಾಲಯಗಳಿವೆ. ಅಲ್ಲಿ ಹಿಂದಿನಿಂದಲೂ ಪೂಜೆ ನಡೆದುಕೊಂಡು ಬಂದಿದೆ. ಚರ್ಚ್ ಇದ್ದು ಅಲ್ಲಿಯೂ ಪ್ರಾರ್ಥನೆ ನಡೆಯುತ್ತಿದೆ. ಅದೇ ರೀತಿ ಕೂಲಿಗಳು ತಮ್ಮ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಿದರೆ ತಪ್ಪೇನು? ಇದರಲ್ಲಿ ತಪ್ಪು ಹುಡುಕುವುದು ಏಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾಗಿದೆ.


ಇದನ್ನೂ ಓದಿ: ಶಾಸಕ ಪೂಂಜಾ ಆಪ್ತ ಮರಗಳ್ಳರ ಮೇಲೆ ಕ್ರಮಕೈಗೊಂಡ ಮಹಿಳಾ ಅರಣ್ಯಾಧಿಕಾರಿ ವರ್ಗಾವಣೆಗೆ ತಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. These beggars dosent have any better job to do. Spoiling and destroying people peace and creating voilence in the name of religion.police and the government should book and punish them severely.

  2. ರೈಲ್ ನಿಲ್ದಾಣದಲ್ಲಿ ಮಸೀದಿ ಹೇಗೆ ಸಾಧ್ಯ? ಮುಂದೆ ಪೂರ್ತಿ ನಿಲ್ದಾಣ ಮಸೀದಿ ವ್ಯಾಪ್ತಿಗೆ ಬರುತ್ತೆ ಅಂತ ಪಿಸ್ ಫುಲ್ ಗಳು ಕೋರ್ಟಿಗೆ ಹೋದರು ಹೋಗಬಹುದು.ಸರ್ಕಾರ ಎಚ್ಚೆತ್ತು ಮಂದಿರ ಮಸೀದಿ ಚರ್ಚ್ ಎಲ್ಲ ಕಿತ್ತು ಹಾಕಿ ಭಾರತದ ಸಂವಿಧಾನ ಕಾಪಾಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...