Homeಮುಖಪುಟಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

- Advertisement -
- Advertisement -

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲ್ವೇ ಕೂಲಿಗಳ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ, ಇದು ಸರಿಯಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕೋಣೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಸೋಮವಾರ ವರದಿಯಾಗಿದೆ.

ಮಧುಗಿರಿ ಮೋದಿ ಮತ್ತು ಪುನೀತ್ ಕೆರೆಹಳ್ಳಿ ಎಂಬ ಹಿಂದುತ್ವ ಕಾರ್ಯಕರ್ತರು ರೈಲ್ವೆ ಕೂಲಿಗಳ ಕೋಣೆಗೆ ನುಗ್ಗಿ ಗಲಾಟೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ರೀತಿಯಾಗಿ ಅನಧಿಕೃತವಾಗಿ ಕೋಣೆಗೆ ನುಗ್ಗಿ ಗದ್ದಲವೆಬ್ಬಿಸಿ ಸೌಹಾರ್ಧತೆ ಕೆಡಿಸುತ್ತಿರುವ ಈ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸರ್ವ ಧರ್ಮೀಯರಿಗೂ ಪ್ರಾರ್ಥನೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಹಲವಾರು ಹಿಂದೂ ದೇವಾಲಯಗಳು ಮತ್ತು ಚರ್ಚ್ ಸಹ ನಿಲ್ದಾಣದಲ್ಲಿದೆ. ಈ ವಿಚಾರವನ್ನು ಸ್ವತಃ ರೈಲ್ವೇ ಅಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಕಳೆದ 35 ವರ್ಷಗಳಿಂದ ಎಲ್ಲರೂ ತಮ್ಮ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಪ್ರಾರ್ಥನೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಹಿಂದುತ್ವವಾದಿ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುವ ನಿಟ್ಟಿನಲ್ಲಿ ನಮಾಝ್ ಗೆ ಮೀಸಲಿರಿಸಿದ್ದ ಕೋಣೆಗೆ ದಾಳಿ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದು-ಮುಸ್ಲಿಮರ ನಡುವೆ ಒಡಕುಂಟು ಮಾಡಲು ಸಂಘಪರಿವಾರದ ಮತಾಂಧ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿವೆ. ಇದೀಗ ರೈಲ್ವೇ ನಿಲ್ದಾಣದಲ್ಲಿ ನಡೆದಿರುವ ಘಟನೆಯೂ ಸಂಘಪರಿವಾರದ ಹೀನ ಮನೋಸ್ಥಿತಿಯ ಭಾಗವಾಗಿದೆ. ಸಂಘಪರಿವಾರದ ದುಷ್ಕೃತ್ಯಗಳ ವಿರುದ್ಧ ಆಡಳಿತ ವ್ಯವಸ್ಥೆಯ ಮೃದು ಧೋರಣೆಯೂ ಇಂತಹ ಘಟನೆಗಳಿಗೆ ನೇರ ಕಾರಣವಾಗಿದೆ. ನಮಾಝ್ ಕೊಠಡಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಗೂಂಡಾಗಳ ವಿರುದ್ಧ ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಾಣವಾಗುತ್ತಿದೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ, ಅದು ಸಂಪೂರ್ಣ ಸುಳ್ಳು. ಇಲ್ಲಿ ಎಲ್ಲಾ ಧರ್ಮದ ಹಮಾಲಿ ಕೂಲಿಗಳು ಇದ್ದು ಅವರಿಗೆ ಕೆಲವು ಕೊಠಡಿಗಳನ್ನು ನೀಡಿದ್ದೇವೆ. ಅಲ್ಲಿ ಎಲ್ಲಾ ಧರ್ಮದ ಪೂಜೆಗೆ, ಪ್ರಾರ್ಥನೆಗೆ ಅವಕಾಶ ನೀಡಿದ್ದೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಫ್ಲಾಟ್‌ಫಾರಂ ನಂಬರ್ 07 ರಲ್ಲಿ ಹಿಂದೂ ದೇವಾಲಯವಿದ್ದು ಅಲ್ಲಿ ಪೂಜೆಗಳು ನಡೆಯುತ್ತಿವೆ. ಹಾಗಾಗಿ ಇಲ್ಲಿ ಒಂದು ಧರ್ಮದ ಆಚರಣೆ ಮಾತ್ರ ನಡೆಯುತ್ತಿದೆ ಎಂಬುದು ಸುಳ್ಳು ಎಂದು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹಿಂದೂಜನಜಾಗೃತಿ ಸಮಿತಿಯ ಗೂಂಡಾಗಳು ಪ್ರಾರ್ಥನಾ ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿರುವುದು ಸರ್ಕಾರ ಸತ್ತು ಹೋಗಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಬೆಂಗಳೂರು ಪೊಲೀಸರು
ಕೂಡಲೇ ಗೂಂಡಾಗಳನ್ನು ಬಂಧಿಸಿ.‌ ಮುಖ್ಯಮಂತ್ರಿಗಳೆ, ಪದೇ ಪದೇ ನಡೆಯುತ್ತಿರುವ ಇಂತಹ ಗೂಂಡಾಗಿರಿಯನ್ನು ತಡೆಯಲಾಗದ ನಿಮ್ಮ ಆಡಳಿತಕ್ಕೆ ಧಿಕ್ಕಾರ ಎಂದು ದಲಿತ ಮುಖಂಡರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಮೂರು ಹಿಂದೂ ದೇವಾಲಯಗಳಿವೆ. ಅಲ್ಲಿ ಹಿಂದಿನಿಂದಲೂ ಪೂಜೆ ನಡೆದುಕೊಂಡು ಬಂದಿದೆ. ಚರ್ಚ್ ಇದ್ದು ಅಲ್ಲಿಯೂ ಪ್ರಾರ್ಥನೆ ನಡೆಯುತ್ತಿದೆ. ಅದೇ ರೀತಿ ಕೂಲಿಗಳು ತಮ್ಮ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಿದರೆ ತಪ್ಪೇನು? ಇದರಲ್ಲಿ ತಪ್ಪು ಹುಡುಕುವುದು ಏಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾಗಿದೆ.


ಇದನ್ನೂ ಓದಿ: ಶಾಸಕ ಪೂಂಜಾ ಆಪ್ತ ಮರಗಳ್ಳರ ಮೇಲೆ ಕ್ರಮಕೈಗೊಂಡ ಮಹಿಳಾ ಅರಣ್ಯಾಧಿಕಾರಿ ವರ್ಗಾವಣೆಗೆ ತಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. These beggars dosent have any better job to do. Spoiling and destroying people peace and creating voilence in the name of religion.police and the government should book and punish them severely.

  2. ರೈಲ್ ನಿಲ್ದಾಣದಲ್ಲಿ ಮಸೀದಿ ಹೇಗೆ ಸಾಧ್ಯ? ಮುಂದೆ ಪೂರ್ತಿ ನಿಲ್ದಾಣ ಮಸೀದಿ ವ್ಯಾಪ್ತಿಗೆ ಬರುತ್ತೆ ಅಂತ ಪಿಸ್ ಫುಲ್ ಗಳು ಕೋರ್ಟಿಗೆ ಹೋದರು ಹೋಗಬಹುದು.ಸರ್ಕಾರ ಎಚ್ಚೆತ್ತು ಮಂದಿರ ಮಸೀದಿ ಚರ್ಚ್ ಎಲ್ಲ ಕಿತ್ತು ಹಾಕಿ ಭಾರತದ ಸಂವಿಧಾನ ಕಾಪಾಡಬೇಕು.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...