Homeಮುಖಪುಟಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

- Advertisement -
- Advertisement -

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲ್ವೇ ಕೂಲಿಗಳ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ, ಇದು ಸರಿಯಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕೋಣೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಸೋಮವಾರ ವರದಿಯಾಗಿದೆ.

ಮಧುಗಿರಿ ಮೋದಿ ಮತ್ತು ಪುನೀತ್ ಕೆರೆಹಳ್ಳಿ ಎಂಬ ಹಿಂದುತ್ವ ಕಾರ್ಯಕರ್ತರು ರೈಲ್ವೆ ಕೂಲಿಗಳ ಕೋಣೆಗೆ ನುಗ್ಗಿ ಗಲಾಟೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ರೀತಿಯಾಗಿ ಅನಧಿಕೃತವಾಗಿ ಕೋಣೆಗೆ ನುಗ್ಗಿ ಗದ್ದಲವೆಬ್ಬಿಸಿ ಸೌಹಾರ್ಧತೆ ಕೆಡಿಸುತ್ತಿರುವ ಈ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸರ್ವ ಧರ್ಮೀಯರಿಗೂ ಪ್ರಾರ್ಥನೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಹಲವಾರು ಹಿಂದೂ ದೇವಾಲಯಗಳು ಮತ್ತು ಚರ್ಚ್ ಸಹ ನಿಲ್ದಾಣದಲ್ಲಿದೆ. ಈ ವಿಚಾರವನ್ನು ಸ್ವತಃ ರೈಲ್ವೇ ಅಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಕಳೆದ 35 ವರ್ಷಗಳಿಂದ ಎಲ್ಲರೂ ತಮ್ಮ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಪ್ರಾರ್ಥನೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಹಿಂದುತ್ವವಾದಿ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುವ ನಿಟ್ಟಿನಲ್ಲಿ ನಮಾಝ್ ಗೆ ಮೀಸಲಿರಿಸಿದ್ದ ಕೋಣೆಗೆ ದಾಳಿ ನಡೆಸಿ ಗೂಂಡಾಗಿರಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದು-ಮುಸ್ಲಿಮರ ನಡುವೆ ಒಡಕುಂಟು ಮಾಡಲು ಸಂಘಪರಿವಾರದ ಮತಾಂಧ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿವೆ. ಇದೀಗ ರೈಲ್ವೇ ನಿಲ್ದಾಣದಲ್ಲಿ ನಡೆದಿರುವ ಘಟನೆಯೂ ಸಂಘಪರಿವಾರದ ಹೀನ ಮನೋಸ್ಥಿತಿಯ ಭಾಗವಾಗಿದೆ. ಸಂಘಪರಿವಾರದ ದುಷ್ಕೃತ್ಯಗಳ ವಿರುದ್ಧ ಆಡಳಿತ ವ್ಯವಸ್ಥೆಯ ಮೃದು ಧೋರಣೆಯೂ ಇಂತಹ ಘಟನೆಗಳಿಗೆ ನೇರ ಕಾರಣವಾಗಿದೆ. ನಮಾಝ್ ಕೊಠಡಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಗೂಂಡಾಗಳ ವಿರುದ್ಧ ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಾಣವಾಗುತ್ತಿದೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ, ಅದು ಸಂಪೂರ್ಣ ಸುಳ್ಳು. ಇಲ್ಲಿ ಎಲ್ಲಾ ಧರ್ಮದ ಹಮಾಲಿ ಕೂಲಿಗಳು ಇದ್ದು ಅವರಿಗೆ ಕೆಲವು ಕೊಠಡಿಗಳನ್ನು ನೀಡಿದ್ದೇವೆ. ಅಲ್ಲಿ ಎಲ್ಲಾ ಧರ್ಮದ ಪೂಜೆಗೆ, ಪ್ರಾರ್ಥನೆಗೆ ಅವಕಾಶ ನೀಡಿದ್ದೇವೆ. ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಫ್ಲಾಟ್‌ಫಾರಂ ನಂಬರ್ 07 ರಲ್ಲಿ ಹಿಂದೂ ದೇವಾಲಯವಿದ್ದು ಅಲ್ಲಿ ಪೂಜೆಗಳು ನಡೆಯುತ್ತಿವೆ. ಹಾಗಾಗಿ ಇಲ್ಲಿ ಒಂದು ಧರ್ಮದ ಆಚರಣೆ ಮಾತ್ರ ನಡೆಯುತ್ತಿದೆ ಎಂಬುದು ಸುಳ್ಳು ಎಂದು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹಿಂದೂಜನಜಾಗೃತಿ ಸಮಿತಿಯ ಗೂಂಡಾಗಳು ಪ್ರಾರ್ಥನಾ ಸ್ಥಳಕ್ಕೆ ನುಗ್ಗಿ ದಾಂಧಲೆ ಮಾಡಿರುವುದು ಸರ್ಕಾರ ಸತ್ತು ಹೋಗಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಬೆಂಗಳೂರು ಪೊಲೀಸರು
ಕೂಡಲೇ ಗೂಂಡಾಗಳನ್ನು ಬಂಧಿಸಿ.‌ ಮುಖ್ಯಮಂತ್ರಿಗಳೆ, ಪದೇ ಪದೇ ನಡೆಯುತ್ತಿರುವ ಇಂತಹ ಗೂಂಡಾಗಿರಿಯನ್ನು ತಡೆಯಲಾಗದ ನಿಮ್ಮ ಆಡಳಿತಕ್ಕೆ ಧಿಕ್ಕಾರ ಎಂದು ದಲಿತ ಮುಖಂಡರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಮೂರು ಹಿಂದೂ ದೇವಾಲಯಗಳಿವೆ. ಅಲ್ಲಿ ಹಿಂದಿನಿಂದಲೂ ಪೂಜೆ ನಡೆದುಕೊಂಡು ಬಂದಿದೆ. ಚರ್ಚ್ ಇದ್ದು ಅಲ್ಲಿಯೂ ಪ್ರಾರ್ಥನೆ ನಡೆಯುತ್ತಿದೆ. ಅದೇ ರೀತಿ ಕೂಲಿಗಳು ತಮ್ಮ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಿದರೆ ತಪ್ಪೇನು? ಇದರಲ್ಲಿ ತಪ್ಪು ಹುಡುಕುವುದು ಏಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾಗಿದೆ.


ಇದನ್ನೂ ಓದಿ: ಶಾಸಕ ಪೂಂಜಾ ಆಪ್ತ ಮರಗಳ್ಳರ ಮೇಲೆ ಕ್ರಮಕೈಗೊಂಡ ಮಹಿಳಾ ಅರಣ್ಯಾಧಿಕಾರಿ ವರ್ಗಾವಣೆಗೆ ತಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. These beggars dosent have any better job to do. Spoiling and destroying people peace and creating voilence in the name of religion.police and the government should book and punish them severely.

  2. ರೈಲ್ ನಿಲ್ದಾಣದಲ್ಲಿ ಮಸೀದಿ ಹೇಗೆ ಸಾಧ್ಯ? ಮುಂದೆ ಪೂರ್ತಿ ನಿಲ್ದಾಣ ಮಸೀದಿ ವ್ಯಾಪ್ತಿಗೆ ಬರುತ್ತೆ ಅಂತ ಪಿಸ್ ಫುಲ್ ಗಳು ಕೋರ್ಟಿಗೆ ಹೋದರು ಹೋಗಬಹುದು.ಸರ್ಕಾರ ಎಚ್ಚೆತ್ತು ಮಂದಿರ ಮಸೀದಿ ಚರ್ಚ್ ಎಲ್ಲ ಕಿತ್ತು ಹಾಕಿ ಭಾರತದ ಸಂವಿಧಾನ ಕಾಪಾಡಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....