Homeಕರ್ನಾಟಕಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

- Advertisement -
- Advertisement -

ಬಲಪಂಥೀಯ ಸಂಘಟನೆಯಾಗಿರುವ ಹೆಚ್‌ಜೆಎಸ್‌‌ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಭೆಯೊಂದರಲ್ಲಿ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಭಾಷಣಗಾರರ ವಿರುದ್ದ ಕ್ರಮಕೈಗೊಳ್ಳುವಂತೆ ಸಂಜಯ ನಗರ ಪೊಲೀಸ್‌ ಠಾಣೆಗೆ ಮತ್ತು ಬೆಂಗಳೂರು ನಗರ ಕಮೀಷನರ್‌ಗೆ ದೂರು ಸಲ್ಲಿಸಲಾಗಿದೆ.

ಮೇ 8ರ ಭಾನುವಾರದಂದು ರಾಜಾಜಿ ನಗರದ ಬಿಬಿಎಂಪಿ ಕನ್ವೆಂಷ್ಷನ್ ಹಾಲ್‌‌ನಲ್ಲಿ ನಡೆದಿದ್ದ “ಹಿಂದೂ ರಾಷ್ಟ್ರ ಅಧಿವೇಶನ’’ದಲ್ಲಿ ದುಷ್ಕರ್ಮಿಗಳು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ವಿರುದ್ದ ದ್ವೇಷ ಭಾಷಣ ಮಾಡಿದ್ದರು. ಸಭೆಯಲ್ಲಿ ಮಾತನಾಡಿದ್ದ ಹೆಚ್‌ಜೆಎಸ್‌ ನಾಯಕ, “ಮುಸ್ಲಿಮರು ಕುಷ್ಠರೋಗಿಗಳು ಮತ್ತು ಕ್ರಿಶ್ಚಿಯನ್ನರು ಕ್ಯಾನ್ಸರ್‌” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಸ್ಲಿಮರು ಕುಷ್ಠರೋಗಿಗಳಾಗಿದ್ದು ಅವರು ಆಕ್ರಮಣ ಮಾಡುವುದು ಕಣ್ಣಿಗೆ ಕಾಣುತ್ತದೆ. ಕ್ರಿಶ್ಚಿಯನ್ನರು ಕ್ಯಾನ್ಸರ್‌ ಕಾಯಿಲೆ ಹರಡಿಸುವಂತವರು, ಅವರು ಒಳಗೊಳಗೆಯೆ ಕೆಲಸ ಮಾಡುತ್ತಾರೆ. ನಾವು ವೇದಾಂತವನ್ನು ಕೇಳಿಕೊಂಡು, ‘ಈಶ್ವರ ಅಲ್ಲಾ ತೇರೆ ನಾಮ್‌’ ಎಂದು ಹೇಳಿಕೊಂಡು, ಕೆಲಸಕ್ಕೆ ಬರದೇ ಇರುವ ಗಾಂಧಿ ತತ್ವವನ್ನು ಪಾಲಿಸಿಕೊಂಡು ಹೋದರೆ, ಹಿಂದೂ ಸಮಾಜ ಬಹಳ ಅಪಾಯಕ್ಕೆ ಸಿಕ್ಕಿಹಾಕಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ, ಈಗಾಗಲೆ ಎದುರಾಗಿದೆ” ಎಂದು ಹೇಳಿದ್ದನು.

ಇದೀಗ ಹೆಚ್‌ಜೆಎಸ್‌ ಕಾರ್ಯಕ್ರಮ ಆಯೋಜಕರ ವಿರುದ್ದ ಬೆಂಗಳೂರು ನಗರ ಕಮೀಷನರ್‌ ಮತ್ತು ಸಂಜಯನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲಾಗಿದೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ಗೆ ಸಿಲುಕಿ ಜೀವ ಕಳೆದುಕೊಂಡ ಬೆಂಗಳೂರು BJP ಮುಖಂಡ ಅನಂತರಾಜು: ಪೊಲೀಸ್‌‌

ದೂರಿನಲ್ಲಿ, “ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಹಲವಾರು ಭಾಷಣಗಾರರು, ಧರ್ಮದ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದು, ಸೌಹಾರ್ದತೆ ಹಾಳು ಮಾಡುವ ಕೃತ್ಯಗಳನ್ನು ಎಸಗಿದೆ” ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಾಗಾದರೆ ಹಿಂದೂಗಳೂ ವಿದೇಶಗಳಲ್ಲಿ ಕ್ಯಾನ್ಸರ್ ಪೀಡೆಯನ್ನು ಸೃಷ್ಟಿಸುತ್ತಾರೆಯೆ? ಅಲ್ಲಿ,ಇಲ್ಲಿ, ಎಲ್ಲೆಲ್ಲಿ ದೇವಸ್ಥಾನಗಳನ್ನು ಕಟ್ಟಿ ವಿದೇಶಿಯರನ್ನು ಆಕರ್ಷಿಸಿ ಧರ್ಮ ಪ್ರಸಾರ ಮಾಡುತ್ತಾರಲ್ಲಾ ಇದಕ್ಕೇನು ಹೇಳ್ತೀರಾ ಮಹಾಷಯರೇ??

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...