Homeಫ್ಯಾಕ್ಟ್‌ಚೆಕ್Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

ದೆಹಲಿಯ ಇಂದರ್‌ಲೋಕ್ ಪ್ರದೇಶದ ರಸ್ತೆಯಲ್ಲಿ ಕಳೆದ ಶುಕ್ರವಾರ (ಮಾ.8) ಜುಮಾ ನಮಾಝ್ ಮಾಡುತ್ತಿದ್ದ ವ್ಯಕ್ತಿಗೆ ಪೊಲೀಸ್ ಅಧಿಕಾರಿ ಬೂಟುಗಾಲಿನಿಂದ ಒದ್ದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಸ್ತುತ, ಆ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತೋಮರ್ ಅವರನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಅಧಿಕಾರಿ ನಮಾಝ್ ಮಾಡುತ್ತಿದ್ದ ವ್ಯಕ್ತಿಗೆ ಒದ್ದ ವಿಡಿಯೋ ವೈರಲ್ ಆದ ಬಳಿಕ, ಬಲ ಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋದಲ್ಲಿ ‘ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಬಂದಿರುವುದು ಸೆರೆಯಾಗಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ. ನಮಾಝ್‌ಗೆ ಬರುವಾಗ ಪುರುಷ ಬುರ್ಖಾ ಧರಿಸಿ ಬಂದದ್ದು ಯಾಕೆ? ಮುಸಲ್ಮಾನರು ಏನೋ ಮಾಡಲು ಸಂಚು ರೂಪಿಸಿದ್ದರು’ ಎಂಬರ್ಥದಲ್ಲಿ ಸುದ್ದಿ ಹಬ್ಬಿಸಲಾಗಿದೆ.

ಪತ್ರಕರ್ತ ಎಂದು ಹೇಳಿಕೊಂಡಿರುವ ‘Abhijit Majumder’ಎಂಬ ಎಕ್ಸ್‌ ಬಳಕೆದಾರ 30 ನಿಮಿಷದ ವಿಡಿಯೋದ 16ನೇ ಸೆಕೆಂಡ್‌ನಲ್ಲಿ ವ್ಯಕ್ತಿಯೊಬ್ಬ ಕಪ್ಪು ಬಟ್ಟೆ ಧರಿಸಿರುವುದು ಕಾಣುತ್ತಿದೆ. ಆ ವ್ಯಕ್ತಿ ಬುರ್ಖಾ ಧರಿಸಿ ಬಂದಿದ್ರಾ? ಆತ ಅಲ್ಲಿ ರಸ್ತೆಯಲ್ಲಿ ಏನು ಮಾಡುತ್ತಿದ್ದ ಎಂದು ಅನುಮಾನ ವ್ಯಕ್ತಪಡಿಸಿ ಪ್ರಶ್ನಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ, ‘Mr Sinha’ ಕೂಡ ವಿಡಿಯೋ ಹಂಚಿಕೊಂಡಿದ್ದು, “ಇದು ಅತ್ಯಂತ ಗಂಭೀರ ವಿಚಾರ. ಈ ಘಟನೆಯನ್ನು ಇನ್ನಷ್ಟು ಅನುಮಾನಾಸ್ಪದವಾಗಿಸಿದೆ. ಅಲ್ಲಿ ಬುರ್ಖಾ ತೊಟ್ಟ ವ್ಯಕ್ತಿ ಏನು ಮಾಡುತ್ತಿದ್ದ? ಈ ಬಗ್ಗೆ ಸೂಕ್ತ ತನಿಖೆಯ ಅಗತ್ಯವಿದೆ” ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಮತ್ತೊಂದು ಬಲಪಂಥೀಯ ಎಕ್ಸ್ ಖಾತೆ ‘MeghUpdates’ಕೂಡ ವಿಡಿಯೋ ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ಬುರ್ಖಾ ಹಾಕಿಕೊಂಡು ಬಂದಿದ್ದರು ಎಂದು ಪ್ರತಿಪಾದಿಸಿದೆ.

ಫ್ಯಾಕ್ಟ್‌ ಚೆಕ್ : ಪೊಲೀಸ್ ಅಧಿಕಾರಿ ನಮಾಝ್ ಮಾಡುತ್ತಿದ್ದ ವ್ಯಕ್ತಿಗೆ ಬೂಟುಗಾಲಿನಿಂದ ಒದ್ದ ಘಟನೆಗೆ ಸಂಬಂಧಿಸಿದಂತೆ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಮಗೆ ದೊರೆತ ವಿಡಿಯೋದಲ್ಲಿ ಕೂಡ ಬುರ್ಖಾ ಧರಿಸಿ ಬಂದಿದ್ದಾರೆ ಎನ್ನಲಾದ ವ್ಯಕ್ತಿ ಇದ್ದಾರೆ.

ಒಟ್ಟು 1 ನಿಮಿಷ 29 ಸೆಕೆಂಡ್‌ನ ವಿಡಿಯೋದಲ್ಲಿ 11 ನಿಮಿಷ ಆಗುವಾಗ ಕಪ್ಪು ಬಣ್ಣದ ಬಟ್ಟೆ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ ಆ ವ್ಯಕ್ತಿ ಕಪ್ಪು ಪ್ಯಾಂಟ್, ಕಡು ಕಪ್ಪು ಬಣ್ಣದ ಟೀ ಶರ್ಟ್ ಅಥವಾ ಹೂಡಿ ಮತ್ತು ತಲೆಯಲ್ಲಿ ಕಪ್ಪು ಬಣ್ಣದ ಟೋಪಿ ಧರಿಸಿರುವುದನ್ನು ಕಾಣಬಹುದು. ಅವರ ಕೈಯಲ್ಲಿ ಮತ್ತೊಂದು ಬಟ್ಟೆ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ.

ವಿಡಿಯೋದ 30 ನಿಮಿಷದಲ್ಲಿ ಆ ವ್ಯಕ್ತಿ ಕ್ಯಾಮರಾ ಕಡೆ ಬೆನ್ನು ಹಾಕಿ ಮತ್ತೊಬ್ಬರ ಜೊತೆ ಮಾತನಾಡಿದ್ದಾರೆ. ಈ ವೇಳೆ ಹೂಡಿಯ ಸ್ಕಲ್ಪ್ (ತಲೆ ಮುಚ್ಚುವ ಭಾಗ) ಕೂಡ ಕಾಣುತ್ತಿದೆ. ಹಾಗಾಗಿ, ಆ ವ್ಯಕ್ತಿ ಧರಿಸಿರುವುದು ಬುರ್ಖಾ ಅಲ್ಲ ಎಂಬುವುದು ಸ್ಪಷ್ಟ.

ವಿಡಿಯೋದಲ್ಲಿ ಕಾಣುವಂತೆ ರಸ್ತೆಯಲ್ಲಿ ನಮಾಝ್ ಮಾಡಲು ಬಂದ ಹೆಚ್ಚಿನ ಜನರು ನಮಾಝ್ ಮ್ಯಾಟ್ ಅಥವಾ ಮುಸಲ್ಲೆಯನ್ನು ತಂದಿದ್ದರು. ಅದೇ ರೀತಿ ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿ ಕೂಡ ಕೈಯಲ್ಲಿ ನಮಾಝ್ ಮ್ಯಾಟ್ ಹಿಡಿದಿರಬಹುದು. ಅಲ್ಲದೆ ಅವರು ಬುರ್ಖಾ ಧರಿಸಿ ಬಂದಿದ್ದಾರೆ ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋಣ್ ಸಿಕ್ಕಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...