Homeಕರ್ನಾಟಕಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

- Advertisement -
- Advertisement -

ಬಲಪಂಥೀಯ ಗುಂಪೊಂದು ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.

ನಿರ್ಮಲಾ ಇಂಗ್ಲಿಷ್ ಹೈಸ್ಕೂಲ್ ಮತ್ತು ಕಾಲೇಜಿನ ಮುಖ್ಯೋಪಾಧ್ಯಾಯಿನಿ ಪ್ರಕಾರ, ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸಿದ್ದಾಗ ಬಲಪಂಥೀಯ ಗುಂಪುಗಳ ಸದಸ್ಯರು ಬಲವಂತವಾಗಿ ಸಂಸ್ಥೆಯೊಳಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

“ನಾವು ಪ್ರತಿ ವರ್ಷ ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸುತ್ತಿದ್ದೇವೆ. ಆದರೆ ಕೊರೊನಾ ಪ್ರೇರಿತ ನಿರ್ಬಂಧಗಳಿಂದ ಅದನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ನಾವು ಸಣ್ಣ ಆಚರಣೆಯನ್ನು ಆಯೋಜಿಸಿದ್ದೆವು. ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಹಣ ಸಂಗ್ರಹಿಸಿ ಕೇಕ್ ಅನ್ನು ಆರ್ಡರ್ ಮಾಡಿದ್ದರು. ಇದಕ್ಕೆ ಪೋಷಕರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಮುಖ್ಯೋಪಾಧ್ಯಾಯಿನಿ ಕನಿಕಾ ಫ್ರಾನ್ಸಿಸ್ ಮೇರಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಶಾಲೆಯು “ಕ್ರಿಶ್ಚಿಯಾನಿಟಿಯನ್ನು ಬೋಧಿಸುತ್ತಿದೆ” ಮತ್ತು ಕ್ರಿಸ್‌ಮಸ್ ಅನ್ನು ಆಚರಿಸುತ್ತಿದೆ. ಆದರೆ ಹಿಂದೂ ಹಬ್ಬಗಳನ್ನು ಆಚರಿಸುತ್ತಿಲ್ಲ ಎಂದು ವಿದ್ಯಾರ್ಥಿಯೊಬ್ಬನ ಪೋಷಕರು ಬಲಪಂಥೀಯ ಗುಂಪುಗಳಿಗೆ ತಿಳಿಸಿದ್ದರು ಎನ್ನಲಾಗಿದೆ. ಇದರ ಇದರ ನಂತರ ಆಚರಣೆಯ ಬಗ್ಗೆ ತಿಳಿದ ಬಲಪಂಥೀಯ ಗುಂಪಿನ ಸದಸ್ಯರು ಸಂಸ್ಥೆಗೆ ನುಗ್ಗಿ ಶಾಲೆಯಲ್ಲಿನ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

ದೂರು ನೀಡಲು ನಿರ್ಧರಿಸಿದ ಶಾಲಾ ಆಡಳಿತ ಮಂಡಳಿ

“ಬಲಪಂಥೀಯ ಕಾರ್ಯಕರ್ತರು ನಮ್ಮೊಂದಿಗೆ ತೀವ್ರವಾದ ವಾಗ್ವಾದ ಮಾಡಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಸರಸ್ವತಿ ದೇವಿಯ ಫೋಟೋವನ್ನು ನೇತುಹಾಕಲು ಮತ್ತು ಶಾಲೆಯ ಆವರಣದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ನಮಗೆ ಆದೇಶಿಸಿದ್ದಾರೆ. ಜೊತೆಗೆ ನಾವು ಮತಾಂತರ ಮಾಡುತ್ತಿರುವುದಾಗಿ ನಮ್ಮ ವಿರುದ್ಧ ಆರೋಪಿಸಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ NDTV ಗೆ ತಿಳಿಸಿದ್ದಾರೆ.

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದ ನಂತರ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಇತ್ತೀಚಿನ ವಾರಗಳಲ್ಲಿ ಚರ್ಚ್‌ಗಳು ಸೇರಿದಂತೆ ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಬಿಜೆಪಿ ಬೆಂಬಲಿತ ಬಲಪಂಥೀಯ ಗುಂಪುಗಳ ಮೇಲೆ ಕರ್ನಾಟಕ ಸರ್ಕಾರವು ಸೌಮ್ಯವಾಗಿ ವರ್ತಿಸುತ್ತಿದೆ.

ಇದನ್ನೂ ಓದಿ:ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...