Homeಕರ್ನಾಟಕಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

- Advertisement -
- Advertisement -

ಬಲಪಂಥೀಯ ಗುಂಪೊಂದು ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.

ನಿರ್ಮಲಾ ಇಂಗ್ಲಿಷ್ ಹೈಸ್ಕೂಲ್ ಮತ್ತು ಕಾಲೇಜಿನ ಮುಖ್ಯೋಪಾಧ್ಯಾಯಿನಿ ಪ್ರಕಾರ, ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸಿದ್ದಾಗ ಬಲಪಂಥೀಯ ಗುಂಪುಗಳ ಸದಸ್ಯರು ಬಲವಂತವಾಗಿ ಸಂಸ್ಥೆಯೊಳಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

“ನಾವು ಪ್ರತಿ ವರ್ಷ ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸುತ್ತಿದ್ದೇವೆ. ಆದರೆ ಕೊರೊನಾ ಪ್ರೇರಿತ ನಿರ್ಬಂಧಗಳಿಂದ ಅದನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ನಾವು ಸಣ್ಣ ಆಚರಣೆಯನ್ನು ಆಯೋಜಿಸಿದ್ದೆವು. ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಹಣ ಸಂಗ್ರಹಿಸಿ ಕೇಕ್ ಅನ್ನು ಆರ್ಡರ್ ಮಾಡಿದ್ದರು. ಇದಕ್ಕೆ ಪೋಷಕರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಮುಖ್ಯೋಪಾಧ್ಯಾಯಿನಿ ಕನಿಕಾ ಫ್ರಾನ್ಸಿಸ್ ಮೇರಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಶಾಲೆಯು “ಕ್ರಿಶ್ಚಿಯಾನಿಟಿಯನ್ನು ಬೋಧಿಸುತ್ತಿದೆ” ಮತ್ತು ಕ್ರಿಸ್‌ಮಸ್ ಅನ್ನು ಆಚರಿಸುತ್ತಿದೆ. ಆದರೆ ಹಿಂದೂ ಹಬ್ಬಗಳನ್ನು ಆಚರಿಸುತ್ತಿಲ್ಲ ಎಂದು ವಿದ್ಯಾರ್ಥಿಯೊಬ್ಬನ ಪೋಷಕರು ಬಲಪಂಥೀಯ ಗುಂಪುಗಳಿಗೆ ತಿಳಿಸಿದ್ದರು ಎನ್ನಲಾಗಿದೆ. ಇದರ ಇದರ ನಂತರ ಆಚರಣೆಯ ಬಗ್ಗೆ ತಿಳಿದ ಬಲಪಂಥೀಯ ಗುಂಪಿನ ಸದಸ್ಯರು ಸಂಸ್ಥೆಗೆ ನುಗ್ಗಿ ಶಾಲೆಯಲ್ಲಿನ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

ದೂರು ನೀಡಲು ನಿರ್ಧರಿಸಿದ ಶಾಲಾ ಆಡಳಿತ ಮಂಡಳಿ

“ಬಲಪಂಥೀಯ ಕಾರ್ಯಕರ್ತರು ನಮ್ಮೊಂದಿಗೆ ತೀವ್ರವಾದ ವಾಗ್ವಾದ ಮಾಡಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಸರಸ್ವತಿ ದೇವಿಯ ಫೋಟೋವನ್ನು ನೇತುಹಾಕಲು ಮತ್ತು ಶಾಲೆಯ ಆವರಣದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ನಮಗೆ ಆದೇಶಿಸಿದ್ದಾರೆ. ಜೊತೆಗೆ ನಾವು ಮತಾಂತರ ಮಾಡುತ್ತಿರುವುದಾಗಿ ನಮ್ಮ ವಿರುದ್ಧ ಆರೋಪಿಸಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ NDTV ಗೆ ತಿಳಿಸಿದ್ದಾರೆ.

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದ ನಂತರ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಇತ್ತೀಚಿನ ವಾರಗಳಲ್ಲಿ ಚರ್ಚ್‌ಗಳು ಸೇರಿದಂತೆ ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಬಿಜೆಪಿ ಬೆಂಬಲಿತ ಬಲಪಂಥೀಯ ಗುಂಪುಗಳ ಮೇಲೆ ಕರ್ನಾಟಕ ಸರ್ಕಾರವು ಸೌಮ್ಯವಾಗಿ ವರ್ತಿಸುತ್ತಿದೆ.

ಇದನ್ನೂ ಓದಿ:ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...