Homeಕರ್ನಾಟಕಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

“ಕೋಮು ವಿಷಜಂತುಗಳು ಹೆಣ್ಣು ಮಕ್ಕಳ ಮೇಲಿನ ಗಂಭೀರ ಅತ್ಯಾಚಾರ ಪ್ರಕರಣಕ್ಕೂ ಧರ್ಮದ ಲೇಪನ ಹಚ್ಚಿರುವುದು ಈ ಸುದ್ದಿಯ ವಿಪರ್ಯಾಸ ಮತ್ತು ಅತ್ಯಂತ ಬೇಸರದ ಸಂಗತಿ”.

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿ ಕೊಲೆಗೈದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ಘಟನೆ ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ, ಪ್ರವಾಸಿಗರ ಸುರಕ್ಷತೆ, ಯುವಕರು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ಇತ್ಯಾದಿ ವಿಚಾರಗಳ ಕುರಿತು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಭಾನುವಾರ (ಮಾ.9) ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಇಸ್ರೇಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆಯನ್ನು ಉಲ್ಲೇಖಿಸಿ, ಇಸ್ರೇಲ್-ಹಮಾಸ್ ಯುದ್ಧ, ಪ್ಯಾಲೆಸ್ತೀನಿಯರು, ಭಾರತೀಯ ಮುಸ್ಲಿಮರು, ಹೀಗೆ ಎಲ್ಲೆಲ್ಲಿಗೂ ಸಂಬಂಧ ಕಲ್ಪಿಸಿ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಪ್ರತಿಯೊಂದು ವಿಷಯಗಳನ್ನು ಕೋಮು ಆಯಾಮದಿಂದ ಮಾತ್ರ ನೋಡುತ್ತಾ, ಮುಸ್ಲಿಮರನ್ನು ಅಪರಾಧಿ, ದೇಶದ್ರೋಹಿ ಸ್ಥಾನಗಳಲ್ಲಿ ನಿಲ್ಲಿಸುವ ಚಾಳಿ ಹೊಂದಿರುವ ಬಲಪಂಥೀಯ ಸಾಮಾಜಿಕಜಾಲತಾಣ ಬಳಕೆದಾರ ಮಿ. ಸಿನ್ಹಾ (@MrSinha_)ಕೊಪ್ಪಳದ ಘಟನೆ ಸಂಬಂಧ ಮಾರ್ಚ್ 8ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ “ಕರ್ನಾಟಕ: ಇಸ್ರೇಲಿ ಪ್ರವಾಸಿ ಮತ್ತು ಒಡಿಶಾದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಇತರ ಮೂವರು ಪುರುಷ ಜೊತೆಗಾರರ ಮೇಲೆ ಹಲ್ಲೆ ನಡೆಸಲಾಗಿದೆ. ಅವರಲ್ಲಿ ಒಬ್ಬನ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದೆ. ಇಸ್ರೇಲಿ ಪ್ರಜೆಯೊಬ್ಬರು ಇದರಲ್ಲಿ ಬಲಿಪಶು ಆಗಿರುವುದರಿಂದ ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸುವಂತಿಲ್ಲ.ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಈ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದ. ತನ್ನ ಪೋಸ್ಟ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ.

ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ” ಎಂದು ಉಲ್ಲೇಖಿಸುವ ಮೂಲಕ ಮಿ.ಸಿನ್ಹಾ ಅತ್ಯಾಚಾರ ಪ್ರಕರಣವನ್ನು ಇಲ್ಲಿನ ಮುಸ್ಲಿಮರ ತಲೆಗೆ ಕಟ್ಟುವಂತಹ ನೀಚ ಪ್ರಯತ್ನ ಮಾಡಿದ್ದಾನೆ.

ಈತನ ಪೋಸ್ಟ್‌ಗೆ ಕಾಮೆಂಟ್ ಹಾಕಿರುವ ಅನೇಕ ಜನರಲ್ಲಿ ಕೆಲವರು ನೇರವಾಗಿ, ಇನ್ನೂ ಕೆಲವರು ಪರೋಕ್ಷವಾಗಿ ಅತ್ಯಾಚಾರ ಪ್ರಕರಣಕ್ಕೆ ಮುಸ್ಲಿಮರೊಂದಿಗೆ ಸಂಬಂಧ ಕಲ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವುಗಳಲ್ಲಿ ಕೆಲವನ್ನು ಕೆಳಗೆ ಸ್ಕ್ರೀನ್ ಶಾಟ್ ಹಾಕಲಾಗಿದೆ.

ಮೇಲೆ ಕಾಮೆಂಟ್ ಹಾಕಿರುವ ವ್ಯಕ್ತಿಗಳಿಗೆ ಕೊಪ್ಪಳದ ಘಟನೆಯ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಅಥವಾ ಗೊತ್ತಿದ್ದರೂ ಒಂದು ಸಮುದಾಯದವರನ್ನು ಎಳೆದು ತರುತ್ತಿದ್ದಾರೋ ಗೊತ್ತಿಲ್ಲ. ಆದರೆ, ಪೋಸ್ಟ್ ಹಾಕಿರುವ ಮಿ.ಸಿನ್ಹಾಗೆ ಪ್ರಕರಣದ ಬಗ್ಗೆ ಖಂಡಿತವಾಗಿಯೂ ಮಾಹಿತಿ ಇರುತ್ತದೆ. ಆದರೆ, ಆತನಿಗೆ ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹರಡುವುದೇ ಕಾಯಕ.

ಕೊಪ್ಪಳದ ಘಟನೆಯ ಸತ್ಯಾಂಶವೇನು?

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ತುಂಗಾಭದ್ರಾ ನದಿಯ ಕಾಲುವೆಯ ಪಕ್ಕದ ರಸ್ತೆಯಲ್ಲಿ ಪ್ರವಾಸಿಗರು ರಾತ್ರಿ ಹೊತ್ತು ಕುಳಿತು ನಕ್ಷತ್ರಗಳನ್ನು ನೋಡುತ್ತಾ ಪ್ರಕೃತಿ ಆಸ್ವಾದಿಸುವುದು ಸಾಮಾನ್ಯ ಚಟುವಟಿಕೆ.

ಹಂಪಿ ಪ್ರವಾಸಕ್ಕೆ ಬರುವ ವಿದೇಶಿ ಪ್ರಜೆಗಳು ಹೆಚ್ಚಾಗಿ ಸ್ಥಳೀಯ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡು ರಾತ್ರಿ ಹೊತ್ತು ನಕ್ಷತ್ರ ನೋಡಲು ತೆರಳುತ್ತಾರೆ. ಹೀಗೆ ಕಳೆದ ಗುರುವಾರ (ಮಾ.6) ರಂದು ಇಸ್ರೇಲ್‌ ಯುವತಿ ಮತ್ತು ಒಡಿಶಾದ ಯುವಕ ಸ್ಥಳೀಯ ಹೋಂ ಸ್ಟೇಯೊಂದರ ಒಡತಿ ಜೊತೆ ರಾತ್ರಿ ಕುಳಿತು ಗಿಟಾರ್‌ ಬಾರಿಸುತ್ತಿದ್ದರು.

ಈ ವೇಳೆ ಅಲ್ಲಿಗೆ ಬೈಕ್‌ ಮೇಲೆ ಬಂದ ಮೂವರು ದುಷ್ಕರ್ಮಿಗಳು ಮೊದಲು ಹಣದ ಬೇಡಿಕೆಯಿಟ್ಟಿದ್ದರು. ಹಣ ನೀಡದ ಕಾರಣಕ್ಕೆ ಜಗಳವಾಗಿದ್ದು ಒಡಿಶಾದ 27ವರ್ಷದ ಯುವಕ ಬಿಬಾಶ್‌ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿದ್ದಾರೆ. ಇಬ್ಬರು ಯವತಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಗಂಗಾವತಿಯ ಮಲ್ಲೇಶ ದಾಸರ ಮತ್ತು ಚೇತನಸಾಯಿ ಕಾಮೇಶ್ವರ ರಾವ್ ಎಂಬ ಆರೋಪಿಗಳನ್ನು ಆರಂಭದಲ್ಲಿ ಬಂಧಿಸಿದ್ದರು. ಭಾನುವಾರ ಮೂರನೇ ಆರೋಪಿ ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಎಂಬಾತನನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಂಧಿತ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು. “ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...