Homeಕರ್ನಾಟಕಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

“ಕೋಮು ವಿಷಜಂತುಗಳು ಹೆಣ್ಣು ಮಕ್ಕಳ ಮೇಲಿನ ಗಂಭೀರ ಅತ್ಯಾಚಾರ ಪ್ರಕರಣಕ್ಕೂ ಧರ್ಮದ ಲೇಪನ ಹಚ್ಚಿರುವುದು ಈ ಸುದ್ದಿಯ ವಿಪರ್ಯಾಸ ಮತ್ತು ಅತ್ಯಂತ ಬೇಸರದ ಸಂಗತಿ”.

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿ ಕೊಲೆಗೈದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ಘಟನೆ ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ, ಪ್ರವಾಸಿಗರ ಸುರಕ್ಷತೆ, ಯುವಕರು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ಇತ್ಯಾದಿ ವಿಚಾರಗಳ ಕುರಿತು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಭಾನುವಾರ (ಮಾ.9) ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಇಸ್ರೇಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆಯನ್ನು ಉಲ್ಲೇಖಿಸಿ, ಇಸ್ರೇಲ್-ಹಮಾಸ್ ಯುದ್ಧ, ಪ್ಯಾಲೆಸ್ತೀನಿಯರು, ಭಾರತೀಯ ಮುಸ್ಲಿಮರು, ಹೀಗೆ ಎಲ್ಲೆಲ್ಲಿಗೂ ಸಂಬಂಧ ಕಲ್ಪಿಸಿ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಪ್ರತಿಯೊಂದು ವಿಷಯಗಳನ್ನು ಕೋಮು ಆಯಾಮದಿಂದ ಮಾತ್ರ ನೋಡುತ್ತಾ, ಮುಸ್ಲಿಮರನ್ನು ಅಪರಾಧಿ, ದೇಶದ್ರೋಹಿ ಸ್ಥಾನಗಳಲ್ಲಿ ನಿಲ್ಲಿಸುವ ಚಾಳಿ ಹೊಂದಿರುವ ಬಲಪಂಥೀಯ ಸಾಮಾಜಿಕಜಾಲತಾಣ ಬಳಕೆದಾರ ಮಿ. ಸಿನ್ಹಾ (@MrSinha_)ಕೊಪ್ಪಳದ ಘಟನೆ ಸಂಬಂಧ ಮಾರ್ಚ್ 8ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ “ಕರ್ನಾಟಕ: ಇಸ್ರೇಲಿ ಪ್ರವಾಸಿ ಮತ್ತು ಒಡಿಶಾದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಇತರ ಮೂವರು ಪುರುಷ ಜೊತೆಗಾರರ ಮೇಲೆ ಹಲ್ಲೆ ನಡೆಸಲಾಗಿದೆ. ಅವರಲ್ಲಿ ಒಬ್ಬನ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದೆ. ಇಸ್ರೇಲಿ ಪ್ರಜೆಯೊಬ್ಬರು ಇದರಲ್ಲಿ ಬಲಿಪಶು ಆಗಿರುವುದರಿಂದ ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸುವಂತಿಲ್ಲ.ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಈ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದ. ತನ್ನ ಪೋಸ್ಟ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ.

ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ” ಎಂದು ಉಲ್ಲೇಖಿಸುವ ಮೂಲಕ ಮಿ.ಸಿನ್ಹಾ ಅತ್ಯಾಚಾರ ಪ್ರಕರಣವನ್ನು ಇಲ್ಲಿನ ಮುಸ್ಲಿಮರ ತಲೆಗೆ ಕಟ್ಟುವಂತಹ ನೀಚ ಪ್ರಯತ್ನ ಮಾಡಿದ್ದಾನೆ.

ಈತನ ಪೋಸ್ಟ್‌ಗೆ ಕಾಮೆಂಟ್ ಹಾಕಿರುವ ಅನೇಕ ಜನರಲ್ಲಿ ಕೆಲವರು ನೇರವಾಗಿ, ಇನ್ನೂ ಕೆಲವರು ಪರೋಕ್ಷವಾಗಿ ಅತ್ಯಾಚಾರ ಪ್ರಕರಣಕ್ಕೆ ಮುಸ್ಲಿಮರೊಂದಿಗೆ ಸಂಬಂಧ ಕಲ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವುಗಳಲ್ಲಿ ಕೆಲವನ್ನು ಕೆಳಗೆ ಸ್ಕ್ರೀನ್ ಶಾಟ್ ಹಾಕಲಾಗಿದೆ.

ಮೇಲೆ ಕಾಮೆಂಟ್ ಹಾಕಿರುವ ವ್ಯಕ್ತಿಗಳಿಗೆ ಕೊಪ್ಪಳದ ಘಟನೆಯ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಅಥವಾ ಗೊತ್ತಿದ್ದರೂ ಒಂದು ಸಮುದಾಯದವರನ್ನು ಎಳೆದು ತರುತ್ತಿದ್ದಾರೋ ಗೊತ್ತಿಲ್ಲ. ಆದರೆ, ಪೋಸ್ಟ್ ಹಾಕಿರುವ ಮಿ.ಸಿನ್ಹಾಗೆ ಪ್ರಕರಣದ ಬಗ್ಗೆ ಖಂಡಿತವಾಗಿಯೂ ಮಾಹಿತಿ ಇರುತ್ತದೆ. ಆದರೆ, ಆತನಿಗೆ ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹರಡುವುದೇ ಕಾಯಕ.

ಕೊಪ್ಪಳದ ಘಟನೆಯ ಸತ್ಯಾಂಶವೇನು?

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ತುಂಗಾಭದ್ರಾ ನದಿಯ ಕಾಲುವೆಯ ಪಕ್ಕದ ರಸ್ತೆಯಲ್ಲಿ ಪ್ರವಾಸಿಗರು ರಾತ್ರಿ ಹೊತ್ತು ಕುಳಿತು ನಕ್ಷತ್ರಗಳನ್ನು ನೋಡುತ್ತಾ ಪ್ರಕೃತಿ ಆಸ್ವಾದಿಸುವುದು ಸಾಮಾನ್ಯ ಚಟುವಟಿಕೆ.

ಹಂಪಿ ಪ್ರವಾಸಕ್ಕೆ ಬರುವ ವಿದೇಶಿ ಪ್ರಜೆಗಳು ಹೆಚ್ಚಾಗಿ ಸ್ಥಳೀಯ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡು ರಾತ್ರಿ ಹೊತ್ತು ನಕ್ಷತ್ರ ನೋಡಲು ತೆರಳುತ್ತಾರೆ. ಹೀಗೆ ಕಳೆದ ಗುರುವಾರ (ಮಾ.6) ರಂದು ಇಸ್ರೇಲ್‌ ಯುವತಿ ಮತ್ತು ಒಡಿಶಾದ ಯುವಕ ಸ್ಥಳೀಯ ಹೋಂ ಸ್ಟೇಯೊಂದರ ಒಡತಿ ಜೊತೆ ರಾತ್ರಿ ಕುಳಿತು ಗಿಟಾರ್‌ ಬಾರಿಸುತ್ತಿದ್ದರು.

ಈ ವೇಳೆ ಅಲ್ಲಿಗೆ ಬೈಕ್‌ ಮೇಲೆ ಬಂದ ಮೂವರು ದುಷ್ಕರ್ಮಿಗಳು ಮೊದಲು ಹಣದ ಬೇಡಿಕೆಯಿಟ್ಟಿದ್ದರು. ಹಣ ನೀಡದ ಕಾರಣಕ್ಕೆ ಜಗಳವಾಗಿದ್ದು ಒಡಿಶಾದ 27ವರ್ಷದ ಯುವಕ ಬಿಬಾಶ್‌ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿದ್ದಾರೆ. ಇಬ್ಬರು ಯವತಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಗಂಗಾವತಿಯ ಮಲ್ಲೇಶ ದಾಸರ ಮತ್ತು ಚೇತನಸಾಯಿ ಕಾಮೇಶ್ವರ ರಾವ್ ಎಂಬ ಆರೋಪಿಗಳನ್ನು ಆರಂಭದಲ್ಲಿ ಬಂಧಿಸಿದ್ದರು. ಭಾನುವಾರ ಮೂರನೇ ಆರೋಪಿ ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಎಂಬಾತನನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಂಧಿತ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು. “ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...