Homeಕರ್ನಾಟಕಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

“ಕೋಮು ವಿಷಜಂತುಗಳು ಹೆಣ್ಣು ಮಕ್ಕಳ ಮೇಲಿನ ಗಂಭೀರ ಅತ್ಯಾಚಾರ ಪ್ರಕರಣಕ್ಕೂ ಧರ್ಮದ ಲೇಪನ ಹಚ್ಚಿರುವುದು ಈ ಸುದ್ದಿಯ ವಿಪರ್ಯಾಸ ಮತ್ತು ಅತ್ಯಂತ ಬೇಸರದ ಸಂಗತಿ”.

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿ ಕೊಲೆಗೈದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ಘಟನೆ ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ, ಪ್ರವಾಸಿಗರ ಸುರಕ್ಷತೆ, ಯುವಕರು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ಇತ್ಯಾದಿ ವಿಚಾರಗಳ ಕುರಿತು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಭಾನುವಾರ (ಮಾ.9) ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಇಸ್ರೇಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆಯನ್ನು ಉಲ್ಲೇಖಿಸಿ, ಇಸ್ರೇಲ್-ಹಮಾಸ್ ಯುದ್ಧ, ಪ್ಯಾಲೆಸ್ತೀನಿಯರು, ಭಾರತೀಯ ಮುಸ್ಲಿಮರು, ಹೀಗೆ ಎಲ್ಲೆಲ್ಲಿಗೂ ಸಂಬಂಧ ಕಲ್ಪಿಸಿ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಪ್ರತಿಯೊಂದು ವಿಷಯಗಳನ್ನು ಕೋಮು ಆಯಾಮದಿಂದ ಮಾತ್ರ ನೋಡುತ್ತಾ, ಮುಸ್ಲಿಮರನ್ನು ಅಪರಾಧಿ, ದೇಶದ್ರೋಹಿ ಸ್ಥಾನಗಳಲ್ಲಿ ನಿಲ್ಲಿಸುವ ಚಾಳಿ ಹೊಂದಿರುವ ಬಲಪಂಥೀಯ ಸಾಮಾಜಿಕಜಾಲತಾಣ ಬಳಕೆದಾರ ಮಿ. ಸಿನ್ಹಾ (@MrSinha_)ಕೊಪ್ಪಳದ ಘಟನೆ ಸಂಬಂಧ ಮಾರ್ಚ್ 8ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ “ಕರ್ನಾಟಕ: ಇಸ್ರೇಲಿ ಪ್ರವಾಸಿ ಮತ್ತು ಒಡಿಶಾದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಇತರ ಮೂವರು ಪುರುಷ ಜೊತೆಗಾರರ ಮೇಲೆ ಹಲ್ಲೆ ನಡೆಸಲಾಗಿದೆ. ಅವರಲ್ಲಿ ಒಬ್ಬನ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದೆ. ಇಸ್ರೇಲಿ ಪ್ರಜೆಯೊಬ್ಬರು ಇದರಲ್ಲಿ ಬಲಿಪಶು ಆಗಿರುವುದರಿಂದ ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸುವಂತಿಲ್ಲ.ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಈ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದ. ತನ್ನ ಪೋಸ್ಟ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ.

ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ” ಎಂದು ಉಲ್ಲೇಖಿಸುವ ಮೂಲಕ ಮಿ.ಸಿನ್ಹಾ ಅತ್ಯಾಚಾರ ಪ್ರಕರಣವನ್ನು ಇಲ್ಲಿನ ಮುಸ್ಲಿಮರ ತಲೆಗೆ ಕಟ್ಟುವಂತಹ ನೀಚ ಪ್ರಯತ್ನ ಮಾಡಿದ್ದಾನೆ.

ಈತನ ಪೋಸ್ಟ್‌ಗೆ ಕಾಮೆಂಟ್ ಹಾಕಿರುವ ಅನೇಕ ಜನರಲ್ಲಿ ಕೆಲವರು ನೇರವಾಗಿ, ಇನ್ನೂ ಕೆಲವರು ಪರೋಕ್ಷವಾಗಿ ಅತ್ಯಾಚಾರ ಪ್ರಕರಣಕ್ಕೆ ಮುಸ್ಲಿಮರೊಂದಿಗೆ ಸಂಬಂಧ ಕಲ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವುಗಳಲ್ಲಿ ಕೆಲವನ್ನು ಕೆಳಗೆ ಸ್ಕ್ರೀನ್ ಶಾಟ್ ಹಾಕಲಾಗಿದೆ.

ಮೇಲೆ ಕಾಮೆಂಟ್ ಹಾಕಿರುವ ವ್ಯಕ್ತಿಗಳಿಗೆ ಕೊಪ್ಪಳದ ಘಟನೆಯ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಅಥವಾ ಗೊತ್ತಿದ್ದರೂ ಒಂದು ಸಮುದಾಯದವರನ್ನು ಎಳೆದು ತರುತ್ತಿದ್ದಾರೋ ಗೊತ್ತಿಲ್ಲ. ಆದರೆ, ಪೋಸ್ಟ್ ಹಾಕಿರುವ ಮಿ.ಸಿನ್ಹಾಗೆ ಪ್ರಕರಣದ ಬಗ್ಗೆ ಖಂಡಿತವಾಗಿಯೂ ಮಾಹಿತಿ ಇರುತ್ತದೆ. ಆದರೆ, ಆತನಿಗೆ ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹರಡುವುದೇ ಕಾಯಕ.

ಕೊಪ್ಪಳದ ಘಟನೆಯ ಸತ್ಯಾಂಶವೇನು?

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ತುಂಗಾಭದ್ರಾ ನದಿಯ ಕಾಲುವೆಯ ಪಕ್ಕದ ರಸ್ತೆಯಲ್ಲಿ ಪ್ರವಾಸಿಗರು ರಾತ್ರಿ ಹೊತ್ತು ಕುಳಿತು ನಕ್ಷತ್ರಗಳನ್ನು ನೋಡುತ್ತಾ ಪ್ರಕೃತಿ ಆಸ್ವಾದಿಸುವುದು ಸಾಮಾನ್ಯ ಚಟುವಟಿಕೆ.

ಹಂಪಿ ಪ್ರವಾಸಕ್ಕೆ ಬರುವ ವಿದೇಶಿ ಪ್ರಜೆಗಳು ಹೆಚ್ಚಾಗಿ ಸ್ಥಳೀಯ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡು ರಾತ್ರಿ ಹೊತ್ತು ನಕ್ಷತ್ರ ನೋಡಲು ತೆರಳುತ್ತಾರೆ. ಹೀಗೆ ಕಳೆದ ಗುರುವಾರ (ಮಾ.6) ರಂದು ಇಸ್ರೇಲ್‌ ಯುವತಿ ಮತ್ತು ಒಡಿಶಾದ ಯುವಕ ಸ್ಥಳೀಯ ಹೋಂ ಸ್ಟೇಯೊಂದರ ಒಡತಿ ಜೊತೆ ರಾತ್ರಿ ಕುಳಿತು ಗಿಟಾರ್‌ ಬಾರಿಸುತ್ತಿದ್ದರು.

ಈ ವೇಳೆ ಅಲ್ಲಿಗೆ ಬೈಕ್‌ ಮೇಲೆ ಬಂದ ಮೂವರು ದುಷ್ಕರ್ಮಿಗಳು ಮೊದಲು ಹಣದ ಬೇಡಿಕೆಯಿಟ್ಟಿದ್ದರು. ಹಣ ನೀಡದ ಕಾರಣಕ್ಕೆ ಜಗಳವಾಗಿದ್ದು ಒಡಿಶಾದ 27ವರ್ಷದ ಯುವಕ ಬಿಬಾಶ್‌ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿದ್ದಾರೆ. ಇಬ್ಬರು ಯವತಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಗಂಗಾವತಿಯ ಮಲ್ಲೇಶ ದಾಸರ ಮತ್ತು ಚೇತನಸಾಯಿ ಕಾಮೇಶ್ವರ ರಾವ್ ಎಂಬ ಆರೋಪಿಗಳನ್ನು ಆರಂಭದಲ್ಲಿ ಬಂಧಿಸಿದ್ದರು. ಭಾನುವಾರ ಮೂರನೇ ಆರೋಪಿ ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಎಂಬಾತನನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಂಧಿತ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು. “ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...